‘ತೊಡೆನೂ ತಟ್ಟುತ್ತೇವೆ, ತಲೆನೂ ತೆಗೆಯುತ್ತೇವೆ’ ಮದ್ದೂರಿನಲ್ಲಿ ಸಿ ಟಿ ರವಿ ದ್ವೇಷ ಭಾಷಣ

Date:

ಜಾತ್ಯತೀತ ಮತ್ತು ಬಹುತ್ವ ಸಮಾಜಕ್ಕೆ ಹೆಸರುವಾಸಿಯಾದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಮತ್ತು ಸಂಘಪರಿವಾರದವರು ಕೋಮುವಾದದ ಪ್ರಯೋಗವನ್ನು ವರ್ಷದಿಂದ ವರ್ಷಕ್ಕೆ ಹೆಚ್ಚು ಮಾಡುತ್ತಿದ್ದಾರೆ. ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಹಿಂಸಾಚಾರ ನಡೆದಿರುವುದು ಕೋಮುವಾದದ ಭಾಗ ಎನ್ನುತ್ತಿದ್ದಾರೆ ಸ್ಥಳೀಯರು.

ದಶಕಗಳಿಂದ ಕೋಮು ಹಿಂಸಾಚಾರದಿಂದ ಮುಕ್ತವಾಗಿದ್ದ ಈ ಪ್ರದೇಶದಲ್ಲಿ ವೇಗವಾಗಿ ಕೋಮುದ್ವೇಷ ಹರಡಿ ಪರಿಸ್ಥಿತಿ ಹದಗೆಡುತ್ತಿದೆ. ನಾಗಮಂಗಲ, ಕೆರೆಗೋಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ.

ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಬುಧವಾರ ಮದ್ದೂರಿಗೆ ಆಗಮಿಸಿ ಕೋಮುದ್ವೇಷದ ಭಾಷಣಗಳನ್ನು ಮಾಡಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಮತ್ತು ಸಂಘಪರಿವಾರದ ಹಾರ್ಡ್‌ಕೋರ್‌ ನಾಯಕ ಸಿ ಟಿ ರವಿ ಅವರು ಉದ್ದೇಶಪೂರ್ವಕವಾಗಿ ಅನ್ಯ ಕೋಮಿನ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ದೂರಿನಲ್ಲಿ ಸಿ ಟಿ ರವಿ ಮಾತನಾಡುತ್ತಾ, “ಟಿಪ್ಪು ಮತ್ತು ಅವರ ಅಪ್ಪನನ್ನೇ ಬಿಟ್ಟಿಲ್ಲ ನಾವು. ಇನ್ನು ನಿಮ್ಮನ್ನು ಬಿಡುತ್ತೀವಾ? ನಮಗೆ ತೊಡೆ ತಟ್ಟುವ ಕೆಲಸ ಮಾಡಬೇಡಿ. ಅಗತ್ಯ ಬಿದ್ದರೆ ನಾವು ತೊಡೆನೂ ತಟ್ಟುತ್ತೇವೆ, ತಲೆನೂ ತೆಗೆಯುತ್ತೇವೆ” ಎಂದು ದ್ವೇಷ ಭಾಷಣ ಮಾಡಿದ್ದಾರೆ.

“ನಾವು ಜಗತ್ತಿಗೆ ಸರ್ವೇ ಜನ ಸುಖಿನೋ ಭವಂತು ಅಂತ ಹೇಳುವ ಜನ. ನೀವು ನಮ್ಮನ್ನು ಕಾಫಿರರು ಅಂತ ನೋಡ್ತೀರಿ? ನಮ್ಮ ವಿಚಾರಗಳನ್ನು ಧ್ವಂಸ ಮಾಡುತ್ತೀರಿ? ಇಸ್ಲಾಂ ಹುಟ್ಟಿದ್ದು 1600 ವರ್ಷಗಳ ಹಿಂದೆ. ಹಿಂದೂ ಧರ್ಮ ಹುಟ್ಟಿರುವುದು 16 ಸಾವಿರ ವರ್ಷಗಳ ಹಿಂದೆ. ಎಲ್ಲ ಬಿಟ್ಟು ನೆಮ್ಮದಿಯಿಂದ ನೀವೂ ಇರಿ. ನಾವೂ ಇರುತ್ತೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

“ಅಣ್ಣ ಅಂದ್ರೆ ತಲೆ ತಗ್ಗಿಸುತ್ತೇವೆ. ಏನ್ಲಾ ಅಂದ್ರೆ ಯಾವನಲೇ ಅನ್ನೋ ತಾಕತ್ತು ಹಿಂದೂ ಸಮಾಜಕ್ಕೆ ಇದೆ. ಮುಖ್ಯಮಂತ್ರಿಗಳಿಗೆ, ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ವಿನಂತಿ; ಬರೀ ಸಾಬರಿಂದಲೇ ಸರ್ಕಾರ ನಡೆಸುತ್ತಿದ್ದೀರಾ? ಹಿಂದೂಗಳು ಯಾರೂ ನಿಮಗೆ ಮತ ಹಾಕಿಲ್ವಾ? ಹಿಂದೂಗಳು ಹಾಳಾಗಿ ಹೋಗಲಿ, ಸಾಬರಿಗೆ ಏನೂ ಆಗಬಾರದು ಎನ್ನುವ ನಿಮ್ಮ ಮಾನಸಿಕತೆಯಿಂದ ಹೊರಬನ್ನಿ” ಎಂದು ಹೇಳಿದರು.

“ನಾವು ಮದ್ದೂರಿಗೆ ರಾಜಕಾರಣ ಮಾಡಲು ಬಂದಿಲ್ಲ, ಹಿಂದೂ ಸಮಾಜದ ಕೇಸರಿ ಶಾಲು ಹಾಕಿಕೊಂಡು ಬಂದಿದ್ದೇವೆ. ಹಿಂದೂ ವಿಷಯದಲ್ಲಿ ರಾಜಕಾರಣವಿಲ್ಲ. ನೀವೇನು ಮಾಡುತ್ತೀರಿ ಎನ್ನುವುದು ನಮಗೆ ಗೊತ್ತಿದೆ. ಪಾಕಿಸ್ತಾನ ಜಿಂದಾಬಾದ್‌ ಎನ್ನುವವರನ್ನು ನಮ್ಮವರು ಎನ್ನುತ್ತೀರಿ. ಪಾಕಿಸ್ತಾನ ಮೇಲೆ ನಿಮಗೆ ಪ್ರೀತಿ ಇದ್ದರೆ ಅಲ್ಲಿಗೆ ಗಂಟು ಮೂಟೆ ಕಟ್ಟಿ ನಡೆಯಿರಿ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...