ಮಂಡ್ಯ | ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕೊನೆಗೂ ಸಿಕ್ಕ ಮುಕ್ತಿ; ಕಾಲೇಜಿಗೆ ಬಸ್‌ ಸೇವೆ ಆರಂಭ

Date:

ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಪಟ್ಟಣದ ಬಸ್‌ ನಿಲ್ದಾಣದಿಂದ ಸರ್ಕಾರ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು, ಮಹಿಳಾ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಐಟಿಐ ಕಾಲೇಜುಗಳಿಗೆ ಬಸ್‌ ಸೇವೆ ಆರಂಭವಾಗಿದೆ. ಕೆ.ಆರ್‌ ಪೇಟೆ ಶಾಸಕ ಎಚ್‌.ಟಿ ಮಂಜು ಅವರು ಬಸ್‌ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಕೆ.ಆರ್‌ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಐಟಿಐ ಕಾಲೇಜುಗಳು ಪಟ್ಟಣದ ಬಸ್‌ ನಿಲ್ಧಾಣದಿಂದ 4 ಕಿ.ಮೀ ದೂರದಲ್ಲಿವೆ. ಮಹಿಳಾ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಜೂನಿಯರ್ ಕಾಲೇಜು 3 ಕಿ.ಮೀ ದೂರದಲ್ಲಿವೆ. ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್‌ ನಿಲ್ದಾಣದಿಂದ ಕಾಲೇಜಿಗೆ, ಕಾಲೇಜಿನಿಂದ ಬಸ್‌ ನಿಲ್ದಾಣಕ್ಕೆ ನಡೆದುಕೊಂಡೇ ಹೋಗಬೇಕಿತ್ತು.

ಹೀಗಾಗಿ, ವಿದ್ಯಾರ್ಥಿಗಳು ನಡೆದೇ ಸುಸ್ತಾಗುತ್ತಿದ್ದರಿಂದ ಬೋಧನೆಯ ಕಡೆಗೆ ಗಮನವಿಟ್ಟು ಆಲಿಸಲಾಗುತ್ತಿಲ್ಲವೆಂದು ಹೇಳುತ್ತಲೇ ಇದ್ದರು. ಹಲವಾರು ವರ್ಷಗಳಿಂದ ಬಸ್‌ ನಿಲ್ದಾಣದಿಂದ ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಬಸ್‌ ವ್ಯವಸ್ಥೆಗಾಗಿ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿತ್ತು. ಮಾತ್ರವಲ್ಲದೆ, ಹಿಂದಿನ ಶಾಸಕರಿಗೆ ಮನವಿಯನ್ನೂ ಸಲ್ಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ವಿದ್ಯಾರ್ಥಿಗಳ ವರ್ಷಗಳ ಬೇಡಿಕೆ ಈಡೇರಿದೆ. ಬಸ್‌ ನಿಲ್ದಾಣದಿಂದ ಕಾಲೇಜುಗಳಿಗೆ ಬಸ್‌ ಸಂಚಾರ ವ್ಯವಸ್ಥೆ ಒದಗಿಸಲಾಗಿದೆ.

ಬಸ್‌ ವ್ಯವಸ್ಥೆಯ ಬಗ್ಗೆ ಮಾತನಾಡಿರುವ ಶಾಸಕ ಮಂಜು, “ವಿದ್ಯಾರ್ಥಿ ಜೀವನದಲ್ಲಿ ನಾನು ಸಹ ಬಹಳ ಕಷ್ಟಪಟ್ಟಿದ್ದೇನೆ. ಆದ್ದರಿಂದ ತಾಲೂಕಿನ ವಿದ್ಯಾರ್ಥಿಗಳ ಹಿತವನ್ನು ಕಾಪಾಡುವುದು ನನ್ನ ಕರ್ತವ್ಯವಾಗಿದೆ. ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದಿಂದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೂ ಬಸ್ ಸಂಚರಿಸಲು ನಗರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...