ಚಿಂತಾಮಣಿ : ಚಾಲಕನ ಅಜಾಗರೂಕತೆ ಮತ್ತು ಅತಿವೇಗವು ಮತ್ತು ನಿರ್ಲಕ್ಷದಿಂದ ಕಾರು ಚಲಾಯಿಸಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿ ನಾಲ್ಕು ಜನ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರ ಸಮೀಪ ನಡೆದಿದೆ.
ಚಿಂತಾಮಣಿ ನಗರದಲ್ಲಿ ವಾಸಿಯಾಗಿರುವ ಮಂಗಳಮುಖಿಯರು ಅನ್ಯ ಕಾರ್ಯನಿಮಿತ್ತ ತ್ರಿಚಕ್ರ ವಾಹನದಲ್ಲಿ ಮಾಡಿಕೆರೆ ಕ್ರಾಸ್ ಗೆ ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಜೋರಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಂಗಳಮುಖಿಯರಾದ ಮಮತಾ ಸರೋಜ,ಶಬನಾ,ಆಟೋ ಚಾಲಕನಾದ ನವಾಜ್ ಇವರಿಗಳಿಗೆ ಗಂಭೀರ ಗಾಯಗಳಾಗಿದ್ದು,ಚಿಂತಾಮಣಿ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಅಂಬುಲೆನ್ಸ್ ಮುಖಾಂತರ ದಾಖಲಿಸಲಾಯಿತು.
ಆ ವೇಳೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಗಾಯಾಳುಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡದೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಮಂಗಳಮುಖಿಯರು ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಅವರು ಅಪಘಾತವಾಗಿ ಅರ್ಧ ಗಂಟೆಗಿಂತ ಹೆಚ್ಚು ಸಮಯವಾಗಿದ್ದರು ಆಸ್ಪತ್ರೆಗೆ ಬಂದ ಗಾಯಗಳುಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿದೆ ವಿಳಂಬ ಮಾಡುತ್ತಿರುವುದಲ್ಲದೆ ವೈದ್ಯರ ವಿಳಂಬದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಗಾಯಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಎಕ್ಸರೇ ಮಾಡುವರು ಇರಲ್ಲ!ಎಂದು ವೈದ್ಯರು ಉಡಾಫೆ ಉತ್ತರ ನೀಡುತ್ತಿರುವುದಲ್ಲದೆ,ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರು ರಾತ್ರಿ ವೇಳೆ ಎಕ್ಸರೇ ತೆಗೆಯುವ ಸಿಬ್ಬಂದಿ ಆಸ್ಪತ್ರೆಯಲ್ಲಿ ಇರುವುದಿಲ್ಲ ನಾವು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಎಕ್ಸರೇ ಸಿಬ್ಬಂದಿ ಲಭ್ಯವಿಲ್ಲದೆ ಇರುವ ಕಾರಣಕ್ಕೆ ಚಿಕ್ಕಬಳ್ಳಾಪುರಕ್ಕೆ ಹೋಗಿ ಎಂದು ಹೇಳಿದ್ದೇವೆ ಎಂದು ಅವರು ಪ್ರತಿಕ್ರಿಯಿಸಿದರು.
ಇನ್ನೂ ಕೆಲ ಮಂಗಳಮುಖಿಯರು ಗ್ರಾಮಾಂತರ ಪೊಲೀಸ್ ಠಾಣೆ ಎದುರುಗಡೆ ಜಮಾಯಿಸಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಮೂರು ಮಂಗಳಮುಖಿಯರು ಗಾಯಗೊಂಡಿದ್ದಾರೆ ಕಾರು ಚಾಲಕನ ವಿರುದ್ಧ ಕೂಡಲೆ ಕಠಿಣ ಕ್ರಮ ಜರುಗಿಸಬೇಕು,ಅಷ್ಟೇ ಅಲ್ಲದೆ ಅಪಘಾತದಲ್ಲಿ ಮಂಗಳಮುಖಿಯರಿಗೆ ಬೆನ್ನು ಮುರಿದಿದೆ ಅವರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಪೊಲೀಸ್ ಠಾಣೆ ಎದುರುಗಡೆ ಕೆಲಕಾಲ ಮಂಗಳಮುಖಿಯರು ಹೈಡ್ರಾಮ ಮಾಡಿದರು.
ಇದನ್ನು ಓದಿದ್ದೀರಾ..? ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ ಭಕ್ತಾದಿಗಳಿಗೆ ನೀರು ಮಜ್ಜಿಗೆ ವಿತರಣೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ
ಘಟನೆ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಪೊಲೀಸರು ಆಸ್ಪತ್ರೆ ಹಾಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ…





