ದಲಿತ ಯುವಕನ ಕೊಲೆ; ದುರುಳರಿಗೆ ಕಠಿಣ ಶಿಕ್ಷೆಗೆ ಡಿವೈಎಫ್‌ಐ ಆಗ್ರಹ

Date:

ಬೆಂಗಳೂರು: ಕೆ.ಆರ್. ಪೇಟೆ ತಾಲೂಕು ಕತ್ತರಘಟ್ಟದಲ್ಲಿ ಜಮೀನು ವಿಷಯದಲ್ಲಿ ಜಯಕುಮಾರ್ ಎಂಬ ದಲಿತ ಯುವಕನನ್ನು ಹುಲ್ಲಿನ ಮೆದೆಯೊಳಗೆ ಹಾಕಿ ದಹಿಸಿರುವುದನ್ನು ಡಿವೈಎಫ್ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ.

“ಕೊಲೆ ಮಾಡಿದ ಆರೋಪಿ ಸಮಾಜಘಾತುಕ ರೌಡಿ ಶೀಟರ್ ಅನಿಲ್ ಕುಮಾರ್ ತಪ್ಪಿಸಿಕೊಂಡಿದ್ದಾನೆ. ಕೊಲೆಗಡುಕರನ್ನು ಪೊಲೀಸರು ಇನ್ನೂ ಬಂಧಿಸದಿರುವುದು ಕಾಣದ ಕೈಗಳ ಕೈವಾಡವು ಈ ಪ್ರಕರಣದಲ್ಲಿ ಸ್ಪಷ್ಟವಾಗಿದೆ, ಆದ್ದರಿಂದ ಈ ಕೊಲೆಯ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ತಪಿತಸ್ಥ ಕೊಲೆಗಡುಕರಿಗೆ ಕಠಿಣ ಶಿಕ್ಷೆ ನೀಡಬೇಕು” ಎಂದು ಒತ್ತಾಯಿಸಿದೆ.

ಜಯಕುಮಾರ ಪತ್ನಿ ಇದು ಕೊಲೆ ಎಂದು ದೂರು ನೀಡಿದ್ದರೂ ಪೊಲೀಸರು ಆತ್ಮಹತ್ಯೆ ಎಂದು ಕೇಸು ದಾಖಲಿಸಿಕೊಂಡಿರುವುದು ಖಂಡನೀಯ. ಈ ಗಂಭೀರ ಪ್ರಕರಣವನ್ನು ಆತ್ಮಹತ್ಯೆ ಕೇಸ್ ಬದಲಾಗಿ ಕೊಲೆ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...