ಮಂಗಳೂರು | ಕೀಳರಿಮೆ ದೂರವಿಡಿ ಸಾಧಿಸಿ ತೋರಿಸಿ: ಯು.ಎಚ್ ಉಮರ್

Date:

ಸಾಧನೆಗೆ ಯಾವುದೂ ಕೂಡ ಅಡ್ಡಿಯಾಗಬಾರದು. ಬದುಕಿನಲ್ಲಿ ಸಾಧಿಸುವ ಗುರಿಯೊಂದೇ ಮುಖ್ಯ. ಅನ್ಷಕರಸ್ಥ ಕೂಡ ತನ್ನದೇ ಆದ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ ಉದಾಹರಣೆಗಳಿವೆ. ಸಾಧಿಸುವ ಮೊದಲು ತನ್ನಲ್ಲಿರುವ ಕೀಳರಿಮೆಯನ್ನು ದೂರ ಮಾಡಬೇಕು. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಕೀಳರಿಮೆ ದೂರ ಮಾಡಿ, ಸ್ಪಷ್ಟ ಗುರಿಯನ್ನು ಹಾಕಿಕೊಂಡು ಸಾಧಿಸಿ ತೋರಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್ ಉಮರ್ ಹೇಳಿದರು.

ಮಂಗಳೂರಿನ ಕೂಳೂರಿನಲ್ಲಿರುವ ಯೆನೆಪೊಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಸಹಾಯಕ ಪ್ರಾಧ್ಯಾಪಕ ನಿಯಾಝ್ ಪಡೀಲ್ ರಚಿಸಿದ ಕನ್ನಡ ಕಾದಂಬರಿಯ ಬ್ಯಾರಿ ಅನುವಾದಿತ ‘ಯತೀಮ್’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“ಭಾಷೆಯು ಕೇವಲ ಸಂವಹನ ಕಲೆಯಲ್ಲ. ಅದರಲ್ಲಿ ಸಂಸ್ಕೃತಿ, ಸಂಸ್ಕಾರ, ಸಂವೇದನೆ ಇರುತ್ತದೆ. ಈ ನಿಟ್ಟಿನಲ್ಲೂ ಅಧ್ಯಯನ ಆಗಬೇಕಿದೆ. ಬ್ಯಾರಿ ಅಕಾಡಮಿಯು ಸಂಶೋಧನೆಗೆ ಹೆಚ್ಚು ಆದ್ಯತೆ ನೀಡಿ ಕೆಲಸ ಮಾಡಲಿದೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮಾರ್ದನಿ’ ವೆಬ್‌ಸೈಟ್‌ ಲೋಕಾರ್ಪಣೆ;

ಇದೇ ಕಾರ್ಯಕ್ರಮದಲ್ಲಿ ಯೆನೆಪೊಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ‘ಮಾರ್ದನಿ’ ಕನ್ನಡ ಜರ್ನಲ್ ವೆಬ್‌ಸೈಟ್‌ಅನ್ನು ಉಜಿರೆ ಎಸ್‌ಡಿಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು, “ಜಾಲತಾಣಗಳು ಸಮಾಜಕ್ಕೆ ಸ್ಪಂದಿಸುವ ಅಗತ್ಯವಿದೆ. ಜಾಲತಾಣಗಳಲ್ಲಿ ಸಂಶೋಧನಾ ಪ್ರಬಂಧಗಳು ಪ್ರಕಟಗೊಳ್ಳಬೇಕು. ಸಾಮಾಜಿಕ ಸಮಸ್ಯೆಗಳ ಬಗ್ಗೆಯೂ ಅಧ್ಯಯನ ಲೇಖನಗಳಿಗೆ ಆದ್ಯತೆ ನೀಡಬೇಕು” ಎಂದರು.

ಈ ವರದಿ ಓದಿದ್ದೀರಾ?: ಜಾತಿ ಗಣತಿಯ ಬಗ್ಗೆ ಬಾಬಾಸಾಹೇಬರು ಹೇಳಿದ್ದೇನು?

ಯೆನೆಪೊಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಡಾ. ಅರುಣ್ ಎ. ಭಾಗವತ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಕೃತಿಯ ಅನುವಾದಕ ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಅಭಿಮತ ಟಿ.ವಿ. ಚಾನೆಲ್‌ನ ಮುಖ್ಯಸ್ಥೆ ಮಮತಾ ಪಿ. ಶೆಟ್ಟಿ, ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಶಮೀಮಾ ಕುತ್ತಾರ್ ಭಾಗವಹಿಸಿ ಮಾತನಾಡಿದರು. ಉಪ ಪ್ರಾಂಶುಪಾಲೆ ಡಾ. ಶರೀನಾ ಪಿ., ಭಾಷಾ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶಾಲಿನಿ ಸಿಕ್ವೇರಾ ಮಾತನಾಡಿದರು. ಬ್ಯಾರಿ ಅಧ್ಯಯನ ಪೀಠದ ಸದಸ್ಯ ಹಂಝ ಮಲಾರ್ ಕೃತಿ ಪರಿಚಯ ಮಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ದಿನಕರ ಪಚ್ಚನಾಡಿ ‘ಮಾರ್ದನಿ’ಯ ಬಗ್ಗೆ ಮಾಹಿತಿ ನೀಡಿದರು.

ಉಪ ಪ್ರಾಂಶುಪಾಲರಾದ ಡಾ. ಜೀವನ್‌ರಾಜ್, ನಾರಾಯಣ ಸುಕುಮಾರ ಎ. ಉಪಸ್ಥಿತರಿದ್ದರು. ವಿದ್ಯಾರ್ಥಿ ಸಲ್ವಿತ್ ಅಹ್ಮದ್ ಪ್ರಾರ್ಥಿಸಿದರು. ಕೃತಿಯ ಲೇಖಕ ನಿಯಾಝ್ ಪಡೀಲ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿಯರಾದ ರಝೀನಾ ವಂದಿಸಿದರು. ಶಹ್ಲಾ ಅಬ್ದುಲ್ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...