ಮಂಡ್ಯ | ಹೆಣ್ಣುಭ್ರೂಣ ಹತ್ಯೆ ಪ್ರಕರಣ ಹೆಚ್ಚಳ; ಆರೋಗ್ಯಾಧಿಕಾರಿಗಳ ವಿರುದ್ಧ ಆರೋಪ

Date:

ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಹೆಣ್ಣುಭ್ರೂಣ ಹತ್ಯೆ ಮಾಡಲಾಗುತ್ತಿತ್ತೆಂಬ ವಿಚಾರ ಸದ್ಯ ಬಯಲಾಗಿದೆ. ಈ ವಿಚಾರವಾಗಿ ಮಂಡ್ಯದ ಆರೋಗ್ಯಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ.

“ಮಂಡ್ಯದ ನರ್ಸಿಂಗ್ ಹೋಂಗಳಲ್ಲಿ ಭ್ರೂಣ ಪತ್ತೆ ಮಾಡುತ್ತಿದ್ದರು. 2021ರಲ್ಲೇ ನನಗೆ ಈ ಬಗ್ಗೆ ಮಾಹಿತಿ ಇತ್ತು. ಅದರೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದರು. ಇದೀಗ 100 ಗಂಡು ಮಕ್ಕಳಿದ್ದರೆ, 60 ಮಂದಿ ಹೆಣ್ಣು ಮಕ್ಕಳಿದ್ದಾರೆ. ಗರ್ಭಪಾತ, ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಏಜೆಂಟ್​ಗಳ ದೊಡ್ಡ ತಂಡವೇ ಇದೆ” ಎಂದು ತಿಳಿಸಿದ್ದಾರೆ.

ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಎಂ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮೊದಲಿಗೆ ಭ್ರೂಣ ಪತ್ತೆ ಮಾಡುತ್ತಾರೆ. ನಂತರ ಹೆಣ್ಣು ಭ್ರೂಣವಾದರೆ ಹಣ ನಿಗದಿ ಮಾಡುತ್ತಾರೆ. ಇದರಲ್ಲಿ ಆಸ್ಪತ್ರೆ ವೈದ್ಯರು ಮತ್ತು ಏಜೆಂಟರ್‌ಗಳ ದೊಡ್ಡ ಜಾಲವೇ ಇದೆ. ನಾನು ಮೆಡಿಕಲ್ ಸ್ಟೋರ್ ಇಟ್ಟಿದ್ದೇನೆ. ಗರ್ಭಪಾತದ ಮಾತ್ರೆ ಕೇಳಿಕೊಂಡು ಮೆಡಿಕಲ್ ಸ್ಟೋರ್​ಗೆ ಬರುತ್ತಿದ್ದರು. ನಾವು ಮಾತ್ರೆಯನ್ನ ಕೊಡುತ್ತಿರಲಿಲ್ಲ. ನಂತರ ಮಂಡ್ಯದಲ್ಲಿ ಏಜೆಂಟ್ ಮೂಲಕ‌ ಗರ್ಭಪಾತ ಮಾಡಿಸಿಕೊಳ್ಳುತ್ತಿರುವುದು ಗೊತ್ತಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗರ್ಭಪಾತಕ್ಕೆ ಓಳಗಾದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಚಾರ ಮಾಡಿದಾಗ ಹಣ ಕೊಟ್ಟು ಗರ್ಭಪಾತ ಮಾಡಿಸಿರುವುದಾಗಿ ಹೇಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವ ನರ್ಸ್​ಗಳು, ನಿವೃತ್ತಿ ನರ್ಸ್‌ಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕೆ ಆರ್ ಪೇಟೆ ಭಾಗದಲ್ಲಿ ಹೆಚ್ಚು ಈ ಕೃತ್ಯ ನಡೆದಿದೆ. ನಗರ ಪ್ರದೇಶದಲ್ಲಿ ಕಡಿಮೆ ನಡೆದಿದೆ. ದುಡ್ಡಿನ ಆಸೆಗಾಗಿ ಹಣವಂತರು ಮನೆಯ ಮಹಿಳೆಯ ಗರ್ಭದಲ್ಲಿ ಹೆಣ್ಣು ಭ್ರೂಣ ಇದೆ ಎಂದು ಸುಳ್ಳುಹೇಳಿ ಗಂಡುಭ್ರೂಣವನ್ನೂ ತೆಗೆದಿರುವ ಘಟನೆಗಳೂ ನಡೆದಿದೆ” ಎಂದು ತಿಳಿಸಿದರು.

“ಈ ಹಿಂದೆ ​ಗರ್ಭಪಾತದ ಮಾತ್ರೆಗಳನ್ನು ಕೊಡುತ್ತಿದ್ದರು. ಸದ್ಯ ಸರ್ಕಾರ ಈ ಮಾತ್ರೆಗಳನ್ನು ಬ್ಯಾನ್ ಮಾಡಿದೆ. ಈ ಪ್ರಕರಣವನ್ನು ಸಿಐಡಿಗೆ ವಹಿಸಬೇಕು. ಆರೋಗ್ಯ ಅಧಿಕಾರಿಗಳು ಸೇರಿದಂತೆ ಅನೇಕ ದೊಡ್ಡ ದೊಡ್ಡ ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅಕ್ರಮವಾಗಿ ನಿವೇಶನ ಮಾರಾಟ; ಖಾಲಿ ಜಾಗದಲ್ಲಿ ಗುಡಿಸಲು ಹಾಕಿ ಸ್ಥಳೀಯರ ಧರಣಿ

ಶ್ರೀರಂಗಪಟ್ಟಣ ಸದಸ್ಯ ನಂದೀಶ್‌ ಎಸ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಂಡ್ಯ ತಾಲೂಕಿನಲ್ಲಿ ಗರ್ಭಪಾತ, ಹೆಣ್ಣುಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ. ಆದಷ್ಟು ಬೇಗ ಈ ಪ್ರಕರಣ ತನಿಖೆಗೆ ಒಳಪಟ್ಟು ಇಂತಹ ಕೃತ್ಯಗಳಿಗೆ ಕಡಿವಾಣ ಬೀಳಬೇಕು” ಎಂದು ತಿಳಿಸಿದರು.

ಈ ಬಗ್ಗೆ ಈ ದಿನ.ಕಾಮ್‌ ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಸಂಪರ್ಕಿಸಿದ್ದು, “ನಮ್ಮ ಜಿಲ್ಲೆಯಲ್ಲಿ ಯಾವುದೇ ಗರ್ಭಪಾತದ ಪ್ರಕರಣಗಳು ಕಂಡುಬಂದಿಲ್ಲ. ಅಂತಹ ಪ್ರಕರಣಗಳ ಕುರಿತು ನಮ್ಮ ಗಮನಕ್ಕೆ ಬಂದಿಲ್ಲ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಪ್ರತಿಕ್ರಿಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...