ಶ್ರೀರಂಗಪಟ್ಟಣ | ಉಚಿತ ಕೌಶಲ್ಯ ತರಬೇತಿ: ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

Date:

ಶ್ರೀರಂಗಪಟ್ಟಣದ ರೋಟರಿ ಸಂಸ್ಥೆ ಮತ್ತು ಶ್ರೀ ರಂಗನಾಯಕಿ ಸಮಾಜ ಹಾಗೂ ಕಾಮಧೇನು ಸ್ವಸಹಾಯ ಸ್ತ್ರೀ ಸಮಾಜದ ವತಿಯಿಂದ ಮೂರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ಯಂತ್ರ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಶಿಬಿರದಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಮಹಿಳೆಯರು ತರಬೇತಿಯನ್ನು ಪಡೆದುಕೊಂಡರು, ಹಾಗೆಯೇ ತರಬೇತಿಯನ್ನು ಪಡೆದುಕೊಂಡ ಎಲ್ಲ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ. ರಾಘವೇಂದ್ರ ಅವರು ಕಾರ್ಯಕ್ರಮದ ಕುರಿತು ಮಾತನಾಡಿ, “ಹೊಲಿಗೆ ತರಬೇತಿಯು ಮಹಿಳೆಯರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸುತ್ತದೆ. ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಮತ್ತು ಮನೆಯಿಂದಲೇ ಸ್ವ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹವಾಗುವ ದೃಷ್ಟಿಯಿಂದ ಹೊಲಿಗೆ(ಟೈಲರಿಂಗ್) ತರಬೇತಿ ಶಿಬಿರವನ್ನು ಆಯೋಜನೆ ಮಾಡಲಾಯಿತು. ಶಿಬಿರಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲ್ಲಿ” ಎಂದು ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನ ದಶಮಾನೋತ್ಸವ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೃಪಾಸಿನಿ, ಕಾಮಧೇನು ಸ್ವಸಹಾಯ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ರಂಗನಾಯಕಿ, ಸ್ತ್ರೀ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ, ರೋಟರಿ ಸಂಸ್ಥೆ ಕಾರ್ಯದರ್ಶಿ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಖಜಾಂಚಿ ಸರಸ್ವತಿ, ನಿರ್ದೇಶಕಿ ಗಾಯಿತ್ರಿ, ನಳಿನಿ, ಗುಣಶೇಖರಿ, ತರಬೇತಿದಾರರಾದ ರೂಪ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಶಿಬಿರಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...