ಮಂಗಳೂರು | ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲೂರು ಟ್ರಸ್ಟ್‌ನಿಂದ ರಕ್ತದಾನ ಶಿಬಿರ

Date:

ರಾಜಕೀಯ ರಹಿತವಾಗಿ ಆರೋಗ್ಯಪೂರ್ಣ ಕಾರ್ಯಕ್ರಮಗಳನ್ನು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರವಾಗಿ ಪ್ರಯತ್ನಿಸುಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಠದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಬೇಕು ಎಂದು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಕಲ್ಲೂರು ಹೇಳಿದರು.

ಅವರು ಕಾಲೇಜು ಶಿಕ್ಷಣ ಇಲಾಖೆ, ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಕಾರವಾರ ಇದರ ಆಶ್ರಯದಲ್ಲಿ ಯೂತ್ ರೆಡ್ ಕ್ರಾಸ್ , ಎನ್ ಎಸ್ ಎಸ್ ರೇಂಜರ್ಸ್- ರೋರ‍್ಸ್ ಘಟಕ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಮಂಗಳೂರಿನ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರಗಿದ ಬೃಹತ್ ರಕ್ತದಾನ ಶಿಬಿರ ಹಾಗೂ ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ರಕ್ತದ ಕೊರತೆಯಾಗುತ್ತಿದೆ ಅನ್ನುವ ಕೂಗು ಇದೆ. ಅದನ್ನು ಹೋಗಲಾಡಿಸುವ ಸಲುವಾಗಿ ಕಲ್ಲೂರು ಟ್ರಸ್ಟ್ ನಿರಂತರವಾಗಿ ವಿವಿಧ ಸಂಘಟನೆಗಳ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಕ್ತದಾನ

ಸಾಹಿತಿ ನಾಗೇಶ್ ಕಲ್ಲೂರು ಮಾತನಾಡಿ, “ಧರ್ಮಗಳ ಭೇದವಿಲ್ಲದ ಊರು ಕಲ್ಲೂರು. ಸಮಾಜದ ಮುಂಚೂಣಿಗೆ ಬರಲು ಹಿರಿಯ ಪುತ್ತಬ್ಬ ಬ್ಯಾರಿ ಸದಾ ಬೆನ್ನು ತಟ್ಟುತ್ತಿದ್ದರೆ, ಅವರ ಪತ್ನಿ ಎಲ್ಲ ಸಂದರ್ಭದಲ್ಲಿಯೂ ಊರವರ ಕಷ್ಟಕ್ಕೆ ಸ್ಪಂದಿಸಿದವರು. ಅಂತಹ ದಂಪತಿಯ ಪುತ್ರನಾಗಿರುವ ಇಬ್ರಾಹಿಂ ಕಲ್ಲೂರು ಕೂಡಾ ಅವರು ತೋರಿಸಿದ ದಾರಿಯಲ್ಲೇ ಮುನ್ನಡೆಯುತ್ತಿರುವುದು ಸಾಮಾಜಿಕ ಮೌಲ್ಯಗಳಿಗೆ ಸಿಕ್ಕಂತಹ ಸಂಪತ್ತು. ಕಳೆದ 30 ವರ್ಷಗಳಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ. ಕಲಬೆರಕೆ ಆಹಾರಗಳಿಂದ ಆರೋಗ್ಯದಲ್ಲಿ ಸಮಸ್ಯೆ, ಕಾಯಿಲೆಗಳ ಸಂಖ್ಯೆ, ಶಸ್ತ್ರಚಿಕಿತ್ಸೆಗಳು ಹೆಚ್ಚಾಗುತ್ತಿದೆ. ಸಂಸ್ಕರಿತ, ಸಿಹಿ ರೂಪ ಸಕ್ಕರೆಯುಳ್ಳ ಆಹಾರಗಳನ್ನು ಕಡಿಮೆ ಮಾಡಿ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ರಕ್ತವನ್ನು ಶುದ್ಧವಾಗಿರಿಸುವ ಮೂಲಕ ಇತರರಿಗೆ ದಾನ ನೀಡುವಂತಾಗಿರಿ” ಎಂದರು.

ರಕ್ತದಾನ1

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ದ.ಕ ಜಿಲ್ಲಾ ಗೃಹ ರಕ್ಷಕದಳ ಕಮಾಂಡೆಂಟ್ ಡಾ. ಮುರಳಿ ಮೋಹನ್ ಚೂಂತಾರು ಮಾತನಾಡಿ, “ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಕೊಡಲಾಗುತ್ತದೆ. ರಿಪ್ಲೇಸ್ ಮೆಂಟ್‌ಗಳನ್ನೂ ಕೇಳುವುದಿಲ್ಲ. ಇಂಡಿಯನ್ ರೆಡ್ ಕ್ರಾಸ್ ನಡೆಸುವ 12 ಬ್ಲಡ್ ಬ್ಯಾಂಕ್ ಗಳಿವೆ. ಪ್ರತಿದಿನ 8-15,000 ಲೀ. ರಕ್ತದ ಅವಶ್ಯಕತೆಯಿದೆ. ದೇಶದಲ್ಲಿ 1.44 ಕೋಟಿ ರಕ್ತದಾನಿಗಳು ಬೇಕಾಗಿದ್ದಾರೆ. ರಕ್ತಕ್ಕೆ ಹಣ ಸುಲೀತಾರೆ ಅನ್ನುವುದು ತಪ್ಪು ಮಾಹಿತಿ. ಇನ್ನೊಬ್ಬರ ಜೀವ ಉಳಿಸಲು ವೈದ್ಯನಾಗಬೇಕೆಂದಿಲ್ಲ. ಮಾನವೀಯ ಗುಣವುಳ್ಳ ಮನುಷ್ಯನಾದರೆ ಸಾಧ್ಯ. ಮಾನವೀಯತೆ ಮತ್ತು ನಿಸ್ವಾರ್ಥ ಸೇವೆಗಾಗಿ ಎನ್ ಎಸ್ ಎಸ್ ಮತ್ತು ರೆಡ್ ಕ್ರಾಸ್‌ನ ಜೊತೆಗೆ ಕೈಜೋಡಿಸಿ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ.ಸತೀಶ್ ಗಟ್ಟಿ ಮಾತನಾಡಿ, “ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಸೇರಿದಂತೆ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾ ಬರುತ್ತಿದ್ದಾರೆ. ರಕ್ತದಾನದ ಶ್ರೇಷ್ಠತೆಯನ್ನು ಅರಿತ ವಿದ್ಯಾರ್ಥಿಗಳು ಇತರರಿಗೂ ರಕ್ತದಾನ ನಡೆಸುವಂತೆ ಪ್ರೇರಣೆ ನೀಡಬೇಕು” ಎಂದರು.

ರಕ್ತದಾನ3

ಮಂಗಳೂರು ವಿ.ವಿ ಮಾಜಿ ಕುಲಸಚಿವ ಡಾ. ಎ.ಎಂ.ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಆರೋಗ್ಯ ಶಿಬಿರ ಸಂಚಾಲಕರಾದ ಅಝೀಝ್ ಕಲ್ಲೂರು, ಕಲ್ಲೂರು ಟ್ರಸ್ಟ್ ನ ಉಮ್ಮರ್ ಕುಂಞಿ ಸಾಲೆತ್ತೂರು, ಸಂದೀಪ್ ರೇವಣ್ಕರ್ ಕಾರವಾರ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸಾಧಕರಾದ ಸತೀಶ್ ಗಟ್ಟಿ, ಮುರುಳಿ ಮೋಹನ್ ಚೂಂತಾರು, ಹೈದರ್ ಅಲಿ, ನಾಗೇಶ್ ಕಲ್ಲೂರು, ಉಮ್ಮರ್ ಕುಂಞಿ ಸಾಲೆತ್ತೂರು, ನಾಗೇಶ್ ಕಲ್ಲೂರು, ಇವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಉಡುಪಿ | ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ

ಯೂತ್ ರೆಡ್ ಕ್ರಾಸ್ ಸಂಚಾಲಕ ಪ್ರೊ. ಹೈದರ್ ಆಲಿ ಸ್ವಾಗತಿಸಿದರು. ರೇಂಜರ್ ಘಟಕ ಸಂಚಾಲಕರು ಅಕ್ಷತಾ ಸುವರ್ಣ ರಕ್ತದಾನಿಗಳ ವಿವರ ನೀಡಿದರು.

ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಶೋಭಾಮಣಿ ವಂದಿಸಿದರು. ವಿದ್ಯಾರ್ಥಿನಿ ಮರಿಯಂ ಸಫೀದ ನಿರೂಪಿಸಿದರು. ಶಿಬಿರದಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿ ಒಟ್ಟು 60 ಮಂದಿ ರಕ್ತದಾನ ಮಾಡಿದರು.

ರಕ್ತದಾನ4
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...