ಮದ್ದೂರು | ನಗರಸಭೆಯ ʼಪರಿಸರ ವಿರೋಧಿʼ ಧೋರಣೆ; ಒತ್ತುವರಿ ತೆರವು ನೆಪದಲ್ಲಿ ಹಸಿರು ನಾಶಕ್ಕೆ ಸಾರ್ವಜನಿಕರ ಆಕ್ರೋಶ

Date:

​ಮದ್ದೂರು ಪಟ್ಟಣದಲ್ಲಿ ಪಾದಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸುವ ಹೆಸರಿನಲ್ಲಿ ನಗರಸಭೆಯು ಪರಿಸರಕ್ಕೆ ಮಾರಕವಾಗುವಂತೆ ವರ್ತಿಸಿದೆ. ಜನವರಿ 8 ರಂದು ನಡೆದ ಕಾರ್ಯಾಚರಣೆಯ ವೇಳೆ ಸಿಬ್ಬಂದಿ ಜೆಸಿಬಿ ಬಳಸಿ ಅನ್ಯಾಯವಾಗಿ ಮರವೊಂದನ್ನು ಬುಡಮೇಲು ಮಾಡಿದ್ದು, ಈ ಕೃತ್ಯ ಸ್ಥಳೀಯರ ಮತ್ತು ಪರಿಸರ ಪ್ರೇಮಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಗರಸಭೆಯ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಮರಗಳನ್ನು ಸಂರಕ್ಷಿಸುವ ಕಾಳಜಿ ತೋರಬೇಕಿತ್ತು. ಆದರೆ, ಅದನ್ನು ಬಿಟ್ಟು ಜೆಸಿಬಿ ಯಂತ್ರದ ಮೂಲಕ ಮರವನ್ನು ಉರುಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗಿಡ ನೆಟ್ಟು ಪರಿಸರ ಬೆಳೆಸಬೇಕಾದ ಸ್ಥಳೀಯ ಆಡಳಿತವೇ ಈ ರೀತಿ ಹಸಿರು ನಾಶಕ್ಕೆ ಮುಂದಾಗಿರುವುದು ದೊಡ್ಡ ದುರಂತ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಘಟನೆಯನ್ನು ರಾಜ್ಯ ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಚೆನ್ನಸಂದ್ರ ಲಕ್ಷ್ಮಣ್ ತೀವ್ರವಾಗಿ ಖಂಡಿಸಿದ್ದಾರೆ. “ಒತ್ತುವರಿ ತೆರವಿನ ನೆಪದಲ್ಲಿ ಮದ್ದೂರು ಪಟ್ಟಣದ ಸೌಂದರ್ಯ ಹೆಚ್ಚಿಸುತ್ತಿದ್ದ ಮರಗಳನ್ನು ಉರುಳಿಸಿರುವುದು ಅಕ್ಷಮ್ಯ ಅಪರಾಧ. ಪರಿಸರ ರಕ್ಷಿಸಬೇಕಾದ ಅಧಿಕಾರಿಗಳೇ ಮರಗಳನ್ನು ಸಾಯಿಸುತ್ತಿರುವುದು ಖೇದಕರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

​ಈ ಕೂಡಲೇ ಅರಣ್ಯ ಇಲಾಖೆಯು ಮರ ಕಡಿಯಲು ಆದೇಶ ನೀಡಿದ ನಗರಸಭೆಯ ಅಧಿಕಾರಿಗಳ ಮೇಲೆ ಎಫ್‌ಐಆರ್ (FIR) ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ವಿಚಾರವಾಗಿ ನಗರಸಭೆ ಆಯುಕ್ತೆ ರಾಧಿಕಾ ಅವರನ್ನು ಪ್ರಶ್ನಿಸಿದಾಗ, “ಮರ ಕಡಿದಿರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಹಾರಿಕೆಯ ಉತ್ತರ ನೀಡಿದ್ದಾರೆ. ಈ ಬೇಜವಾಬ್ದಾರಿ ಹೇಳಿಕೆಯು ಪರಿಸರ ಕಾಳಜಿಯುಳ್ಳ ನಾಗರಿಕರ ಕೋಪವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: ಮದ್ದೂರು | ವಿಶ್ವಮಾನವ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ: ರೈಲು ಪ್ರಯಾಣಿಕರಿಗೆ ಸಂಕಷ್ಟ, ಆಕ್ರೋಶ

ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯಿದೆ 1976ರ ಪ್ರಕಾರ, ಯಾವುದೇ ಮರವನ್ನು ಕಡಿಯುವ ಮೊದಲು ಅರಣ್ಯ ಇಲಾಖೆಯಿಂದ ಕಡ್ಡಾಯವಾಗಿ ಲಿಖಿತ ಅನುಮತಿ ಪಡೆಯಬೇಕು. ನಗರಸಭೆಯಾಗಲಿ ಇಲ್ಲವೇ ಯಾವುದೇ ಸರ್ಕಾರಿ ಸಂಸ್ಥೆಯಾಗಲಿ ಈ ನಿಯಮವನ್ನು ಪಾಲಿಸುವುದು ಕಡ್ಡಾಯ. ಅನುಮತಿ ಇಲ್ಲದೆ ಮರ ಕಡಿಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದಂಡ ಅಥವಾ ಜೈಲು ಶಿಕ್ಷೆಗೆ ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​”ಒಂದು ಮರವನ್ನು ಅನಿವಾರ್ಯವಾಗಿ ತೆಗೆಯಲೇಬೇಕಾದ ಸಂದರ್ಭ ಬಂದರೆ, ಅದರ ಬದಲಾಗಿ ಕನಿಷ್ಠ 10 ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂಬ ನಿಯಮವಿದೆ. ಅಧಿಕಾರಿಗಳೇ ಕಾನೂನು ಉಲ್ಲಂಘಿಸಿರುವುದರಿಂದ ನಾವು ಇದರ ವಿರುದ್ಧ ನ್ಯಾಯಾಂಗ ಹೋರಾಟ ನಡೆಸಬೇಕಾಗುತ್ತದೆ” ಎಂದು ಚನ್ನಸಂದ್ರ ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...