ಶ್ರೀರಂಗಪಟ್ಟಣ: ಅಂಬೇಡ್ಕರ್ ಪ್ರತಿಮೆ ಸುತ್ತ ಕೇಸರಿ ಧ್ವಜ ಕಟ್ಟಲು ಸಿದ್ಧತೆ: ದಸಂಸ ನಾಯಕರ ಆಕ್ರೋಶ

Date:

ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಇರುವ ಮಂಟಪದ ಸುತ್ತಲು ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕೆಲವರು ದುರುದ್ದೇಶಪೂರ್ವಕವಾಗಿ ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿರುವುದಕ್ಕೆ ಮಂಡ್ಯದ ದಸಂಸ ನಾಯಕರಾದ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಟಪದ ಸುತ್ತಲೂ ದೊಡ್ಡ ಕಂಬಗಳನ್ನು ನೆಟ್ಟು ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದು, ಇದು ಶ್ರೀರಂಗಪಟ್ಟಣದ ಶಾಂತಿ-ಸೌಹಾರ್ದತೆ-ಸಹಬಾಳ್ವೆಗೆ ಭಂಗ ತರುವ ದುಷ್ಟ ಪ್ರಯತ್ನವಾಗಿದೆ. ಹಾಗಾಗಿ ಕೂಡಲೇ ಈ ದುಷ್ಕೃತ್ಯವನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗುರುಪ್ರಸಾದ್ ಕೆರಗೋಡು ಮನವಿ ಮಾಡಿದ್ದಾರೆ.

ಇದಲ್ಲದೆ ಸಂಘಪರಿವಾರದ ದುಷ್ಕೃತ್ಯವನ್ನು ಮಂಡ್ಯ ಹಾಗೂ ಶ್ರೀರಂಗಪಟ್ಟಣದ ದಸಂಸ ನಾಯಕರು ಕೂಡ ಖಂಡಿಸಿದ್ದು, ಕೂಡಲೇ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತೆರವುಗೊಳಿಸದಿದ್ದಲ್ಲಿ ಭಾರಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...