ಮಂಗಳೂರು | ಬ್ಯಾರಿ ಭಾಷೆ, ಸಾಹಿತ್ಯ ತಳಸ್ಪರ್ಶಿ ಅಧ್ಯಯನ ಅಗತ್ಯ: ಡಾ. ಅಬೂಬಕರ್ ಸಿದ್ದೀಕ್

Date:

ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಸಂಬಂಧಿಸಿದಂತೆ ನಡೆಯುವ ಅಧ್ಯಯನವು ತಳಸ್ಪರ್ಶಿಯಾಗಬೇಕು. ಆವಾಗ ಮಾತ್ರ ಬ್ಯಾರಿ ಭಾಷೆ ಜನ ಮಾನಸದಲ್ಲಿ ಆಳವಾಗಿ ಬೇರೂರಲು  ಸಾಧ್ಯ ಎಂದು ಮಂಗಳೂರು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಹೇಳಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ನಗರದ ಮಂಗಳೂರು ವಿ.ವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ (ಮಾ.1) ನಡೆದ ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ʼಬ್ಯಾರಿ: ನಾನು ಕಂಡಂತೆʼ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಬ್ಯಾರಿ ಭಾಷೆಯಲ್ಲಿ ಸಾಹಿತ್ಯದ ಅನೇಕ ಪ್ರಕಾರಗಳು ಬಂದಿವೆ. ಆದರೆ, ತಳಸ್ಪರ್ಶಿ ಅಧ್ಯಯನದ ಕೊರತೆ ಕಾಡುತ್ತಿವೆ. ಈ ನಿಟ್ಟಿನಲ್ಲಿ ಅಧ್ಯಯನ ಪೀಠವು ಕ್ಷೇತ್ರ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಅಬೂಬಕ್ಕರ್ ಸಿದ್ದೀಕ್ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಲಿಯಬ್ಬ ಜೋಕಟ್ಟೆಯವರ ಈ ಅನುಭವ ಕಥನವು ಸಂಶೋಧನಾಸಕ್ತ ವಿದ್ಯಾರ್ಥಿಗಳಿಗೆ ಆಕರ ಕೃತಿಯಾಗಲಿ ಎಂದು ಡಾ. ಅಬೂಬಕ್ಕರ್ ಸಿದ್ದೀಕ್ ಆಶಿಸಿದರು.

ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಇಸ್ಮಾಯಿಲ್ ಎನ್. ಉದ್ಘಾಟಿಸಿದರು. ಕೃತಿಕಾರ ಆಲಿಯಬ್ಬ ಜೋಕಟ್ಟೆ ಕೃತಿ ರಚನೆಗೆ ಸಂಬಂಧಿಸಿದಂತೆ ತನ್ನ ಅನುಭವ ಹಂಚಿಕೊಂಡರು. ಪತ್ರಕರ್ತ ಹಂಝ ಮಲಾರ್ ಕೃತಿ ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮುಹಮ್ಮದ್ ಸ್ವಾದಿಕ್, ಆಯಿಶಾ ಝಹೀಮಾ, ಮುಹಮ್ಮದ್ ಸಿಮಕ್, ನೌಶೀನಾ ಅವರು ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ವಿಚಾರ ಮಂಡಿಸಿದರು.

ಅತಿಥಿಗಳಾಗಿ ಭಾಗವಹಿಸಿದ್ದ ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ, ಬ್ಯಾರಿ ವಾರ್ತೆಯ ಸಂಪಾದಕ ಬಶೀರ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಅಧ್ಯಕ್ಷ ಖಾಲಿದ್ ಉಜಿರೆ, ʼಮೇಲ್ತೆನೆʼಯ ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್, ಬ್ಯಾರಿ ಅಕಾಡಮಿಯ ರಿಜಿಸ್ಟ್ರಾರ್ ಆರ್. ಮನೋಹರ ಕಾಮತ್ ಮಾತನಾಡಿದರು.

ಅಧ್ಯಯನ ಪೀಠದ ಸದಸ್ಯರಾದ ಸಮೀರಾ ಕೆ.ಎ. ಸ್ವಾಗತಿಸಿದರು. ಖಾಲಿದ್ ತಣ್ಣೀರುಬಾವಿ ವಂದಿಸಿದರು. ಶಹಲಾ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...