ಮಂಡ್ಯ | ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆ; ಪತಿಯ ವಿರುದ್ಧ ಕೊಲೆ ಆರೋಪ

Date:

ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಮಂಡ್ಯದ ನೆಹರೂನಗರದ ಪೂರ್ವ ಬಡಾವಣೆಯಲ್ಲಿ ನಡೆದಿದೆ.

ಮೃತ ಮಹಿಳೆ ಪದ್ಮ(36). ಇವರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಇವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರೀತಿಸಿ ಮದುವೆಯಾದ ಬಳಿಕ ಚೆನ್ನಾಗಿಯೇ ಇದ್ದ ಸಂಸಾರದಲ್ಲಿ, ದಿನ ಕಳೆದಂತೆ ಜಗಳ ನಡೆಯುತ್ತಿತ್ತು. ಇದೀಗ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವಳು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಮಹಿಳೆ ಪದ್ಮ ಪತಿ ಸಿದ್ದರಾಜು ಎಂಬಾತನ ಮೇಲೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, “ಇದು ಆತ್ಮಹತ್ಯೆಯಲ್ಲ ಕೊಲೆ” ಎಂದು ದೂರಿದ್ದಾರೆ.

ರಾಮನಗರ ತಾಲೂಕಿನ ಅಂಕನಹಳ್ಳಿ ನಿವಾಸಿಯಾಗಿದ್ದ ಪದ್ಮ ಹಾಗೂ ಮಂಡ್ಯ ಮೂಲದ ಸಿದ್ದರಾಜು ಪ್ರೀತಿಸಿ, 13 ವರ್ಷದ ಹಿಂದೆ ಮದುವೆಯಾಗಿದ್ದರು. ಪತಿ ಸಿದ್ದರಾಜು ಹಣಕ್ಕಾಗಿ ಸಾಕಷ್ಟು ಪೀಡಿಸುತ್ತಿದ್ದ. ಆಗಾಗ ಗಲಾಟೆಯೂ ನಡೆಯುತ್ತಿತ್ತು” ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗ್ರಾಮೀಣ ಅಂಚೆ ಸೇವಕ ಹುದ್ದೆಗಾಗಿ ಅಂಕಪಟ್ಟಿ ತಿದ್ದುಪಡಿ; 25 ಮಂದಿ ವಿರುದ್ಧ ಪ್ರಕರಣ ದಾಖಲು

“ಮದುವೆಯಾದ ಬಳಿಕ ಒಂದು ಬಾರಿಗೂ ತವರು ಮನೆಗೆ ಸಿದ್ದರಾಜು ಕಳುಹಿಸಲಿಲ್ಲ. ಅಲ್ಲದೆ ಸಂಬಂಧಿಕರನ್ನೂ ಕೂಡ ಮನೆಗೆ ಬರದಂತೆ ಒತ್ತಡ ಹಾಕುತ್ತಿದ್ದ. ಆತ್ಮಹತ್ಯೆ ಮಾಡಿಕೊಂಡ ನಂತರ ವಿಷಯ ತಿಳಿಸದೇ ಅಂತ್ಯಕ್ರಿಯೆಗೆ ತಯಾರಿ ಕೂಡ ಮಾಡಿಕೊಂಡಿದ್ದ” ಎಂದು ವಿಚಾರ ತಿಳಿದು ಮಂಡ್ಯಕ್ಕೆ ಬಂದ ಮಹಿಳೆ ಪದ್ಮ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಿದ್ದರಾಜು ಎಂಬಾತನನ್ನು ಪೂರ್ವಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಂಬಂಧಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...