ಬೆಂ-ಮೈ ಹೆದ್ದಾರಿ | ದಂಪತಿಯಿಂದ ಹಣ ದೋಚಿದ ನಕಲಿ ಪೊಲೀಸರು

Date:

ಒಂದೆರೆಡು ತಿಂಗಳ ಹಿಂದೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೊಡಗಿನ ವ್ಯಕ್ತಿಯೊಬ್ಬರು ದರೋಡೆಗೆ ಒಳಗಾಗಿ ಚಿನ್ನದ ಸರವನ್ನು ಕಳೆದುಕೊಂಡ ಪ್ರಕರಣ ಇನ್ನೂ ಕಣ್ಣಮುಂದೆ ಇರುವಾಗಲೇ ಮತ್ತೊಂದು ದರೋಡೆ ಕೃತ್ಯ ಇದೇ ಹೆದ್ದಾರಿಯಲ್ಲಿ ನಡೆದಿದೆ.

ಪೊಲೀಸರ ಸೋಗಿನಲ್ಲಿ ಬಂದ ದರೋಡೆಕೋರರಿಬ್ಬರು ಕೊಡಗಿನ ದಂಪತಿಯನ್ನು ಸುಲಿಗೆ ಮಾಡಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿಯ ವರ್ತಕ ಚಲನ್ ಹಾಗೂ ಅವರ ಪತ್ನಿ ಸೋಮವಾರ ಮುಂಜಾನೆ ಬೆಂಗಳೂರಿನಿಂದ ಕಾರಿನಲ್ಲಿ ಹಿಂತಿರುಗಿ ಬರುತ್ತಿದ್ದಾಗ ಶ್ರೀರಂಗಪಟ್ಟಣದ ಗಂಜಮ್ ಬಳಿ ನಂಬರ್ ಪ್ಲೇಟ್ ಇಲ್ಲದ ಸ್ಕೂಟಿಯಲ್ಲಿ ಪೊಲೀಸರ ಸೋಗಿನಲ್ಲಿದ್ದ ದರೋಡೆಕೊರರಿಬ್ಬರು ವಾಹನ ತಡೆದು ನಿಲ್ಲಿಸಿದ್ದಾರೆ.

ತಾವು ಪೊಲೀಸರೆಂದು ಹೇಳಿಕೊಂಡ ಇವರ ಪೈಕಿ ಓರ್ವ ಡ್ರೈವರ್ ಸೀಟ್‌ನಲ್ಲಿ ಕುಳಿತಿದ್ದ ಚಲನ್ ಅವರನ್ನು ಪಕ್ಕಕ್ಕೆ ಸರಿಸಿ ತಾನೇ ಕುಳಿತುಕೊಂಡಿದ್ದಾನೆ. ನಂತರ ದಾಖಲಾತಿಗಳನ್ನು ಪರಿಶೀಲನೆ ಮಾಡುವ ನಾಟಕ ವಾಡಿದ್ದಾನೆ. ಈ ಸಂದರ್ಭದಲ್ಲಿ ಮತ್ತೋರ್ವ ತಲ್ವಾರ್ ತೋರಿಸಿ ಚಿನ್ನ ಹಣವನ್ನೆಲ್ಲ ಕೊಡುವಂತೆ ಬೆದರಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ಥಳಿಸಿದ ರೌಡಿಶೀಟರ್‌; 10 ಮಂದಿಯಿಂದ ಮನೆಗೆ ದಾಳಿ

ಇವರಿಬ್ಬರು 30 ಗ್ರಾಂ ತೂಕ ಹಾಗೂ 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಅಪಹರಿಸಿ, ಚಲನ್ ಅವರ ಪತ್ನಿಯ ಕೊರಳಲ್ಲಿದ್ದ ತಾಳಿಯನ್ನು ಬಿಚ್ಚಿಕೊಡುವಂತೆ ತಾಕೀತು ಮಾಡಿದ್ದಾರೆ. ಆದರೆ ತಾಳಿ ಕೊಡಲು ಸುತರಾಮ್ ಒಪ್ಪದ ಚಲನ್ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಪಾರಾಗಿದ್ದಾರೆ. ಈ ಸಂಬಂಧ ದರೋಡೆಗೊಳಗಾದ ದಂಪತಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...