ಟಿಪ್ಪು ಜಯಂತಿ | ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಸರ್ಕಾರ

Date:

ಶುಕ್ರವಾರ (ನ.10) ಟಿಪ್ಪು ಜಂಯತಿಯಂದು ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ. ಇಂದು ಟಿಪ್ಪು ವರ್ಫ್‌ ಎಸ್ಟೇಟ್‌ ಸಂಘವು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿಯ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಯಾರೂ ಸಭೆ ಸೇರದಂತೆ ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ.

ಶ್ರೀರಂಗಪಟ್ಟಣ ತಹಶಿಲ್ದಾರ್‌ ಪರಶುರಾಮ ಸತ್ತಿಗೇರಿ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಸಿಆರ್‌ಪಿಸಿ ಕಲಂ 144 ಅಡಿಯಲ್ಲಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಪಟ್ಟಣದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ. ಯಾವುದೇ ರೀತಿಯ ಸಭೆ, ಸಮಾರಂಭ ಮತ್ತು ಮೆರವಣಿಗೆ ನಡೆಸುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಬ್ಯಾನರ್‌, ಬಂಟಿಂಗ್ಸ್‌, ಮೈಕ್‌, ಪಟಾಕಿ ಯಾವುದಕ್ಕೂ ಅವಕಾಶವಿಲ್ಲ. ಡಿಜೆ ಹಾಕುವಂತಿಲ್ಲ, ರಸ್ತೆ ರಡೆ ನಡೆಸುವಂತಿಲ್ಲ” ಎಂದು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ನವೆಂಬರ್ 11ರಂದು ಟಿಪ್ಪು ಜಯಂತಿ ಆಚರಣೆಗೆ ಆದೇಶ ಹೊರಡಿಸಿತ್ತು. ಅದರಂತೆ ಟಿಪ್ಪು ಜಯಂತಿ ಕಾರ್ಯಕ್ರಮಗಳನ್ನು ಸರ್ಕಾರ ನಡೆಸುತ್ತಿತ್ತು. ಆದರೆ, ಬಿಜೆಪಿ ಆಡಳಿತದಲ್ಲಿ ಟಿಪ್ಪು ಜಯಂತಿಯಲ್ಲಿ ನಿಲ್ಲಿಸಲಾಗಿತ್ತು. ಇದೀಗ, ಕಾಂಗ್ರೆಸ್‌ ಸರ್ಕಾರವೇ ಮತ್ತೆ ಅಧಿಕಾರದಲ್ಲಿದ್ದರೂ ತಾನೇ ಜಾರಿಗೆ ತಂದಿದ್ದ ಅಚರಣೆಗೆ ತಾನೇ ವಿರುದ್ಧವಾಗಿದೆ ಎಂಬುದನ್ನು ನಿಷೇಧಾಜ್ಞೆ ಸಾಬೀತು ಪಡಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೆಲ್ಲದರ ನಡುವೆ, ಟಿಪ್ಪು ಹುಟ್ಟಿದ ದಿನಾಂಕ ನವೆಂಬರ್ ತಿಂಗಳು ಅಲ್ಲ, ಡಿಸೆಂಬರ್ 1 ಎಂದು ಸಂಶೋಧಕರು ಮತ್ತೆ ಮಾಡಿದ್ದಾರೆ. ಹೀಗಾಗಿ, ಟಿಪ್ಪು ಜಯಂತಿಯ ದಿನಾಂಕವೂ ಬದಲಾಗಿದೆ. ಆದರೆ, ಅಂದು ಕೂಡ ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ, ಸರ್ಕಾರ ಈ ವರ್ಷ ಟಿಪ್ಪು ಜಯಂತಿ ಆಚರಿಸುವುದು ಅನುಮಾನವಾಗಿ ಉಳಿದಿದೆ.

ಆದರೆ, ಹಲವರು ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಿಸುತ್ತಾರೆ. ಅಂತೆಯೇ ಟಿಪ್ಪು ವರ್ಫ್‌ ಎಸ್ಟೇಟ್‌ ಶುಕ್ರವಾರ ಟಿಪ್ಪು ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ, ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ. ಇದು ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಟಿಪ್ಪುಗೆ ಮಾಡಿದ ಅವಮಾನ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...