ಮದ್ದೂರು | ವಿಶ್ವಮಾನವ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ: ರೈಲು ಪ್ರಯಾಣಿಕರಿಗೆ ಸಂಕಷ್ಟ, ಆಕ್ರೋಶ

Date:

ಮದ್ದೂರು ಮತ್ತು ಸುತ್ತಮುತ್ತಲಿನ ಭಾಗಗಳಿಂದ ಪ್ರತಿನಿತ್ಯ ಬೆಂಗಳೂರಿಗೆ ಉದ್ಯೋಗ ಮತ್ತು ಇತರೆ ಕೆಲಸಗಳಿಗೆ ತೆರಳುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಇಲಾಖೆಯ ನಿರ್ಧಾರವೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿಂದೆ ಮದ್ದೂರಿನಿಂದ ಬೆಳಿಗ್ಗೆ 7 ಗಂಟೆಗೆ ಸಂಚರಿಸುತ್ತಿದ್ದ ‘ವಿಶ್ವಮಾನವ ಎಕ್ಸ್‌ಪ್ರೆಸ್‌’ ರೈಲಿನ ಸಮಯವನ್ನು ಈಗ 8 ಗಂಟೆ 5 ನಿಮಿಷಕ್ಕೆ ಮುಂದೂಡಲಾಗಿದೆ.

​”ಬೆಳಿಗ್ಗೆ 6ಕ್ಕೆ ಚೆನ್ನೈ ಎಕ್ಸ್‌ಪ್ರೆಸ್ ರೈಲು ತಪ್ಪಿದರೆ, ಬೆಂಗಳೂರಿಗೆ ಹೋಗುವವರಿಗೆ ಬೆಳಿಗ್ಗೆ 7:30ಕ್ಕೆ ಪ್ಯಾಸೆಂಜರ್ ರೈಲೇ ಗತಿ ಎಂಬಂತಾಗಿದೆ. ವಿಶ್ವಮಾನವ ರೈಲಿನ ಸಮಯ ಬದಲಾವಣೆಯಿಂದಾಗಿ 12 ಬೋಗಿಗಳ ಪ್ಯಾಸೆಂಜರ್ ರೈಲಿನಲ್ಲಿ ಪಾಂಡವಪುರ, ಮಂಡ್ಯ ಮತ್ತು ಮದ್ದೂರಿನ ಸಾವಿರಾರು ಪ್ರಯಾಣಿಕರು ಒಟ್ಟಿಗೆ ಏರುತ್ತಿದ್ದಾರೆ. ಇದರಿಂದಾಗಿ ರೈಲಿನಲ್ಲಿ ಕಾಲಿಡಲು ಜಾಗ ಇಲ್ಲದಂತಾಗಿದ್ದು, ಉಸಿರಾಡಲು ಕಷ್ಟವಾಗುವಷ್ಟು ಜನದಟ್ಟಣೆ ಉಂಟಾಗುತ್ತಿದೆ” ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ.

​ನಿಂತು ಪ್ರಯಾಣ ಮಾಡಲಾಗದೆ ಪ್ರಯಾಣಿಕರು ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದಾರೆ. ಸಮಯ ಬದಲಾವಣೆಯಿಂದ ಆಗುತ್ತಿರುವ ತೊಂದರೆಯ ಬಗ್ಗೆ ಈಗಾಗಲೇ ಸ್ಥಳೀಯ ಮದ್ದೂರು ಶಾಸಕರನ್ನು ಭೇಟಿ ಮಾಡಿರುವ ಪ್ರಯಾಣಿಕರ ನಿಯೋಗ, ಲಿಖಿತ ಮನವಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿದಿನ ಬೆಳಿಗ್ಗೆ 7:10ಕ್ಕೆ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೊರಡುವ ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಮೆಮೊ(ರೈಲು ಸಂಖ್ಯೆ: 06536) ರೈಲನ್ನು ಮಂಡ್ಯದಿಂದಲೇ ಪ್ರಾರಂಭಿಸುವಂತೆ ಮನವಿಯಲ್ಲಿ ಕೋರಲಾಗಿದೆ. ಈ ಬದಲಾವಣೆಯಿಂದ ಮಂಡ್ಯ ಭಾಗದ ನೂರಾರು ಉದ್ಯೋಗಿಗಳು ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈಲ್ವೆ ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಕಳಚಿದ ಕಬ್ಬಿನ ಟ್ರೈಲರ್ ಕೊಂಡಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ!

ಸಾರ್ವಜನಿಕರ ಮನವಿಯನ್ನು ಸ್ವೀಕರಿಸಿದ ಶಾಸಕರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಮನವಿ ಪತ್ರದಲ್ಲಿರುವ ಅಂಶಗಳನ್ನು ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದೂ ಅಲ್ಲದೆ ಒಕ್ಕೂಟ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಈ ಸಮಸ್ಯೆಯನ್ನು ಅವರ ಗಮನಕ್ಕೆ ತರಲು ಪ್ರಯಾಣಿಕರು ನಿರ್ಧರಿಸಿದ್ದಾರೆ. ​”ನಮಗೆ ಹಳೆಯ ಸಮಯದಲ್ಲೇ ರೈಲು ಬೇಕು, ಇಲ್ಲವೇ ಅದೇ ಸಮಯಕ್ಕೆ ಪರ್ಯಾಯವಾಗಿ ಮತ್ತೊಂದು ರೈಲಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ನಮ್ಮ ಸಂಕಷ್ಟಕ್ಕೆ ಕೊನೆಯೇ ಇಲ್ಲ” ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ವರದಿ : ಜಗದೀಶ್‌ ನಗರಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...