ಮಂಗಳೂರು | ಕಲಾವಿದ ಬಿ ಕೆ ಗಣೇಶ್‌ ವಿರಚಿತ ʼಕಡಲಾಚೆಯ ರಮ್ಯ ನೋಟ ದುಬಾಯಿʼ ಪುಸ್ತಕ ಬಿಡುಗಡೆ

Date:

ಚಿತ್ರಶಿಲ್ಪ ಕಲಾವಿದ, ಕ್ರಿಯಾತ್ಮಕ ಕಲಾನಿರ್ದೇಶಕ, ಲೇಖಕ ಬಿ ಕೆ ಗಣೇಶ್ ರೈ ರಚಿಸಿರುವ ʼಕಡಲಾಚೆಯ ರಮ್ಯ ನೋಟ ದುಬಾಯಿʼ ಪುಸ್ತಕವನ್ನು ಯುಎಇ ಬಂಟ್ಸ್‌ ಅಧ್ಯಕ್ಷ ವಕ್ವಾಡಿ ಪ್ರವೀಣ್‌ ಶೆಟ್ಟಿ ಲೋಕಾರ್ಪಣೆ ಮಾಡಿದರು.

ಮಂಗಳೂರಿನ ಪತ್ರಿಕಾ ಭವನದಲ್ಲಿ ನಿನ್ನೆ (ಮಾ.4) ಮಂಗಳೂರು ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆದ 42ನೇ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರವೀಣ್‌ ಶೆಟ್ಟಿ, “ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣ ಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಲಿದೆ” ಎಂದು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೇಖಕ ಬಿ ಕೆ ಗಣೇಶ್ ರೈ ಮಾತನಾಡಿ, “ತಮ್ಮ ಲೇಖನಗಳನ್ನು ಬರೆದು ಪ್ರಕಟಿಸಲು ಅವಕಾಶ ಕಲ್ಪಿಸಿರುವ ಎಲ್ಲಾ ಮಾಧ್ಯಮಗಳಿಗೆ ಕೃತಜ್ಜತೆಗಳನ್ನು ಸಲ್ಲಿಸಿ, ತಮ್ಮ ಪ್ರತಿಭೆಗೆ ಸದಾ ಪ್ರೋತ್ಸಾಹ, ಬೆಂಬಲ ನೀಡಿರುವ ಸ್ನೇಹಿತರು, ಸಂಘ ಸಂಸ್ಥೆಗಳಿಗೆ ಧನ್ಯವಾದ ಸಲ್ಲಿಸಿದರು. ಗಣ್ಯರ ಸಮ್ಮುಖದಲ್ಲಿ ತಮ್ಮ ಪುಸ್ತಕ ಲೋಕಾರ್ಪಣೆಯಾಗಿರುವುದಕ್ಕೆ ಕನಸು ನನಸಾಗಿದೆ” ಎಂದು ಸರ್ವರಿಗೂ ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Image 2025 03 05 at 10.49.53 AM

ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಗೆ ಮುನ್ನುಡಿ ಬರೆದಿರುವ ಡಾ. ಅರುಣಾ ನಾಗರಾಜ್ ಮಾತನಾಡಿ, “ಕೃತಿಯಲ್ಲಿರುವ ಒಂದೊಂದು ಲೇಖನಗಳು ಸಂಪೂರ್ಣ ಮಾಹಿತಿಯೊಂದಿಗೆ ಓದುಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕೈಯಲ್ಲಿ ಈ ಒಂದು ಕೃತಿ ಇದ್ದರೆ ಸಮಗ್ರ ದುಬಾಯಿಯನ್ನು ಸಂಪೂರ್ಣವಾಗಿ ಪ್ರವಾಸ ಮಾಡಿಕೊಂಡು ಬಂದಿರುವ ಅನುಭವಾಗುತ್ತದೆ” ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಶ್ರೀ ಶ್ರೀನಿವಾಸ್ ನಾಯಕ್ ಇಂದಾಜೆ ವಿದೇಶದ ನೆಲದಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಗಣೇಶ್ ರೈಯವರ ಸಾಧನೆಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: ಮಂಗಳೂರು | ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

ಸರ್ವೋತ್ತಮ ಶೆಟ್ಟಿ ಮಾತನಾಡಿ, “ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಗಣೇಶ್ ರೈಯವರು ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಯು.ಎ.ಇ. ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳಲ್ಲಿ ಕರ್ನಾಟಕದ ಕಲೆ ಭಾಷೆ ಸಂಸ್ಕೃತಿಯನ್ನು ಕಳೆದ ಎರಡುವರೆ ದಶಕಗಳಿಂದ ನಿರಂತರವಾಗಿ ಮಾಡಿಕೋಡು ಬರುತ್ತಿದ್ದಾರೆ. ಬಹುಮುಖ ಪ್ರತಿಭೆಯ ವ್ಯಕ್ತಿತ್ವವನ್ನು ಹೊಂದಿರುವ ಗಣೇಶ್ ರೈಯವರು ಶಿಲ್ಪಿಯಾಗಿ, ಚಿತ್ರಕಾರರಾಗಿ, ಕಾರ್ಯಕ್ರಮ ನಿರೂಪಕರಾಗಿ ಸಮಾಜ ಸೇವಕರಾಗಿ, ಲೇಖಕ ಬರಹಗಾರರಗಿ ನೂರಾರು ಗಣ್ಯರ ಸಂದರ್ಶನದ ಲೇಖನಗಳನ್ನು ಪ್ರಕಟಿಸುತ್ತಾ ಇದೀಗ ದುಬಾಯಿಯ ಸಂಪೂರ್ಣ ಚಿತ್ರಣವಿರುವ ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಯನ್ನು ಪ್ರಕಟಿಸಿರುವುದು ದುಬಾಯಿಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗೆ ಸಂದಿರುವ ಗೌರವ ಎಂದು ಶ್ಲಾಘಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...