ಮಂಗಳೂರು | ಬ್ಯಾರಿ ಜಾನಪದ ಕಥೆಗಳ ಇಂಗ್ಲಿಷ್ ಅನುವಾದಿತ ಕೃತಿ ಬಿಡುಗಡೆ

Date:

ನಾಡಿನ ಬೇರೆ ಬೇರೆ ಲೇಖಕ-ಲೇಖಕಿಯರು ಬ್ಯಾರಿ ಭಾಷೆಯಲ್ಲಿ ಬರೆದ ಜಾನಪದ ಕತೆಗಳ ಸಂಕಲನ “ಚನ್ನನ”ದ ಇಂಗ್ಲಿಷ್ ಅನುವಾದಿತ ’The Fakir’s Daughter and other Beary Folktales”ಕೃತಿಯನ್ನು ನಗರದ ಸಂತ ಅಲೋಶಿಯಸ್ ಡೀಮ್ಡ್ ವಿವಿಯ ಅಡ್ಮಿನ್ ಬ್ಲಾಕ್‌ನ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ಸಂತ ಅಲೋಶಿಯಸ್ ಡೀಮ್ಡ್ ವಿವಿಯ ಉಪಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಕೃತಿಯನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಭಾಷೆ ಮತ್ತು ಸಾಂಸ್ಕ್ರತಿಕ ಅಧ್ಯಯನ ನಿಕಾಯವು ಪ್ರಾದೇಶಿಕ ಭಾಷೆಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಸಂಸ್ಕೃತಿ ನೆಲೆನಿಲ್ಲಲು ಇಂತಹ ವೌಲಿಕ ಕೃತಿಗಳ ಪ್ರಕಟನೆಯ ಅಗತ್ಯವೂ ಇದೆ. ಇವುಗಳನ್ನು ಓದುವ ಮೂಲಕ ಸಂಸ್ಕೃತಿ – ಬದುಕಿನ ಬಗ್ಗೆ ಅರಿಯಲು ಸಾಧ್ಯವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತಿಯ ಸಂಪಾದಕ, ಪತ್ರಕರ್ತ ಹಂಝ ಮಲಾರ್ ಮಾತನಾಡಿ, ಬ್ಯಾರಿ ಕ್ಷೇತ್ರಕ್ಕೆ ಸಂಬಂಧಿಸಿ ಈವರೆಗೆ ಬ್ಯಾರಿ, ಕನ್ನಡ, ಇಂಗ್ಲಿಷ್‌ನಲ್ಲಿ 125 ಕೃತಿಗಳು ಪ್ರಕಟಗೊಂಡಿವೆ. ಆದರೆ ಬ್ಯಾರಿ ಭಾಷೆಯಲ್ಲಿ ಪ್ರಕಟಗೊಂಡ ಕೃತಿ ಇದೇ ಮೊದಲ ಬಾರಿಗೆ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಅದಕ್ಕಾಗಿ ಅನುವಾದಕಿ ಡಾ.ಸಿಲ್ವಿಯಾ ರೇಗೋ ಅಭಿನಂದನಾರ್ಹರು ಎಂದರು.

ವೇದಿಕೆಯಲ್ಲಿ ಹಿರಿಯ ಸಂಶೋಧಕ ರೆ.ಡಾ.ವಿಲ್ಲಿ ಡಿಸಿಲ್ವ, ಕೃತಿಯ ಅನುವಾದಕಿ, ಸಂತ ಅಲೋಶಿಯಸ್ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕಿ ಡಾ.ಸಿಲ್ವಿಯಾ ರೇಗೋ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳನ್ನು ಡಾ.ಝೀಟ ಲೋಬೊ ಪರಿಚಯಿಸಿದರು. ಕೊಂಕಣಿ ವಿಭಾಗದ ಮುಖ್ಯಸ್ಥೆ ಪ್ರೊ.ಫ್ಲೋರಾ ಕ್ಯಾಸ್ಟಲಿನೊ ಸ್ವಾಗತಿಸಿದರು.ಕಾರ್ಯಕ್ರಮದ ಸಂಯೋಜಕ ಜೊಕ್ಕಿಂ ಪಿಂಟೊ ವಂದಿಸಿದರು.

ರೇಡಿಯೋ ಸಾರಂಗ್‌ನ ಕಾರ್ಯಕ್ರಮ ನಿರ್ವಾಹಕ ಸೈಫ್ ಕುತ್ತಾರ್ ಸಹಕರಿಸಿದರು. ಪ್ರಾಧ್ಯಾಪಕ ಸ್ಯಾಮುವೆಲ್ ಪೀಟರ್ಸ್ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...