ಗೆಜ್ಜಲಗೆರೆ ನಗರಸಭೆಗೆ ಸೇರ್ಪಡೆ ವಿರುದ್ಧ ಪ್ರತಿಭಟನೆ: ಮಂಡ್ಯದಲ್ಲಿ ಪತ್ರಿಕಾಗೋಷ್ಟಿ

Date:

​ಮದ್ದೂರು ತಾಲೂಕಿನ ಗೆಜ್ಜಲಗೆರೆ ಸೇರಿದಂತೆ ಮೂರು ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸುವ ಸರ್ಕಾರದ ಕ್ರಮವು ಸಂಪೂರ್ಣವಾಗಿ ಅವೈಜ್ಞಾನಿಕ ಮತ್ತು ನಿಯಮಬಾಹಿರವಾಗಿದೆ ಎಂದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಗಂಭೀರವಾಗಿ ಆರೋಪಿಸಿದರು.

​ಮಂಡ್ಯದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯಲ್ಲಿ ಮದ್ದೂರು ಶಾಸಕರ ನಡೆ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಉಲ್ಲಂಘನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

​​”ಮದ್ದೂರು ಶಾಸಕರು ಚಾಮನಹಳ್ಳಿ, ಸೋಮನಹಳ್ಳಿ, ಗೊರವನಹಳ್ಳಿ ಮತ್ತು ಗೆಜ್ಜಲಗೆರೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೆ, ಏಕಪಕ್ಷೀಯವಾಗಿ ಈ ಭಾಗಗಳನ್ನು ನಗರಸಭೆಗೆ ಸೇರಿಸಲು ಮುಂದಾಗಿದ್ದಾರೆ. ಈ ನಡೆ ಅಬ್ದುಲ್ ನಜೀರ್ ಸಾಬ್ ಮತ್ತು ಗಾಂಧೀಜಿಯವರ ‘ಪಂಚಾಯತ್ ರಾಜ್’ ಕನಸಿಗೆ ತಂದಿರುವ ಧಕ್ಕೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​​”ಗ್ರಾಮ ಪಂಚಾಯಿತಿಗಳ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಯಾವುದೇ ಕಾರ್ಯಸೂಚಿ ಮಂಡಿಸಿಲ್ಲ. ಗ್ರಾಮಸ್ಥರು ಮತ್ತು ಪಂಚಾಯಿತಿ ಸದಸ್ಯರ ಹಕ್ಕು ಚ್ಯುತಿ ಮಾಡಲಾಗುತ್ತಿದೆ. ನಗರೀಕರಣದ ಹೆಸರಿನಲ್ಲಿ ತಾಲೂಕಿನ ‘ಹಸಿರು ವಲಯ’ವನ್ನು(Green Zone) ಸರ್ವನಾಶ ಮಾಡಲು ಸಂಚು ರೂಪಿಸಲಾಗಿದೆ” ಎಂದು ಸುನಂದಾ ಜಯರಾಂ ಆಕ್ಷೇಪಿಸಿದರು.

​”ಈಗಾಗಲೇ ಈ ನಿರ್ಧಾರದ ವಿರುದ್ಧ ತಾಲೂಕು ಮಟ್ಟದಲ್ಲಿ ಹೋರಾಟ ನಡೆಯುತ್ತಿದ್ದು, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಲಾಗಿದೆ. ʼಗೆಜ್ಜಲಗೆರೆ ಗ್ರಾ.ಪಂ ಕಚೇರಿ ಎದುರು ಕಳೆದ 18 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದರೂ ಶಾಸಕರು ನೀಡಿದ್ದ ಭರವಸೆ ಈಡೇರಿಲ್ಲ. ಅವರು ಮಾತಿಗೆ ತಪ್ಪಿರುವುದು ಖಂಡನೀಯ. ​ಅಭಿವೃದ್ಧಿಯ ಹೆಸರಿನಲ್ಲಿ ಹಳ್ಳಿಗಳನ್ನು ನಾಶಮಾಡಿ ಜನರಿಗೆ ದ್ರೋಹ ಮಾಡುತ್ತಿರುವ ಈ ನಗರೀಕರಣದ ವಿರುದ್ಧ ಚಳವಳಿ ಅನಿವಾರ್ಯವಾಗಿದೆ” ಎಂದು ಅವರು ಎಚ್ಚರಿಸಿದರು.

ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ ಎಸ್ ರಾಧ ಮಾತನಾಡಿ, “ನಮ್ಮ ಪಂಚಾಯಿತಿಯು ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಬಲವಂತವಾಗಿ ನಗರಸಭೆಗೆ ಸೇರಿಸುವುದರಿಂದ ಸ್ಥಳೀಯ ಆಡಳಿತದ ಹಕ್ಕುಗಳಿಗೆ ಧಕ್ಕೆಯಾಗುತ್ತದೆ. 18 ದಿನಗಳಿಂದ ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಮೌನವಾಗಿರುವುದು ಖೇದಕರ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದೊಡ್ಡಬಳ್ಳಾಪುರ | ಒಂದೇ ಕಾಮಗಾರಿಗೆ ಎರಡು ಬಾರಿ ಗುದ್ದಲಿಪೂಜೆ; ಸಚಿವ ಮುನಿಯಪ್ಪ ವಿರುದ್ಧ ಶಾಸಕ ಧೀರಜ್‌ ಗರಂ

​ಮದ್ದೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಇ ಪಿ ಯೋಗೇಶ್ ಮಾತನಾಡಿ, “ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯು ಕೇವಲ ಒಂದು ಆಡಳಿತಾತ್ಮಕ ಘಟಕವಲ್ಲ, ಅದು ಸಾವಿರಾರು ಜನರ ಭಾವನೆ. ನಗರಸಭೆಗೆ ಸೇರ್ಪಡೆಯಾದರೆ ತೆರಿಗೆ ಹೊರೆ ಅಧಿಕವಾಗುತ್ತದೆ ಮತ್ತು ಹಳ್ಳಿಯ ಪರಿಸರ ನಾಶವಾಗುತ್ತದೆ. ಈ ನಿರ್ಧಾರವನ್ನು ಕೈಬಿಡುವವರೆಗೂ ನಮ್ಮ ಸತ್ಯಾಗ್ರಹ ಮುಂದುವರಿಯಲಿದೆ” ಎಂದು ತಿಳಿಸಿದರು.

ಗೆಜ್ಜಲಗೆರೆ ಗ್ರಾ.ಪಂ ಅಧ್ಯಕ್ಷೆ ಬಿ ಎಸ್ ರಾಧ, ಎಪಿಎಂಸಿ ಮಾಜಿ ಅಧ್ಯಕ್ಷ ಜಿ ಸಂ ಮಹೇಂದ್ರ, ತಾ ಪಂ ಮಾಜಿ ಅಧ್ಯಕ್ಷ ಇ ಪಿ ಯೋಗೇಶ್, ಜಿ ಹೆಚ್ ವೀರಪ್ಪ, ಚಂದ್ರಶೇಖರ್, ಲಿಂಗಪ್ಪಾಜಿ ಮತ್ತು ಯಜಮಾನ್ ಶಂಕರಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...