ಮಂಡ್ಯ | ಮುಂಗಾರು ವಿಳಂಬ, ಜಲಾಶಯದ ನೀರಿನ ಮಟ್ಟ ಇಳಿಕೆ; ಭತ್ತದ ಕೃಷಿ ಕೈಬಿಟ್ಟ ರೈತರು

Date:

ಪ್ರಸ್ತುತ ವರ್ಷದಲ್ಲಿ ರಾಜ್ಯಾದ್ಯಂತ ಮುಂಗಾರು ವಿಳಂಬ ಮತ್ತು ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳ ನೀರು ಬೆಳೆಗೆ ಸಾಕಾಗುವುದಿಲ್ಲವೆಂಬ ಆತಂಕದಿಂದ ಕಾವೇರಿ ಜಲಾನಯನ ಪ್ರದೇಶದ ಬಹುತೇಕ ರೈತರು ಭತ್ತದ ಕೃಷಿಯನ್ನು ಕೈಬಿಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರಿನ ರೈತರು ವಿಶ್ವೇಶ್ವರಯ್ಯ ನಾಲೆ ಮತ್ತು ಫೀಡರ್ ಕಾಲುವೆಗಳನ್ನು ಅವಲಂಬಿಸಿದ್ದಾರೆ. ಟಿ. ನರಸೀಪುರದ ತಲಕಾಡು ಪ್ರದೇಶ ಮತ್ತು ಕೊಳ್ಳೇಗಾಲದ ಕೆಲವು ಭಾಗಗಳ ರೈತರು ಕಬಿನಿ ಜಲಾಶಯದ ನೀರನ್ನು ಅವಲಂಬಿಸಿದ್ದಾರೆ. ಜಲಾಶಯ ಮತ್ತು ಕಾಲುವೆಗಳಲ್ಲಿ ನೀರು ಇಳಿಕೆಯಾಗುತ್ತಿರುವ ಕಾರಣ ಮುಂಗಾರು ಬೆಳೆಯನ್ನು ಬಿತ್ತನೆ ಮಾಡದೆ ಕೃಷಿಯನ್ನು ಕೈಬಿಟ್ಟಿದ್ದಾರೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಜುಲೈ ಅಂತ್ಯದಲ್ಲಿ 113 ಅಡಿಗೆ ಮತ್ತು ಕಬಿನಿ ಜಲಾಶಯದ ನೀರಿನ ಮಟ್ಟ 2,282 ಅಡಿಗೆ ಏರಿದಾಗ ಕೃಷಿ ಚಟುವಟಿಕೆಗಳು ಚುರುಕುಗೊಂಡವು. ಅರೆ ಬೆಳೆ ಬೆಳೆಯಲು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯ ಪ್ರದೇಶದಲ್ಲಿ ತಿಂಗಳಿಗೆ 15 ದಿನ ನೀರು ಹರಿಸುವುದಾಗಿ ನೀರಾವರಿ ಸಲಹಾ ಸಮಿತಿ ಭರವಸೆ ನೀಡಿತ್ತು. ಆದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಸರ್ಕಾರವು ತಮಿಳುನಾಡಿಗೆ 25 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದ್ದರಿಂದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟವು 97.38 ಅಡಿಗೆ ಇಳಿದಿದ್ದು, ಕಬಿನಿ ಜಲಾಶಯದ ನೀರಿನ ಮಟ್ಟ 2276.25 ಅಡಿಗೆ ಇಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರು ತಾಲೂಕುಗಳಲ್ಲಿ ಭತ್ತದ ಕೃಷಿ ಮತ್ತು ಇತರೆ ಕೃಷಿಗೆ ಹೊಡೆತ ಬಿದ್ದಿದೆ. ಆದರೂ ಕೆರೆಗಳು ಮತ್ತು ನೀರಾವರಿ ಪಂಪ್‌ಸೆಟ್‌ಗಳ ನೀರನ್ನು ಅವಲಂಬಿಸಿರುವ ಕೆಲವು ಭಾಗಗಳಲ್ಲಿ ಭತ್ತದ ನಾಟಿಯನ್ನು ಕೈಗೊಂಡಿದ್ದಾರೆ” ಎಂದು ಸ್ಥಳೀಯ ರೈತರೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ರೋಗಿಗಳ ಜೀವ ಉಳಿಸಲು ರಕ್ತದಾನ ಮಾಡಿದ ಕಿಮ್ಸ್ ವೈದ್ಯರು, ಸಿಬ್ಬಂದಿ

“ಭತ್ತದ ಕೃಷಿಗೆ ಹೆಸರುವಾಸಿಯಾದ ತಲಕಾಡು ಪ್ರದೇಶವು ಹಾನಿಗೊಳಗಾಗಿದ್ದು, ಬೆಳೆಗೆ ಸಾಕಷ್ಟು ನೀರು ಸಿಗುವುದಿಲ್ಲವೆಂಬ ಭಯದಿಂದ ಬಹುತೇಕ ರೈತರು ಕಂಗಾಲಾಗಿದ್ದಾರೆ. ಕೆಲ ರೈತರು ದ್ವಿದಳ ಧಾನ್ಯಗಳನ್ನು ಬೆಳೆಯಲು ಪ್ರಯತ್ನಿಸಿ, ಬಿತ್ತನೆ ಮಾಡಿದ್ದರು. ಆದರೆ ಮಳೆಯ ಕೊರತೆಯಿಂದಾಗಿ ಉತ್ತಮ ಇಳುವರಿ ಸಿಗಲಿಲ್ಲ” ಎಂದು ರೈತರು ಬೇಸರ ವ್ಯಕ್ತಪಡಿಸಿದರು.

ಕೊಳ್ಳೇಗಾಲ ತಾಲೂಕಿನ ಸಿಸಳೆ, ಮೂಗೂರು ಮತ್ತು ಕೆಲವು ಭಾಗಗಳಲ್ಲಿ ಅನೇಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಆಕಾಶದತ್ತ ನೋಡುತ್ತಿದ್ದರೆ, ಫೀಡರ್ ಕಾಲುವೆಗಳಿಂದ ಸಾಕಷ್ಟು ನೀರಿಲ್ಲದೆ ನಿಂತಿರುವ ಕಬ್ಬಿನ ಬೆಳೆಗಳು ಸಹ ಕೆಟ್ಟದಾಗಿ ಹಾನಿಗೊಳಗಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವನತಿಯತ್ತ ಬದನವಾಳು ಖಾದಿ ಕೇಂದ್ರ: ಅಳಿಸಲಿದೆಯೇ ಗಾಂಧೀ ಭೇಟಿಯ ನೆನಪು?

ಸರ್ಕಾರ ಮತ್ತು ಸಂಬಂಧಪಟ್ಟ ಮಂಡಳಿ ತಕ್ಷಣವೇ ಗಮನಹರಿಸಿ ಈ ಐತಿಹಾಸಿಕ ಬದನವಾಳು...

ಮೈಸೂರು | ಕಸಮುಕ್ತ ನಗರವನ್ನಾಗಿಸುವಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದು: ಸಚಿವ ಹೆಚ್ ಸಿ ಮಹದೇವಪ್ಪ

ಸಾಂಸ್ಕೃತಿಕ ನಗರಿಯನ್ನು ಹಸಿರುಮಯ ಮತ್ತು ಕಸಮುಕ್ತ ನಗರವನ್ನಾಗಿ ಮಾಡುವಲ್ಲಿ ಸಾರ್ವಜನಿಕರ ಜವಾಬ್ದಾರಿ...

ಕೆ ಆರ್ ಪೇಟೆ | ಸರ್ಕಾರಿ ಶಾಲೆ ಉಳಿವಿಗಾಗಿ ಸ್ವಂತ ಖಾಸಗಿ ಶಾಲೆ ಮುಚ್ಚಿಸಿದ ಶಾಸಕ ಹೆಚ್ ಟಿ ಮಂಜು: ವೈ ಕೆ ತಿಮ್ಮೆಗೌಡ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು ತಮ್ಮ ಹುಟ್ಟೂರಿನಲ್ಲಿ...

ಕೆ ಆರ್ ಪೇಟೆ | ಕೌಟುಂಬಿಕ ಕಲಹ; ದಂಪತಿಗಳ ಅಸಹಜ ಸಾವು

ಕೌಟುಂಬಿಕ ಕಲಹದ ಹಿನ್ನೆಲೆ ನವದಂಪತಿಗಳಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ...