ಮಂಡ್ಯ | ಜಮೀನಿಗೆ ನೀರು ಹರಿಸುವಂತೆ ಇಂಜಿನಿಯರ್‌ಗೆ ರೈತರ ದಿಗ್ಬಂಧನ

Date:

ಹೇಮಾವತಿ ನದಿಗೆ ಕೆ.ಆರ್‌ ಪೇಟೆ ತಾಲೂಕಿನ ಹೇಮಗಿರಿ ಬಳಿ ಕಟ್ಟಿರುವ ಒಡ್ಡಿನಿಂದ (ಅಣೆಕಟ್ಟೆ) ವಿಠಲಾಪುರ ಭಾಗದ ಜಮೀನುಗಳಿಗೆ ನೀರು ಹರಿಸಬೇಕು. ಬೆಳೆಯುತ್ತಿರುವ ಭತ್ತದ ಫಸಲನ್ನು ರಕ್ಷಿಸಲು ಅನುವು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಹಲವಾರು ರೈತರು ಹೇಮಾವತಿ ಉಪವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್ ಅವರಿಗೆ ದಿಗ್ಬಂಧನ ಹಾಕಿದ್ದಾರೆ.

ಹೇಮಾವತಿ ಅಣೆಕಟ್ಟೆಯಿಂದ ತ್ರಿಶೂಲ್ ಜಲ ವಿದ್ಯುತ್ ಉತ್ಪಾದನಾ ಘಟಕಕ್ಕೆ ಯಥೇಚ್ಛವಾಗಿ ನೀರು ಹರಿಸುತ್ತಿದ್ದು, ವಿದ್ಯುತ್ ಉತ್ಪಾದನೆಯ ನಂತರ ಬಳಸಿದ ನೀರು ನದಿಯ ಮೂಲಕ ಕೃಷ್ಣರಾಜಸಾಗರ ಜಲಾಶಯಕ್ಕೆ ಸೇರುತ್ತಿದೆ. ಆದರೆ, ಹೇಮಗಿರಿ ಅಣೆಕಟ್ಟೆಯ ನಾಲಾ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ನೂರಾರು ಎಕರೆ ಭೂ ಪ್ರದೇಶದಲ್ಲಿ ಕಬ್ಬು ಮತ್ತು ಭತ್ತವನ್ನು ಬೆಳೆಯಲಾಗಿದ್ದು, ಭತ್ತವು ಗರ್ಭ ಕಟ್ಟಿ ತೆನೆಯಾಗುವ ಈ ಸಮಯದಲ್ಲಿ ನಾಲೆಯಲ್ಲಿ ನೀರು ಹರಿಯದಿರುವುದರಿಂದ ಭತ್ತದ ಫಸಲು ಕೈಗೆ ಬಂದದ್ದು ಬಾಯಿಗೆ ಬರದಂತಾಗಿದೆ ಎಂದು ರೈತರು ದೂರಿದರು.

ಕಳೆದ ಮೂರು ನಾಲ್ಕು ತಿಂಗಳುಗಳಿಂದ ಬೇಸಾಯ ಮಾಡಿ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿರುವ ರೈತ ಬಾಂಧವರು ಭತ್ತದ ಫಸಲು ಗರ್ಭ ಕಟ್ಟಿ ಕಾಳಾಗುವ ಸಂದರ್ಭದಲ್ಲಿ ನೀರು ಹರಿಸದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಅಭಿಯಂತರರು ಹಾಗೂ ನಂಬರ್ 20 ಉಪವಿಭಾಗ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಇಂಜಿನಿಯರ್ ಗಳು ನಾಲೆಯಲ್ಲಿ ನೀರು ಹರಿಸಲು ಕ್ರಮ ಕೈಗೊಂಡು ಒಣಗುತ್ತಿರುವ ಭತ್ತದ ಬೆಳೆಯನ್ನು ರಕ್ಷಣೆ ಮಾಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಠಲಾಪುರ, ಕೂಡಲಕುಪ್ಪೆ, ಪರದೇಶಗೌಡನ ಕೊಪ್ಪಲು ಯಗಚಗುಪ್ಪೆ ಗ್ರಾಮಗಳ ವ್ಯಾಪ್ತಿಯ ನೂರಾರು ಎಕರೆ ಭೂ ಪ್ರದೇಶದಲ್ಲಿ ಭತ್ತವನ್ನು ಬೆಳೆದಿರುವ ರೈತಬಾಂಧವರು ಹೇಮಗಿರಿ ನಾಲೆಯಲ್ಲಿ ನೀರು ಹರಿಯದಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾಲೆಯ ನೀರು ನಿರ್ವಹಣಾ ಜವಾಬ್ದಾರಿಯನ್ನು ಹೊತ್ತಿರುವ ಸವಡೆಗಳು ಬೇಜವಾಬ್ದಾರಿತನದಿಂದ ಕೆಲಸ ಮಾಡುತ್ತಿದ್ದು ಈ ಭಾಗದ ಸವಡೆಗಳನ್ನು ಕೂಡಲೇ ಬದಲಾಯಿಸಿ ನಾಲೆಯ ನೀರು ಕೊನೆಯ ಭಾಗದ ಗದ್ದೆಗಳಿಗೆ ಹರಿಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ವಿಠಲಾಪುರ ಸುಬ್ಬೆಗೌಡ, ರಾಜಶೇಖರ್, ನಾರಾಯಣಗೌಡ, ನರಸಿಂಹೇಗೌಡ, ಮೋಹನ, ಪಾಂಡುರಂಗೇಗೌಡ ಸೇರಿದಂತೆ ನೂರಾರು ರೈತರು ಸಹಾಯಕ ಕಾರ್ಯಪಾಲಕ ಅಭಯಂತರ ವಿಶ್ವನಾಥ್ ಅವರಿಗೆ ದಿಗ್ಬಂದನ ಹಾಕಿ, ನೀರಾವರಿ ಇಲಾಖೆ ಇಂಜಿನಿಯರ್ ಗಳ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...