ಮಂಗಳೂರು | ಸ್ಥಳ ಮಹಜರಿನ ವೇಳೆ ಪೊಲೀಸರ ಮೇಲೆ ‘ಚಡ್ಡಿ ಗ್ಯಾಂಗ್’ ದಾಳಿ; ಕಾಲಿಗೆ ಗುಂಡೇಟು!

Date:

ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಜುಲೈ 9ರ ಮಂಗಳವಾರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ‘ಚಡ್ಡಿ ಗ್ಯಾಂಗ್’ ಅನ್ನು ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದರು.

ಆರೋಪಿಗಳನ್ನು ಸಕಲೇಶಪುರದಿಂದ ಮಂಗಳೂರಿಗೆ ಮಂಗಳವಾರ ಸಂಜೆ ಕರೆತರಲಾಗಿತ್ತು. ಬುಧವಾರ ಬೆಳಗ್ಗೆ ದರೋಡೆ ನಡೆಸಿದ ಬಳಿಕ ಮುಲ್ಕಿಯಲ್ಲಿ ಕಾರು ಬಿಟ್ಟು ಹೋಗಿದ್ದ ಸ್ಥಳದ ಮಹಜರು ಮಾಡಲು ಹೋದ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿ, ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ.

ಚಡ್ಡಿ ಗ್ಯಾಂಗ್ 1 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಪೊಲೀಸರಿಗೆ ಗಾಯವಾಗಿದ್ದು, ಆರೋಪಿಗಳ ಮೇಲೆ ಪೊಲಿಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಗುಂಡೇಟಿನಿಂದ ಇಬ್ಬರು ಆರೋಪಿಗಳ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಪಡುಪಣಂಬೂರು ಬಳಿ ಘಟನೆ ನಡೆದಿರುವುದಾಗಿ ಮಾಹಿತಿ ಲಭಿಸಿದೆ. ದರೋಡೆ ಪ್ರಕರಣ ಹಾಗೂ ಪರಾರಿಯಾಗಲು ಯತ್ನಿಸಿದ ಬಗೆಗಿನ ಎಲ್ಲ ವಿವರಗಳನ್ನು ನೀಡಲು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಬುಧವಾರ ಬೆಳಗ್ಗೆ 11.30ಕ್ಕೆ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.

ಏನಿದು ಪ್ರಕರಣ?

ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಜುಲೈ 9ರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ಚಡ್ಡಿ ಗ್ಯಾಂಗ್ ಅನ್ನು ಮಂಗಳೂರು ಪೊಲೀಸರು, ಹಾಸನ ಪೊಲೀಸರ ನೆರವಿನಿಂದ ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ದರೋಡೆಗೈದು ಬಸ್ಸಿನಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗುತ್ತಿದ್ದ ತಂಡವನ್ನು ಕೆಎಸ್‌ಆರ್‌ಟಿಸಿಯ ಬಸ್ ಚಾಲಕ ಹಾಗೂ ಕಂಡಕ್ಟರ್ ನೀಡಿದ ಮಾಹಿತಿಯ ಮೇರೆಗೆ ಸಕಲೇಶಪುರದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಬಂಧಿತರೆಲ್ಲರೂ ಮಧ್ಯಪ್ರದೇಶದ ಮೂಲದವರಾಗಿದ್ದು, ರಾಜು ಸಿಂಗ್ವಾನಿಯ (24 ವರ್ಷ), ಮಯೂರ್ (30 ವರ್ಷ), ಬಾಲಿ (22 ವರ್ಷ), ವಿಕ್ಕಿ (21 ವರ್ಷ) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ: ದರೋಡೆ ನಡೆಸಿ ಪರಾರಿಯಾಗುತ್ತಿದ್ದ ‘ಚಡ್ಡಿ ಗ್ಯಾಂಗ್’ ಬಂಧನ

ಈ ಚೆಡ್ಡಿ ಗ್ಯಾಂಗ್‌, ಮಂಗಳವಾರ ಮುಂಜಾನೆ 3.30ರ ಅವಧಿಯಲ್ಲಿ ಉರ್ವ ಕೊಟ್ಟಾರದ ಬಳಿ ವೃದ್ಧ ದಂಪತಿ ವಾಸವಿರುವ ಮನೆಯೊಂದಕ್ಕೆ ಪ್ರವೇಶಿಸಿ, ಮಾರಕಾಯುಧ ತೋರಿಸಿ ಬೆದರಿಸಿ ದರೋಡೆ ಕೃತ್ಯ ನಡೆಸಿದ್ದರು. ಆ ಬಳಿಕ ಮನೆಯಲ್ಲಿದ್ದ ಕಾರಿನ ಕೀಯನ್ನು ಪಡೆದುಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಮುಲ್ಕಿ ಸಮೀಪ ಕಾರನ್ನು ತೊರೆದು, ಮತ್ತೆ ಮಂಗಳೂರು ಕಡೆಗೆ ಬಂದ ಬಸ್‌ನಲ್ಲಿ ಹತ್ತಿದ್ದರು. ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಉಡುಪಿ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ದರೋಡೆಗೈದಿದ್ದ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಪೊಲೀಸರಿಗೆ ಕಂಡು ಬಂದಿತ್ತು.

ಆ ಬಳಿಕ ಮಂಗಳೂರಿನಿಂದ ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದ ತಂಡವನ್ನು ಸಕಲೇಶಪುರ ಪೊಲೀಸರ ನೆರವಿನಿಂದ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...