ಮಂಗಳೂರು | BSWT ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Date:

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್, ಮಂಗಳೂರು ಹಾಗೂ ಬಾಳೆಪುಣಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಟ್ರಸ್ಟ್‌ನ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾದ ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವು ಬಾಳೆಪುಣಿಯ ರಾಜೀವ್ ಗಾಂಧಿ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.

ಅಶೀರುದ್ದೀನ್ ಸಾರ್ತಬೈಲ್ ಅವರು ಸ್ವಾಗತ ಭಾಷಣ ಮಾಡಿದರು. ಪ್ರಾಸ್ತಾವಿಕ ನುಡಿಯನ್ನಾಡಿದ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಅಧ್ಯಕ್ಷ ಎನ್. ಅಮೀನ್ ಪಕ್ಕಲಡ್ಕ, ಮಹಿಳೆಯರ ಆರ್ಥಿಕ ಸ್ವಾವಲಂಬನೆ ಸಮಾಜದ ಸಮಗ್ರ ಅಭಿವೃದ್ಧಿಗೆ ಅಗತ್ಯವಾಗಿದ್ದು, ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವುದು ಕಾಲಘಟ್ಟದ ಅವಶ್ಯಕತೆ. ಮಹಿಳೆಯರಿಗೆ ಕೌಶಲ್ಯ ಹಾಗೂ ಅವಕಾಶ ಎರಡೂ ದೊರಕಿದರೆ ಅವರು ಕುಟುಂಬದ ಆರ್ಥಿಕ ಸ್ಥಿತಿಯನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾರೆ. ಮಹಿಳಾ ಸಬಲೀಕರಣದ ದಿಸೆಯಲ್ಲಿ ಇಂತಹ ತರಬೇತಿ ಶಿಬಿರಗಳನ್ನು, ಸಮಾಜಮುಖಿ ಕಾರ್ಯಕ್ರಮಗಳನ್ನು ಟ್ರಸ್ಟ್ ಮುಂದುವರಿಸಲಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಅಧೀಕ್ಷಕ ಹರೀಶ್ ಕುಮಾರ್ ಕುತ್ತಡ್ಕ ಅವರು ಟ್ರಸ್ಟ್‌ನ ಹತ್ತನೇ ವರ್ಷದ ಬ್ರೋಕರ್ ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1087522

ಬಳಿಕ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿಗೂ ಸಮಾನ ಮಹತ್ವವಿದ್ದು, ಟೈಲರಿಂಗ್ ತರಬೇತಿ ಪಡೆದ ಮಹಿಳೆಯರು ಸ್ವ ಉದ್ಯೋಗ ಆರಂಭಿಸುವ ಮೂಲಕ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬಲಪಡಿಸಬಹುದು. ಇಂತಹ ತರಬೇತಿ ಶಿಬಿರಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು.

ಶಿಬಿರದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಲಾಗಿದ್ದು, ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳಿಂದ ಬಹುಮಾನ ವಿತರಿಸಲಾಯಿತು.

ಬಾಳೆಪುಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಮಾತನಾಡುತ್ತಾ, ಗ್ರಾಮೀಣ ಮಹಿಳೆಯರು ಇಂತಹ ತರಬೇತಿಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿ ಮಹಿಳಾ ಸಬಲೀಕರಣದ ದಿಸೆಯಲ್ಲಿ ಪಂಚಾಯತ್ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ಉಪಾಧ್ಯಕ್ಷ ಸಿಎಂ ಶರೀಫ್ ಪಟ್ಟೋರಿ ಅವರು, ಮಹಿಳೆಯರ ಸ್ವಾವಲಂಬನೆ ಕುಟುಂಬ ಹಾಗೂ ಸಮಾಜದ ಪ್ರಗತಿಗೆ ಪ್ರಮುಖವಾಗಿದೆ. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅವಕಾಶ ಮಾಡಿ ಕೊಡುತ್ತದೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲೆಯ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಮಾತನಾಡಿ, ಕೌಶಲ್ಯದ ಜೊತೆಗೆ ಸ್ವಚ್ಛತೆ ಮತ್ತು ಶಿಸ್ತು ಜೀವನದ ಯಶಸ್ಸಿಗೆ ಅಗತ್ಯವೆಂದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಆಯಿಷಾ ಬಾನು ಬಿ.ಎ ಅವರು, ಮಹಿಳೆಯರಿಗೆ ಅವಕಾಶ ನೀಡಿದರೆ ಅವರು ಸಮಾಜವನ್ನು ಮುನ್ನಡೆಸುವ ಶಕ್ತಿ ಹೊಂದಿದ್ದಾರೆ ಎಂದು ತನ್ನ ಅನುಭವದ ಮಾತಗಳನ್ನಾಡಿದರು.

ಸಮಾರೋಪ ನುಡಿಯನ್ನು ಶಿಕ್ಷಕಿ ಶ್ರೀಮತಿ ಮಾಲಾಕ್ಷಿ ಅವರು ನೀಡಿ, ಶಿಬಿರ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಭಂಡಾರಿ, BSWT ಮಂಗಳೂರು ಉಪಾಧ್ಯಕ್ಷ ಅಬ್ದುಲ್ಲಾ ಹಾಗೂ ಸತ್ತಾರ್ ಕೈರಂಗಳ ಉಪಸ್ಥಿತರಿದ್ದರು.

ಹೊಲಿಗೆ ತರಬೇತಿ ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ತಾವು ಮೂರು ತಿಂಗಳ ಅವಧಿಯಲ್ಲಿ ಮಾಡಿದ ವಸ್ತುಗಳ ಪ್ರದರ್ಶನವೂ ಈ ಸಂದರ್ಭದಲ್ಲಿ ನಡೆಯಿತು.

ವಕೀಲರಾದ ಕೆ ಮುಹಮ್ಮದ್ ಝಮೀರ್ ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ರಮ್ಯಾ ಎಂ ಅವರು ನಡೆಸಿಕೊಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...