ಮಂಡ್ಯ | ಮೈಷುಗರ್‌ ಕಾರ್ಖಾನೆಯಲ್ಲಿ ಬಿಜೆಪಿ ಮುಖಂಡನ 121 ಕೋಟಿ ರೂ. ಭ್ರಷ್ಟಾಚಾರ; ಸಿವಿಲ್ ದಾವೆಗೆ ಸರ್ಕಾರ ಸಮ್ಮತಿ

Date:

ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಮುಖಂಡ ನಾಗರಾಜಪ್ಪ ಅವರು ಕಾರ್ಖಾನೆಗೆ ಬರೋಬ್ಬರಿ 121 ಕೋಟಿ ರೂ. ನಷ್ಟವುಂಟು ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ. ಅವರ ವಿರುದ್ಧ ಸಿವಿಲ್ ದಾವೆ ಹೂಡಿ, ನಷ್ಟ ವಸೂಲಿ ಮಾಡಲು ಸರ್ಕಾರ ಸಮ್ಮತಿ ನೀಡಿದೆ.

ಮೈಷುಗರ್‌ ಕಾರ್ಕಾನೆಗೆ 2008-09 ಮತ್ತು 2011-12ರ ಅವಧಿಯಲ್ಲಿ ನಾಗರಾಜಪ್ಪ ಅಧ್ಯಕ್ಷರಾಗಿದ್ದರು. ತಮ್ಮ ಅಧಿಕಾರವಧಿಯಲ್ಲಿ ಮೈಷುಗರ್‌ಗೆ 121 ಕೋಟಿ ರೂ. ನಷ್ಟವುಂಟಾಗಿದೆ ಎಂದು ಆರೋಪಿಸಲಾಗಿತ್ತು. ಆ ಬಗ್ಗೆ ತನಿಖೆ ಉಪ ಲೋಕಾಯುಕ್ತರು ತನಿಖೆ ನಡೆಸಿದ್ದು, ನಷ್ಟವಾಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಉಪ ಲೋಕಾಯುಕ್ತರು ನೀಡಿರುವ ವರದಿಯ ಪ್ರಕಾರ, ನಾಗರಾಜಪ್ಪ ಮೇಲಿನ ಆರೋಪಗಳು ಸಾಬೀತಾಗಿವೆ. ಕಾರ್ಖಾನೆಗೆ ಉಂಟಾಗಿರುವ ನಷ್ಟವನ್ನು ಮೈಸೂರು ಶುಗರ್ ಕಂಪನಿಗೆ ಮರುಪಾವತಿಸಿಕೊಳ್ಳುವ ಸಂಬಂಧ ನಾಗರಾಜಪ್ಪ ವಿರುದ್ಧ ನ್ಯಾಯಾಲಯದಲ್ಲಿ ಸಿವಿಲ್ ದಾವೆಯನ್ನು ಹೂಡಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಅನುಮೋದನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 01 04 at 5.20.20 PM

ನಾಗರಾಜಪ್ಪ ಅವರ ಹೆಸರಿನಲ್ಲಿ ಹಾಗೂ ಅವರ ಕುಟುಂಬದ ಸದಸ್ಯರ ಹೆಸರಿನಲ್ಲಿರುವ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿ ಮತ್ತು ಚರಾಸ್ತಿಗಳ ಮಾಹಿತಿಯನ್ನು ಕ್ರೋಡೀಕರಿಸಬೇಕಾಗಿದೆ. ಹೀಗಾಗಿ, ನಾಗರಾಜಪ್ಪ ಅವರಿಗೆ ಸಂಬಂಧಿಸಿದ ಕೃಷಿ ಜಮೀನು, ಕೃಷಿಯೇತರ ಆಸ್ತಿ, ನಿವೇಶನ, ವಾಹನಗಳು, ಬ್ಯಾಂಕಿನಲ್ಲಿರುವ ನಗದು, ಠೇವಣಿಗಳು, ಷೇರು ಹಾಗೂ ಇತ್ಯಾದಿ ಮಾಹಿತಿಗಳನ್ನು ದಾಖಲೆಗಳೊಂದಿಗೆ ನೀಡುವಂತೆ ಮೈಷುಗರ್ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿಕುಮಾರ್ ಅವರು ಕಳೆದ ಡಿ.31ರಂದು ಮಂಡ್ಯ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...