ಮಂಗಳೂರು | ಪಣಂಬೂರು ಪೊಲೀಸ್ ಠಾಣೆಗೆ ಎಆರ್‌ಕೆ ಶಾಲಾ ವಿದ್ಯಾರ್ಥಿಗಳ ಭೇಟಿ: ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಾಯೋಗಿಕ ಪಾಠ

Date:

ಮಂಗಳೂರು ನಗರದ ಬೆಂಗ್ರೆಯಲ್ಲಿರುವ ಎಆರ್‌ಕೆ ಶಾಲೆಯ ವಿದ್ಯಾರ್ಥಿಗಳು ಕಾನೂನು ಜಾಗೃತಿ ಮತ್ತು ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ನೇರ ಅನುಭವ ಪಡೆಯುವ ಉದ್ದೇಶದಿಂದ ಪಣಂಬೂರು ಪೊಲೀಸ್ ಠಾಣೆಗೆ ಶೈಕ್ಷಣಿಕ ಭೇಟಿ ನೀಡಿದರು.

ಈ ಸಂದರ್ಭದಲ್ಲಿ, ಕಾನೂನು ವ್ಯವಸ್ಥೆ, ಪೊಲೀಸ್ ಇಲಾಖೆ ನಡೆಸುವ ಕಾರ್ಯಗಳು, ನಾಗರಿಕರ ಹಕ್ಕುಗಳು ಹಾಗೂ ಕಾನೂನು ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳೊಂದಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಭೇಟಿಯ ವೇಳೆ ವಿದ್ಯಾರ್ಥಿಗಳಿಗೆ ಪ್ರಮುಖ ಕಾನೂನು ಸಂಬಂಧಿತ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆಗಳನ್ನು ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
panambur

ಎಫ್‌ಐಆರ್ ದಾಖಲಿಸುವ ವಿಧಾನ, ದೂರು ದಾಖಲಿಸುವ ಪ್ರಕ್ರಿಯೆ, ಅದರ ಪ್ರಾಮುಖ್ಯತೆ ಹಾಗೂ ಕಾನೂನು ತಂತ್ರಜ್ಞಾನ, ಪೋಕ್ಸೋ ಕಾಯ್ದೆ, ಮಕ್ಕಳ ಭದ್ರತೆ ಮತ್ತು ಹಕ್ಕುಗಳ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು, ಡ್ರಗ್ಸ್ ಜಾಲ ಮತ್ತು ಅಪಾಯಗಳು. ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಕಾನೂನು ಬಾಹಿರ ಕ್ರಿಯಾಕಲಾಪಗಳು, ಸೈಬರ್ ಅಪರಾಧಗಳು, ಡಿಜಿಟಲ್ ಜಗತ್ತಿನ ಅಪಾಯಗಳು, ಸಾಮಾಜಿಕ ಮಾಧ್ಯಮದ ಸೂಕ್ತ ಬಳಕೆ ಹಾಗೂ ಹ್ಯಾಕಿಂಗ್, ಆನ್‌ಲೈನ್ ಮೋಸಗಳ ವಿರುದ್ಧ ಜಾಗೃತಿ, ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಮಹಿಳಾ ಸ್ವಾತಂತ್ರ್ಯ ಮತ್ತು ರಕ್ಷಣೆಗಾಗಿ ಕಾನೂನಿನ ಸಹಾಯ, ತುರ್ತು ಸಂಪರ್ಕ ಸಂಖ್ಯೆಗಳ ಬಳಕೆ, ಪೊಲೀಸರ ಕಾರ್ಯವೈಖರಿ, ಕಾನೂನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ, ಅವರ ತುರ್ತು ಪ್ರತಿಕ್ರಿಯೆಗಳ ಪ್ರಕ್ರಿಯೆ ಮತ್ತು ಕರ್ತವ್ಯವನ್ನು ಅನುಭವದ ಮೂಲಕ, ಕಾನೂನು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ವಿದ್ಯಾರ್ಥಿಗಳಿಗೆ ನೇರ ಅರಿವು ಮೂಡಿಸಲಾಯಿತು.

ಇನ್ಸ್‌ಪೆಕ್ಟರ್ ಸಲೀಮ್ ಅಬ್ಬಾಸ್ ವಳಾಲ್ ಅವರೊಂದಿಗೆ ಸಂವಾದ

ಪಣಂಬೂರು ಠಾಣೆಯ ಇನ್ಸ್‌ಪೆಕ್ಟರ್ ಸಲೀಮ್ ಅಬ್ಬಾಸ್ ವಳಾಲ್ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಕಾನೂನಿನ ಪ್ರಾಮುಖ್ಯತೆಯನ್ನು ವಿವರಿಸಿದರು.

“ಪೋಲಿಸರು ನಿಮ್ಮ ಮಿತ್ರರು. ಅವರು ನಿಮ್ಮ ರಕ್ಷಣೆಗಾಗಿ ಇರುವವರು. ನಮ್ಮ ನಿತ್ಯ ಜೀವನದಲ್ಲಿ ಕಾನೂನಿನ ಅರಿವು ಮತ್ತು ಜಾಗೃತಿ ಅತ್ಯಗತ್ಯ. ವಿದ್ಯಾರ್ಥಿ- ಯುವಕರು ಕಾನೂನು ಬಗ್ಗೆ ಮಾಹಿತಿ ಹೊಂದಿದರೆ, ಅವರು ಸಮಾಜದ ಪ್ರಗತಿಯೊಂದಿಗೆ ಸುಸಂಘಟಿತ ಜೀವನವನ್ನು ನಡೆಸಬಹುದು. ಡ್ರಗ್ಸ್, ಸೈಬರ್ ಅಪರಾಧಗಳು ಮತ್ತು ಮಹಿಳಾ ಸುರಕ್ಷತೆ ಈ ದಿನಗಳಲ್ಲಿ ಮುಖ್ಯ ವಿಷಯಗಳಾಗಿದ್ದು, ಇವುಗಳ ಬಗ್ಗೆ ಜಾಗೃತಿಯಿಲ್ಲದಿದ್ದರೆ ಅಪಾಯಗಳು ಎದುರಾಗಬಹುದು. ಕಾನೂನು ನಮ್ಮ ರಕ್ಷಣೆಗೆ, ಆದರೆ ಅದನ್ನು ಸರಿಯಾಗಿ ಅರ್ಥೈಸಿ ಅನುಸರಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ” ಎಂದು ಹೇಳಿದರು.

panambur2

ಈ ಮಾತುಗಳು ವಿದ್ಯಾರ್ಥಿಗಳಿಗೆ ಕಾನೂನು ಜಾಗೃತಿಯ ಮಹತ್ವವನ್ನು ಬೇರೂರಿಸಿದವು. ಈ ಭೇಟಿಯು ವಿದ್ಯಾರ್ಥಿಗಳಲ್ಲಿ ಕಾನೂನು ಪ್ರಜ್ಞೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರ ವಹಿಸಿತು.

ಪೊಲೀಸ್ ಇಲಾಖೆಯ ಕಾರ್ಯವೈಖರಿ ಮತ್ತು ಕಾನೂನು ಜಾರಿಗೆ ಸಂಬಂಧಿಸಿದ ಪ್ರಮುಖ ಅಂಶಗಳನ್ನು ನೇರವಾಗಿ ನೋಡಿದ ವಿದ್ಯಾರ್ಥಿಗಳು, ಕಾನೂನು ವ್ಯವಸ್ಥೆಯ ಬಗ್ಗೆ ಒಳ್ಳೆಯ ಅರಿವು ಹೊಂದಿದರು. ಮಾತ್ರವಲ್ಲದೆ ತಮ್ಮ ಮನದಲ್ಲಿದ್ದ ಪ್ರಶ್ನೆಗಳನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಂಡರು.

“ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಅಧಿಕಾರಿಗಳು ಮಾತ್ರವಲ್ಲ, ನಮ್ಮ ಸಮಾಜವನ್ನು ಸುರಕ್ಷಿತವಾಗಿಟ್ಟುಕೊಳ್ಳುವ ಪ್ರಮುಖ ಕೆಲಸ ಮಾಡುತ್ತಾರೆ” ಎಂಬ ವಿಷಯವನ್ನು ಶಾಲೆಯ ಕರೆಸ್ಪೋಂಡೆಂಟ್ ಶೌಕತ್ ಅಲಿ ವಿದ್ಯಾರ್ಥಿಗಳಿಗೆ ಹೇಳಿದರು.

ಕಾನೂನು ಜಾಗೃತಿಯ ಮಹತ್ವವನ್ನು ಅನಾವರಣಗೊಳಿಸುವ ಈ ಕಾರ್ಯಕ್ರಮದಿಂದ, ವಿದ್ಯಾರ್ಥಿಗಳಲ್ಲಿ ಸಮಾಜದ ಕಾನೂನು ಬಾಹಿರ ಕ್ರಿಯೆಗಳ ಬಗ್ಗೆ ಹೊಸ ಅರಿವು ಮೂಡಿಸಲಾಯಿತು.

panambur3

ಈ ಶೈಕ್ಷಣಿಕ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಕಾನೂನು ಪ್ರಜ್ಞೆ, ನಾಗರಿಕ ಜವಾಬ್ದಾರಿ ಹಾಗೂ ಸಾಮಾಜಿಕ ಜಾಗೃತಿಯ ಬಗ್ಗೆಯೂ ಪ್ರಭಾವಿತಗೊಂಡರು. ಈ ಸಂದರ್ಭದಲ್ಲಿ ಪಣಂಬೂರು ಠಾಣೆಯ ವತಿಯಿಂದ ಮಕ್ಕಳಿಗೆ ಲಘು ಪಾನೀಯ ವ್ಯವಸ್ಥೆ ಮಾಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಕೀನ ಪೊಲೀಸರಿಗೆ ಧನ್ಯವಾದಗಳನ್ನು ಅರ್ಪಿಸಿದರು. 7,8,9ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...