ಮಂಗಳೂರು | ಬಿಎಸ್‌ಡಬ್ಲ್ಯೂಟಿ ಎರಡನೇ ಹಂತದ ಉಚಿತ ಹೊಲಿಗೆ ತರಬೇತಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

Date:

ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು(BSWT) ಇದರ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರಗಳನ್ನು ಆರಂಭಿಸಿದ್ದು, ಇದೀಗ ಮೊದಲನೇ ತರಗತಿ ಪೂರ್ತಿಗೊಂಡಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು 60 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಶೀಘ್ರದಲ್ಲೇ ಎರಡನೇ ಹಂತದ ತರಗತಿ ಆರಂಭಿಸಲು ತೀರ್ಮಾನಿಸಲಾಗಿದ್ದು, ಆಸಕ್ತ ಗ್ರಾಮ ಪಂಚಾಯಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೊದಲು ಆಗಮಿಸಿದ ಅರ್ಜಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗಾಗಿ ಆರಂಭಿಸಲಿರುವ ಹೊಲಿಗೆ ತರಬೇತಿ ಕೇಂದ್ರಕ್ಕೆ ಹತ್ತು ಹೊಲಿಗೆ ಯಂತ್ರ ಮತ್ತು ತರಬೇತಿದಾರರ, ಸಹಾಯಕರ ವೇತನವನ್ನು, ತರಗತಿಗೆ ಸಂಬಂಧಪಟ್ಟ ಖರ್ಚು ವೆಚ್ಚಗಳನ್ನು ಸಂಸ್ಥೆಯ ವತಿಯಿಂದ ಭರಿಸಲಾಗುವುದು. ಮೂರು ತಿಂಗಳ ಅವಧಿಯ ಈ ಕೋರ್ಸ್‌ನಲ್ಲಿ ಪ್ರತಿದಿನ ಮೂರು ಬ್ಯಾಚ್ ಇರುತ್ತವೆ.

ಹೊಲಿಗೆ ತರಬೇತಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಅಂಕ ಪಡೆದ ಪ್ರತಿ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ತರಬೇತಿ ಪಡೆದ ಎಲ್ಲರಿಗೆ ಸರ್ಟಿಫಿಕೇಟ್ ಮತ್ತು ಗೌರವ ಕಾಣಿಕೆ ನೀಡಿ ಗೌರವಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತರಗತಿಗೆ ಅನುಕೂಲವಾಗುವಂತೆ ಕಟ್ಟಡ ಸೌಕರ್ಯವಿರುವ ಪಂಚಾಯಿತಿಗಳಿಗೆ ಶೀಘ್ರ ಅರ್ಜಿ ಸಲ್ಲಿಸಬಹುದು. ಪ್ರಸ್ತುತ ಮಂಗಳೂರು ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಹಾಗೂ ಉಳ್ಳಾಲ ತಾಲೂಕಿನ ಮುಡಿಪು, ಕುರ್ನಾಡು, ಅಸ್ಸೈ, ಕೈರಂಗಳ, ಪಜೀರು, ಮುನ್ನೂರು, ಸಜಿಪ, ಬಾಳೆಪುಣಿ, ಬೆಳ್ಮ, ಕೊಣಾಜೆ ಆಸುಪಾಸಿನ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹಾಗಾಗಿ ಜುಲೈ 5ರ ಒಳಗಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಅಧ್ಯಕ್ಷ ಎನ್ ಅಮೀನ್, ಪ್ರಧಾನ ಕಾರ್ಯದರ್ಶಿ ಆಕೀಫ್ ಎಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ? ಪುತ್ತೂರು | ಮದುವೆಯಾಗುವುದಾಗಿ ನಂಬಿಸಿ ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ; ಗರ್ಭಿಣಿಯಾದ ವಿಷಯ ತಿಳಿದು ಪರಾರಿ

ಈಮೇಲ್ : bswtmangalore2015@gmail.com

ವಿಳಾಸ
Asheeruddeen Sarthabail
Coordinator
Near Sneha sadana Pakkaldka, Bajal
Kankanady Mangalore
575027
ಪೋ. ನಂ. 9742937692

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...