ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ₹1970 ಕೋಟಿ ಐತಿಹಾಸಿಕ ಅನುದಾನ: ಡಿ ಕೆ ಶಿವಕುಮಾರ್

Date:

ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಮಾತನಾಡಿ, “ಅನುದಾನದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಜಿಲ್ಲೆಯ ರೈತರ ಬದುಕಿನ ಉನ್ನತಿ ಸೇರಿದಂತೆ‌ ಎಲ್ಲರ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಸಿದ್ದರಾಮಯ್ಯ ಅವರ ಸರ್ಕಾರ ಪಣತೊಟ್ಟಿದೆ” ಎಂದರು.

“ಮಳವಳ್ಳಿಯ ಜನಪ್ರಿಯ ಶಾಸಕರಾದ ನರೇಂದ್ರ ಸ್ವಾಮಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ₹300 ಕೋಟಿ ರೂ. ಅನುದಾನ ತಂದಿದ್ದಾರೆ. ಮಂಡ್ಯ ಜನತೆಯ ಸೇವೆಗೆ ಕಾಂಗ್ರೆಸ್ ‌ಸರ್ಕಾರ ಬದ್ಧವಾಗಿದೆ. ನಾವು ನಿಮ್ಮ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಬ್ಬರು ಜಿಲ್ಲೆಯಲ್ಲಿ ಶಾಂತಿಭಂಗ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗುವು ಸಹಜದ ಧರ್ಮ, ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ ಎಂದು ಡಿವಿಜಿ ಹೇಳಿದ್ದಾರೆ. ಏನೇ ಬಂದರೂ ಎಲ್ಲರೂ ನಗುತಾ ಒಟ್ಟಾಗಿ ಬಾಳಬೇಕು” ಎಂದು ಮಾತಿನ ನಡುವೆ ಡಿವಿಜಿ ಕಗ್ಗ ಬಳಸಿದರು.

ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿ ಗುರಿ

“ನಮ್ಮ‌ ಕರ್ನಾಟಕ ಸಾಹಿತ್ಯ, ಸಂಗೀತ, ಚಿತ್ರಕಲೆ, ಶಿಲ್ಪಕಲೆ,‌ ಧಾರ್ಮಿಕ, ಶೈಕ್ಷಣಿಕ ಹೀಗೆ ಅನೇಕ ರಂಗಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ರಾಜ್ಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಿ ನಾವು ಇತರರಿಗೆ ಮಾದರಿಯಾಗಿದ್ದೇವೆ. ಇದರಿಂದ 1.5 ಲಕ್ಷ ಉದ್ಯೋಗ ಸೃಷ್ಟಿಗೆ ನಾವು ಮುಂದಡಿಯಿಟ್ಟಿದ್ದೇವೆ” ಎಂದರು.

“ಕಾವೇರಿ ಆರತಿ ಮೂಲಕ ತಾಯಿಗೆ ನಮನ ಸಲ್ಲಿಸಲು ಹೊರಟಿದ್ದೆವು. ಕೋರ್ಟ್ ನಿರ್ಬಂಧ ‌ಹಾಗೂ ರೈತ ಸಂಘದವರ ಅಡಚಣೆಯಿಂದ‌ ನಿಧಾನವಾಗುತ್ತಿದೆ. ಪ್ರಾರ್ಥನೆ ಸಲ್ಲಿಸಲು, ಆರತಿ ಮಾಡಲು ಯಾರೂ ಸಹ ನಿರ್ಬಂಧ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ಈ ಭಾಗದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಪಟ್ಟ ಸಚಿವರು, ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಲಾಗುವುದು. ಪ್ರವಾಸೋದ್ಯಮದಿಂದ ಯುವಕರ ಬದುಕಿನಲ್ಲಿ ಬದಲಾವಣೆಯಾಗಲಿದೆ. ಉದ್ಯೋಗ ಸೃಷ್ಟಿಯಾಗಲಿದೆ. ಕಬಿನಿ ಭಾಗದಲ್ಲಿನ ಪ್ರಾಕೃತಿಕ ಸಂಪತ್ತು ದೇಶದಲ್ಲಿಯೇ ಅಪರೂಪ. ಕರ್ನಾಟಕ ಜಲಪಾತಗಳ ತವರೂರು. ನಮ್ಮ ರಾಜ್ಯದಲ್ಲಿ ಸುಮಾರು 544ಕ್ಕೂ ಹೆಚ್ಚು ಜಲಪಾತಗಳಿವೆ” ಎಂದರು.

“ಪ್ರವಾಸೋದ್ಯಮದಿಂದ ಸಾಕಷ್ಟು ಅಭಿವೃದ್ಧಿ ಸಾಧ್ಯ. ಕಳೆದ ವರ್ಷ ಸುಮಾರು 10 ಲಕ್ಷ‌ ಜನರು ದಸರಾ ವೀಕ್ಷಣೆ ಮಾಡಿದರು. ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದಸರಾದಲ್ಲಿ ಭಾಗವಹಿಸಿದರು” ಎಂದರು.

“ಗಗನಚುಕ್ಕಿ ಜಲಪಾತವಿರುವ ಜಾಗ ಐತಿಹಾಸಿಕ ಸ್ಥಳ. ಏಷ್ಯಾದಲ್ಲಿಯೇ ಮೊಟ್ಟಮೊದಲು ಜಲವಿದ್ಯುತ್ ಉತ್ಪಾದನೆ ಮಾಡಿದ ಸ್ಥಳವಿದು. ಶಾಲಾ ದಿನಗಳಲ್ಲಿ ಇಲ್ಲಿಗೆ ಪ್ರವಾಸ ಬಂದಿದ್ದೆ. ಆನಂತರ ವಿದ್ಯುತ್ ಸಚಿವನಾಗಿದ್ದಾಗ ಭೇಟಿ ನೀಡಿದ್ದೆ. ಇಂದು ಮತ್ತೊಮ್ಮೆ ನೋಡುವ ಸೌಭಾಗ್ಯ ದೊರೆತಿದೆ. ಕೆಜಿಎಫ್ ಗೆ ವಿದ್ಯುತ್ ನೀಡಲು 1904 ರಲ್ಲಿ ಇಲ್ಲಿಂದ ವಿದ್ಯುತ್ ಉತ್ಪಾದನೆ ಮಾಡಿ ನೀಡಲಾಯಿತು. ಇಲ್ಲಿಂದ ವಿದ್ಯುತ್ ನೀಡದೇ‌ ಇದ್ದಿದ್ದರೆ ಅಭಿವೃದ್ಧಿಯೇ ಇಲ್ಲವಾಗುತ್ತಿತ್ತು. ಇದರಿಂದ ನಮ್ಮೆಲ್ಲರ ಬದುಕಿಗೆ ಬೆಳಕು ಬಂದಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...