ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ

Date:

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ( ಹಂತ-4 )ಸ್ಥಳೀಯ ಸಂಸ್ಥೆಗಳಿಗೆ ಅನುಮೋದನೆಯಾದ ಕ್ರಿಯಾಯೋಜನೆಗಳ ಪೈಕಿ ಪ್ರಾರಂಭವಾಗದೆ ಇರುವ ಕಾಮಾಗಾರಿಗಳನ್ನು ಮಂಡ್ಯ ಜಿಲ್ಲೆಯ ಶಾಸಕರುಗಳೊಂದಿಗೆ ಚರ್ಚಿಸಿ ಟೆಂಡರ್ ಕರೆದು ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ(ಹಂತ-4) ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. “ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ(ಹಂತ-4) ಜಿಲ್ಲೆಗೆ ಒಟ್ಟು 105 ಕೋಟಿ ರೂ. ಹಂಚಿಕೆಯಾಗಿದೆ. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ವೇಳೆ ಶಾಸಕರುಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಹಂತ ಹಂತವಾಗಿ ಪೂರ್ಣಗೊಳಿಸಿ” ಎಂದರು‌.

“ಕುಡಿಯುವ ನೀರು, ಒಳಚರಂಡಿ, ರಸ್ತೆ ಅಭಿವೃದ್ಧಿ, ಮಳೆನೀರು ಚರಂಡಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ಧಿ ನಗರೋತ್ಥಾನದ ಉದ್ದೇಶವಾಗಿದ್ದು, ಇದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಿ” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ 8 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 5 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 3 ಟೆಂಡರ್ ಕರೆಯಬೇಕಿದ್ದು, 9 ಕಾಮಗಾರಿಗಳು ಪೂರ್ಣಗೊಂಡಿವೆ. ಮದ್ದೂರು ವ್ಯಾಪ್ತಿಯಲ್ಲಿ 6 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 6 ಕಾಮಗಾರಿಗಳನ್ನು ಟೆಂಡರ್ ಕರೆಯಬೇಕಿದೆ. 7 ಕಾಮಗಾರಿಗಳು ಪೂರ್ಣಗೊಂಡಿವೆ. ಮಳವಳ್ಳಿ ವ್ಯಾಪ್ತಿಯಲ್ಲಿ 3 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 6 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 4 ಟೆಂಡರ್ ಕರೆಯಬೇಕಿದ್ದು, 8 ಕಾಮಗಾರಿಗಳು ಪೂರ್ಣಗೊಂಡಿವೆ” ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು ಸಭೆಗೆ ಮಾಹಿತಿ ನೀಡಿದರು.

“ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ 7 ಕಾಮಾಗಾರಿಗಳನ್ನು ಟೆಂಡರ್ ಕರೆಯಬೇಕಿದ್ದು, 10 ಕಾಮಗಾರಿಗಳು ಪೂರ್ಣಗೊಂಡಿವೆ. ಕೆ.ಆರ್ ಪೇಟೆ ವ್ಯಾಪ್ತಿಯಲ್ಲಿ 3 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 7 ಕಾಮಗಾರಿಗಳ ಟೆಂಡರ್ ಕರೆಯಬೇಕಿದೆ. 5 ಕಾಮಗಾರಿಗಳು ಪೂರ್ಣಗೊಂಡಿವೆ. ಪಾಂಡವಪುರ ವ್ಯಾಪ್ತಿಯಲ್ಲಿ 7 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 10 ಕಾಮಗಾರಿಗಳ ಟೆಂಡರ್ ಕರೆಯಬೇಕಿದೆ. 1 ಕಾಮಗಾರಿ ಪೂರ್ಣಗೊಂಡಿದೆ. ನಾಗಮಂಗಲ ವ್ಯಾಪ್ತಿಯಲ್ಲಿ 4 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 5 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 1 ಕಾಮಗಾರಿಯ ಟೆಂಡರ್ ಕರೆಯಬೇಕಿದ್ದು, 6 ಕಾಮಗಾರಿಗಳು ಪೂರ್ಣಗೊಂಡಿವೆ. ಬೆಳ್ಳೂರು ವ್ಯಾಪ್ತಿಯಲ್ಲಿ 6 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ. 1 ಕಾಮಗಾರಿಯ ಟೆಂಡರ್ ಕರೆಯಬೇಕಿದ್ದು, 7 ಕಾಮಗಾರಿಗಳು ಪೂರ್ಣಗೊಂಡಿವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಸ್ಮಶಾನ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

“ಸ್ವಚ್ಛ ಭಾರತ್ ಯೋಜನೆಯಡಿ ಮದ್ದೂರು ಪುರಸಭೆ- 72.75 ಲಕ್ಷ ರೂ, ಮಳವಳ್ಳಿ ಪುರಸಭೆ- ರೂ 34.70 ಲಕ್ಷ ರೂ, ಶ್ರೀರಂಗಪಟ್ಟಣ ಪುರಸಭೆ- 67.08 ಲಕ್ಷ ರೂ, ಕೆ ಆರ್ ಪೇಟೆ ಪುರಸಭೆ- 26.07 ಲಕ್ಷ ರೂ ಲಭ್ಯವಿದ್ದು, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು” ಎಂದರು.

ಸಭೆಯಲ್ಲಿ ಶಾಸಕರುಗಳಾದ ಪಿ ಎಂ ನರೇಂದ್ರಸ್ವಾಮಿ, ಪಿ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ‌ ಎಂ ಉದಯ್, ಕೆ ಟಿ ಮಂಜು, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಯ ಶೇಖ್ ತನ್ವಿ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್‌ ಯತೀಶ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...