ಕೆಎಂ ದೊಡ್ಡಿಯಲ್ಲಿ ಹಿಂದಿ-ಇಂಗ್ಲಿಷ್ ಹೇರಿಕೆ; SBI ಬ್ಯಾಂಕ್‌ನಲ್ಲಿ ಕನ್ನಡ ಸೇವೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Date:

​ಮದ್ದೂರು ತಾಲೂಕಿನ ಕೆಎಂ ದೊಡ್ಡಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿರುವ ಚಲನ್‌ಗಳಿಂದ ಗ್ರಾಮೀಣ ಜನರಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿದ ಕಾರ್ಯಕರ್ತರು, ತಕ್ಷಣವೇ ಕನ್ನಡದಲ್ಲಿ ಸೇವೆ ಒದಗಿಸುವಂತೆ ಪಟ್ಟು ಹಿಡಿದರು. ​​ಕರವೇ ಮದ್ದೂರು ತಾಲೂಕು ಘಟಕದ ಅಧ್ಯಕ್ಷ ಮಣಿಗರೆರ ರಾಮಚಂದ್ರಗೌಡ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಬ್ಯಾಂಕಿನ ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಬ್ಯಾಂಕಿನಲ್ಲಿ ಹಣ ಜಮೆ ಮಾಡುವ ಮತ್ತು ಹಿಂಪಡೆಯುವ ಚಲನ್‌ಗಳು, ಸಾಲದ ಅರ್ಜಿಗಳು ಸೇರಿದಂತೆ ಯಾವುದೇ ಮುದ್ರಿತ ನಮೂನೆಗಳು ಕನ್ನಡದಲ್ಲಿ ಲಭ್ಯವಿಲ್ಲ. ಜೊತೆಗೆ ಮುಂಚೂಣಿ ಸಿಬ್ಬಂದಿಗೂ ಕನ್ನಡ ಬಾರದಿರುವುದರಿಂದ ಸ್ಥಳೀಯ ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ತಮ್ಮ ತಾಯಿ ನುಡಿಯಲ್ಲಿ ಸೇವೆ ಸಿಗದೆ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಾರ್ಗಸೂಚಿಗಳ ಪ್ರಕಾರ ಕಡ್ಡಾಯವಾಗಿ ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್ ಸೇವೆ ಒದಗಿಸಬೇಕು. ಆದರೆ ಈ ನಿಯಮವನ್ನು ಗಾಳಿಗೆ ತೂರಲಾಗಿದೆ ಎಂದು ಸಂಘಟನೆ ಆರೋಪಿಸಿತು. ಕೂಡಲೇ ಎಲ್ಲಾ ಚಲನ್‌ಗಳು, ಅರ್ಜಿಗಳು ಹಾಗೂ ಮಾಹಿತಿ ಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಶಾಖಾ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಬ್ಯಾಂಕ್ ಶಾಖಾ ವ್ಯವಸ್ಥಾಪಕರು, “ಒಂದು ವಾರದೊಳಗೆ ಎಲ್ಲಾ ಚಲನ್‌ಗಳನ್ನು ಕನ್ನಡದಲ್ಲಿ ಮುದ್ರಣ ಮಾಡಿಸಲಾಗುವುದು. ಹಾಗೂ, ಕ್ರಮೇಣ ಇತರೆ ಮುದ್ರಿತ ನಮೂನೆಗಳನ್ನೂ ಕನ್ನಡದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಮಂಡ್ಯ | ಅತಿಯಾದ ಮೊಬೈಲ್ ಬಳಕೆ ಅನಾರೋಗ್ಯಗಳಿಗೆ ರಹದಾರಿ: ಡಾ ನಿಶ್ಚಲಾನಂದ ಸ್ವಾಮೀಜಿ

​ಒಂದು ವೇಳೆ ನೀಡಿದ ಭರವಸೆಯಂತೆ ಬ್ಯಾಂಕ್ ಆಡಳಿತ ಮಂಡಳಿ ಕ್ರಮ ಜರುಗಿಸದಿದ್ದರೆ, ಮುಂದಿನ ದಿನಗಳಲ್ಲಿ ಬ್ಯಾಂಕಿಂಗ್ ಒಂಬುಡ್ಸ್‌ಮನ್ (Banking Ombudsman) ಹಾಗೂ ರಿಸರ್ವ್ ಬ್ಯಾಂಕ್‌ನ ಉನ್ನತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ನೀಡಲಾಗುವುದು ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಈ ಹೋರಾಟದಲ್ಲಿ ಕರವೇ ಮದ್ದೂರು ಪಟ್ಟಣ ಘಟಕದ ಅಧ್ಯಕ್ಷೆ ಗೀತ, ಪಟ್ಟಣ ಘಟಕದ ಅಧ್ಯಕ್ಷ ಮದ್ದೂರು ಮಹಾದೇವ್, ಉಪಾಧ್ಯಕ್ಷರಾದ ಸಂತೋಷ್, ಗಣೇಶ್, ಮುಖಂಡರಾದ ಅರೆಚಾಕನಹಳ್ಳಿ ಶಿವರಾಜು, ಉಮೇಶ್, ಮಾದರಹಳ್ಳಿ ಗ್ರಾಮ ಘಟಕದ ಅಧ್ಯಕ್ಷ ಉಮೇಶ್, ಕಡಿಲುವಾಗಲು ಶಿವಮಾದು, ರವಿ, ಕಳ್ಳಿ ಮಳೆ ದೊಡ್ಡಿ ನಾಗೇಶ್, ತೊರೆಚಾಕನಹಳ್ಳಿ ಮಹೇಶ್, ಹೂನ್ನಾಯಕನಹಳ್ಳಿ ಚಿಕ್ಕಸ್ವಾಮಿ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...

​ಮೊಬೈಲ್ ಗೀಳಿಗೆ ಬಿದ್ದು ಪುಸ್ತಕಗಳ ಕಡೆಗಣಿಸದಿರಿ: ವಿದ್ಯಾರ್ಥಿಗಳಿಗೆ ‘ಪುಸ್ತಕದ ಮನೆ’ ಅಂಕೆಗೌಡ ಕಿವಿಮಾತು

​ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ...