ಮಂಡ್ಯದಲ್ಲಿ ಚಿನ್ನಾಭರಣ ದರೋಡೆ: ಕೃತ್ಯ ನೋಡಿದ ವ್ಯಕ್ತಿಯನ್ನು ಕೊಲೆಗೈದು ಪರಾರಿಯಾದ ಕಳ್ಳರು

Date:

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದೆ. ಚಿನ್ನಾಭರಣ ಮಳಿಗೆಯೊಂದಕ್ಕೆ ದರೋಡೆಗೆ ಬಂದಿದ್ದ ಕಿಡಿಗೇಡಿಗಳು, ತಮ್ಮ ಕೃತ್ಯವನ್ನು ನೋಡಿದ ವ್ಯಕ್ತಿಯೊಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾರೆ.

ಕೊಲೆಯಾದ ವ್ಯಕ್ತಿ ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್‌ನ ಮಾಲೀಕ ಮಾದಪ್ಪ (75).

ಗ್ರಾಮದ ಮುಖ್ಯರಸ್ತೆಯಲ್ಲಿರುವ ಮಹಾಲಕ್ಷ್ಮೀ ಜ್ಯುವೆಲರ್ಸ್‌ಗೆ ರಾತ್ರಿ 2 ಗಂಟೆ ಸುಮಾರಿಗೆ ದರೋಡೆಕೋರರು ನುಗ್ಗಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಅಂಗಡಿಯ ಬಾಗಿಲನ್ನು ಒಡದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಶಬ್ದ ಕೇಳಿ ಬಂದ ಮಾದಪ್ಪನವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ, ಕತ್ತು ಹಿಸುಕಿ ಕೊಲೆಗೈದು ತಪ್ಪಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ದರೋಡೆಕೋರರು ಅಂಗಡಿಯಿಂದ 150 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, ಹಿತ್ತಾಳೆ ಒಡವೆಗಳು ಹಾಗೂ ಸುಮಾರು 30,000 ರೂ. ಮೌಲ್ಯದ ಕೃತಕ ಚಿನ್ನದ ಆಭರಣಗಳನ್ನು ಕದ್ದಿದ್ದಾರೆ. ಜೊತೆಗೆ, ಸಿಸಿಟಿವಿ ಕ್ಯಾಮರಾದ ಡಿವಿಆರ್ ಘಟಕವನ್ನೂ ಕಿತ್ತುಕೊಂಡು ಹೋಗಿದ್ದಾರೆ ಎಂದು ಅಂಗಡಿಯ ಮಾಲೀಕ ಶೇಷರಾವ್ ಹೇಳಿದ್ದಾರೆ.

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿ. ಕೃಷ್ಣಪ್ಪ, ಸಿಪಿಐ ಬಿ.ಎಸ್. ಶ್ರೀಧರ್, ಮತ್ತು ಪಿಎಸ್‌ಐ ಡಿ. ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯದಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡುವಂತೆ ಹಾಗೂ ರಾಜ್ಯಪಾಲರು ಒಳಮೀಸಲಾತಿ ವಿಧೇಯಕಕ್ಕೆ...

SIRನಿಂದ ದಲಿತ-ಬುಡಗಟ್ಟು ಸಮುದಾಯದ ಹಕ್ಕುಗಳಿಗೂ ಅಪಾಯ; ಶಿವಸುಂದರ್‌ ಎಚ್ಚರಿಕೆ

ಭಾರತ ಚುನಾವಣಾ ಆಯೋಗದ ಮೂಲಕ ಕೇಂದ್ರ ಸರ್ಕಾರವು ವಿಶೇಷ ಮತದಾರರ ಪಟ್ಟಿ...

ಮಂಡ್ಯ | ಬೂದನೂರು ಉತ್ಸವ-2026: ಯುವಜನತೆ ನಗರದ ಚಿತ್ರಣವನ್ನು ಕಣ್ತುಂಬಿಕೊಳ್ಳಿ; ಎನ್ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಚಿತ್ರಣವನ್ನು ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಹೆಲಿಪ್ಯಾಡ್ ಸವಾರಿ ಪ್ರದರ್ಶನ...

ಮಂಡ್ಯ | ಅತಿಯಾದ ಮೊಬೈಲ್ ಬಳಕೆ ಅನಾರೋಗ್ಯಗಳಿಗೆ ರಹದಾರಿ: ಡಾ ನಿಶ್ಚಲಾನಂದ ಸ್ವಾಮೀಜಿ

ಜನಸಾಮಾನ್ಯರು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಪರಿಣಾಮವಾಗಿ, ಅವರ ದೈಹಿಕ ಮತ್ತು...