ಮಂಡ್ಯ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು

Date:

ದಲಿತ ಯುವಕನನ್ನು ಅಡ್ಡಗಟ್ಟಿ, ಜಾತಿ ನಿಂಧನೆ ಮಾಡಿ, ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ಹಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡಗೆರೆ ಗ್ರಾಮದ ದಲಿತ ಯುವಕ ಕಿರಣ್ ಜಿ ಎಂಬಾತ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬಸವನಪುರ ಗ್ರಾಮದ ಬಿ.ಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಬಸವನಪುರದ ಪ್ರಸನ್ನ ಹಾಗೂ ಇತರರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ 504, 506, 355, 149, 323, 324, 327ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರಿಗೆ ದೂರು ನೀಡಿರುವ ಕಿರಣ್, “ನನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಕಾರಿನಲ್ಲಿ ಬಂದ ಆರೋಪಿಗಳು ಬೈಕ್‌ಗೆ ಗುದ್ದುವ ರೀತಿಯಲ್ಲಿ ಬೆದರಿಸಿದ್ದಾರೆ. ಹಳೆಯ ದ್ವೇಷದಿಂದ ನಮ್ಮನ್ನು ತಡೆದು ನಿಲ್ಲಿಸಿ, ನನ್ನ ಕುತ್ತಿಗೆ ಹಿಡಿದು ಎಳೆದಾಡಿದ್ದಾರೆ. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ‘ನಮ್ಮನ್ನು ಎದುರು ಹಾಕಿಕೊಂಡು ಮರೆಯುತ್ತಿದ್ದೀಯಾ. ನಿನ್ನ ಕೊಲೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀನು ದಲಿತ ಜಾತಿಗೆ ಸೇರಿದವನೆಂದು ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನನ್ನನ್ನು ಕೆಡವಿ, ಚಪ್ಪಲಿ ಕಾಲಿನಿಂದ ನನ್ನ ಎದೆ, ಹೊಟ್ಟೆಗೆ ಒದ್ದಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನನ್ನ ಬಟ್ಟೆಯನ್ನು ಹರಿದು, ನಾನು ಕತ್ತಿನಲ್ಲಿ ಹಾಕಿದ್ದ 20 ಗ್ರಾಂ ಚಿನ್ನದ ಸರ ಹಾಗೂ ಜೇಬಿನಲ್ಲಿದ್ದ 50,000 ರೂಪಾಯಿಯನ್ನೂ ಕಿತ್ತುಕೊಂಡಿದ್ದಾರೆ. ಬರಿ ಚಡ್ಡಿಯಲ್ಲಿ 1 ಕಿ.ಮೀ ನಡೆಸಿಕೊಂಡು ಎಳೆದೊಯ್ದಿದ್ದಾರೆ” ಎಂದು ಕಿರಣ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು

“ಬಿ.ಪಿ ಗಿರೀಶ ಎಂಬಾತ ಗ್ರಾಮ ಪಂಚಾಯತಿ ಅಧ್ಯಕ್ಷನಾಗಿದ್ದು, ಆತ, ‘ನನಗೆ ರಾಜಕೀಯ ಬೆಂಬಲವಿದೆ. ನನ್ನ ಮೇಲೆ ಪ್ರಕರಣ ದಾಖಲಿಸಲು ಕೂಡ ಆಗುವುದಿಲ್ಲ. ನಾನು ಎಲ್ಲದರಿಂದ ಬಚಾವ್ ಆಗಬಲ್ಲೆ’ ಎಂದು ಹೇಳಿ, ಕಪಾಳಕ್ಕೆ ಹೊಡೆದಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ, ಕೊಲೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಿರಣ್ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...