ಮಂಡ್ಯ | ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮ ರದ್ದಿಗೆ ಆಗ್ರಹ

Date:

ಶ್ರೀರಂಗಪಟ್ಟಣದಲ್ಲಿ ಆಯೋಜಿಸಿರುವ ಹಿಂದೂ ಜಾಗರಣಾ ವೇದಿಕೆಯ ಶಾಂತಿ ಸೌಹಾರ್ದತೆಯ ವಿರೋಧಿ ಕಾರ್ಯಕ್ರಮವನ್ನು ರದ್ದುಪಡಿಸಿ ಜನಸಾಮಾನ್ಯರಿಗೆ ಹನುಮ ಜಯಂತಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು  ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.

ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, “ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್‌ 17ರಿಂದ 24ರವರೆಗೆ ಹನುಮ ಮಾಲೆ ಮತ್ತು ಸಂಕೀರ್ಣತಾ ಯಾತ್ರೆಯನ್ನು ಆಯೋಜಿಸಿದ್ದು, ಸದರಿ ಯಾತ್ರೆಗೆ ಸಾವಿರಾರು ಜನರಿಗೆ ಬಲವಂತದ ಮಾಲೆ ಹಾಕಿ ಹಣ ಕೊಟ್ಟು ಮತ್ತು ಬಾಡಿಗೆ ಜನರು ಬರಲು ತಯಾರಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ವರ್ಷ ಹಿಂದೂ ಜಾಗರಣಾ ವೇದಿಕೆ ಇದೇ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಮುಸ್ಲಿಮರ ಮನೆಗಳ ಮೇಲೆ ದಾಳಿ ಮಾಡಿ ಮತ್ತು ಜಮಿಯಾ ಮಸೀದಿಗೆ ನುಗ್ಗಲು ಪ್ರಯತ್ನಿಸಿದ್ದರು. ಹಾಗೆಯೇ ಅವರ ಕಾರ್ಯಕ್ರಮದ ಉದ್ದೇಶವು ಜಮಿಯಾ ಮಸೀದಿಯನ್ನು ಕೆಡವಿ ಮೂಡಲ ಬಾಗಿಲು ಆಂಜನೇಯ ದೇವಸ್ಥಾನ ಮಾಡುತ್ತೇವೆಂದು ಕಾರ್ಯಕ್ರಮವೊಂದರಲ್ಲಿ ಬಹಿರಂಗವಾಗಿ ಘೋಷಣೆ ಮಾಡಿದ್ದರು. ಪೂಜಾ ಸ್ಥಳಗಳ ಕಾಯ್ದೆ 1991ರ ಪ್ರಕಾರ ಇದು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧವಾಗಿರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಾರಿಯೂ ಕೂಡ ಹನುಮ ಜಯಂತಿಯ ಹೆಸರಿನಲ್ಲಿ ಹಿಂದೂ ಜಾಗರಣಾ ವೇದಿಕೆಯು ಮಸೀದಿ ಕೆಡವಿ ಮಂದಿರ ಕಟ್ಟುವ ಘೋಷಣೆಯೊಂದಿಗೆ ಮಾಲಾಧಾರಣೆ-2023 ಕಾರ್ಯಕ್ರಮವನ್ನು ಆಯೋಜಿಸಿದ್ದು, ಅವರ ಕರಪತ್ರದಲ್ಲಿಯೇ “ಮತಾಂಧ ಟಿಪ್ಪುವಿನ ಆಕ್ರಮಣಕ್ಕೆ ಒಳಗಾದ ಶ್ರೀ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ ಸಂಕಲ್ಪಕ್ಕೆ ನಡೆಯುವ ಈ ಜನಾಂದೋಲನದಲ್ಲಿ ಭಾಗವಹಿಸಿ” ಎಂದು ಜನರಿಗೆ ಕರೆ ಕೊಡುತ್ತಾ ಶಾಂತವಾಗಿರುವ ಶ್ರೀರಂಗಪಟ್ಟಣದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಹಾಗೂ ಜನಾಂಗೀಯ ಗಲಭೆ ಹೆಚ್ಚಿಸುವ ಪ್ರಯತ್ನಗಳನ್ನು ಹಿಂದೂ ಜಾಗರಣಾ ವೇದಿಕೆಯು ಮಾಡುತ್ತಿದೆ” ಎಂದರು.

“ಈ ಬಾರಿಯೂ ಶ್ರೀರಂಗಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿ ಮಾಡಲು ಮತ್ತು ಮಸೀದಿ ಕೆಡವಿ ಶಾಂತಿ ಸುವ್ಯವಸ್ಥೆ ಹಾಳುಮಾಡಲು, ಬೇರೆ ಜಿಲ್ಲೆಗಳಿಂದ ಹಣ ಕೊಟ್ಟು ಜನರನ್ನು ಕರೆಸಿ ಕಾರ್ಯಕ್ರಮ ಆಯೋಜಿಸಿರುತ್ತಾರೆ. ಆದ್ದರಿಂದ ಹಿಂದೂ ಜಾಗರಣಾ ವೇದಿಕೆಯ ಶ್ರೀರಂಗಪಟ್ಟಣದ ಡಿಸೆಂಬರ್ 24 ರ ಕಾರ್ಯಕ್ರಮವನ್ನು ರದ್ದುಪಡಿಸಿ, ಈ ಸಂಘಟನೆಯ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ನಿಷೇಧ ಹೇರಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ತಮ್ಮ ಸಂಬಂಧಿಕರಿಗೆ ಟಿಕೆಟ್‌ ಗಿಟ್ಟಿಸಲು ಪ್ರಮುಖ ಕಾಂಗ್ರೆಸ್ಸಿಗರ ಲಾಬಿ

“ಹನುಮ ಮಾಲೆ ಸಂದರ್ಭದಲ್ಲಿ ಜನಸಾಮಾನ್ಯರು ಬಯಸುವುದಾದರೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಹನುಮ ಜಯಂತಿ ಮಾಡಲು ಸೂಕ್ತ ನಿಬಂಧನೆಗಳೊಂದಿಗೆ ಆಚರಣೆಗೆ ಅವಕಾಶ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಸಮಾನ ಮನಸ್ಕ ವೇದಿಕೆ ಜಿಲ್ಲಾ ಸಂಚಾಲಕರು, ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...