ಮಂಗಳೂರು | ಮಕ್ಕಳ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು: ಡಾ. ನಿಕೇತನಾ

Date:

ಪ್ರತಿಯೊಂದು ಮಗುವಲ್ಲೂ ವಿವಿಧ ರೀತಿಯ ಪ್ರತಿಭೆಗಳಿದ್ದು, ಅವರ ಪ್ರತಿಭೆಯ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು ಎಂದು ಉಡುಪಿ ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಹೆಣ್ಣುಕ್ಕಳ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನಾ ಹೇಳಿದರು.

ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಗಳ ಜಂಟಿ ಆಶ್ರಯದಲ್ಲಿ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ಸಭಾಂಗಣದಲ್ಲಿ ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಚಿಣ್ಣರ ಕಲರವ-2025ರ ಮಕ್ಕಳ ಕಲಿಕಾ ಕಾರ್ಯಾಗಾರವನ್ನು ಉದ್ಘಾಟಿಸುತ್ತಾ ಅವರು ಮಾತನಾಡಿದರು.

“ಭವಿಷ್ಯತ್ತಿನ ಹರಿಕಾರರಾದ ಮಕ್ಕಳ ಮೇಲೆ ನಡೆಯುತ್ತಿರುವ ಪ್ರಜ್ಞಾಪೂರ್ವಕ ದಾಳಿಯಿಂದಾಗಿ ಮಕ್ಕಳ ಭವಿಷ್ಯ ಅಡಕತ್ತರಿಯಲ್ಲಿ ಸಿಲುಕುವಂತಾಗಿದೆ. ಅಂತಹ ಮಕ್ಕಳಿಗೆ ಪ್ರೀತಿಯ ಧಾರೆ ಎರೆಯುವ ಮೂಲಕ ಅವರಲ್ಲಿರುವ ಅಪಾರ ಶಕ್ತಿಯನ್ನು ಹೊರತೆಗೆಯಬೇಕು. ಮಕ್ಕಳಲ್ಲಿರುವ ಅಪಾರ ಶಕ್ತಿಯನ್ನು ಗುರುತಿಸಿ ನೀರೆರೆದು ಪೋಷಿಸಿ ಹೆಮ್ಮರವಾಗಿ ಬೆಳೆಸುವಲ್ಲಿ ಹಿರಿಯರ ಪಾತ್ರ ಮಹತ್ವದ್ದಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 19 at 4.24.36 PM 1

ಕೇರಳ ಬಾಲಸಂಘದ ರಾಜ್ಯ ಸಮಿತಿ ಸದಸ್ಯೆ ಭಾರತಿ ಎಸ್ ಮಾತನಾಡಿ, “ಇತಿಹಾಸಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ವಾಸ್ತವ ಜಗತ್ತಿನಲ್ಲಿ ಕಾರ್ಯಾಚರಿಸಿ ಭವಿಷ್ಯದ ಬದುಕನ್ನು ಕಟ್ಟಬೇಕಾದ ಎಳೆಯ ಮಕ್ಕಳಲ್ಲಿ ಪ್ರಜ್ಞಾಪೂರ್ವಕವಾಗಿ ಇತಿಹಾಸವನ್ನು ತಿರುಚಿ ಸುಳ್ಳುಗಳನ್ನು ಸೃಷ್ಟಿಸಿ, ಮೂಢನಂಬಿಕೆಗಳನ್ನು ವೈಭವೀಕರಿಸಿ ಅರಾಜಕತೆಯನ್ನುಂಟು ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಪ್ರಬಲ ಧ್ವನಿಯನ್ನು ಮೊಳಗಿಸಬೇಕು. ಆ ಮೂಲಕ ಚರಿತ್ರೆಯನ್ನು ಅರಿತು ವೈಜ್ಞಾನಿಕ ಮನೋಭಾವವನ್ನು ಎಳೆಯ ಪ್ರಾಯದ ಮಕ್ಕಳಲ್ಲಿ ಮೂಡಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು | ಸರ್ಕಾರಿ ಜಾಗ ಅತಿಕ್ರಮಿಸಿ ಮೂರ್ತಿ ನಿರ್ಮಾಣ- ‘ಈ ದಿನ’ ವರದಿ ನಂತರ ಅಧಿಕಾರಿಗಳಿಂದ ಕ್ರಮ

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಮಾತನಾಡಿ, “ಏನೂ ತಿಳಿಯದ ಮುಗ್ಧ ಮನಸುಗಳಿಗೆ ಪ್ರೀತಿ ನೀಡುವ ಮೂಲಕ ಅವರು ಮತ್ತೆ ಸಮಾಜಕ್ಕೆ ಪ್ರೀತಿಯನ್ನು ನೀಡುವಲ್ಲಿ ಸಮಾಜದ ಎಲ್ಲಾ ವರ್ಗದ ಜನತೆ ಒಂದಾಗಬೇಕಾಗಿದೆ ಹಾಗೂ ಮಕ್ಕಳ ಮನಸನ್ನು ಅರಿಯುವ ವಿಶಾಲ ಹೃದಯ ಪ್ರತಿಯೊಬ್ಬರಲ್ಲಿ ಇರಬೇಕಾಗಿದೆ” ಎಂದು ಹೇಳಿದರು.

WhatsApp Image 2025 05 19 at 4.24.35 PM

ಕಾರ್ಯಕ್ರಮದಲ್ಲಿ ವಿಮಾ ನೌಕರರ ಸಂಘಟನೆಯ ಮುಖಂಡ ಅಲ್ಬನ್ ಮಸ್ಕರೇನಸ್, ಚಿಣ್ಣರ ಚಾವಡಿ ಸಂಚಾಲಕ ಸುನಿಲ್ ಕುಮಾರ್ ಬಜಾಲ್, ಸಾಮಾಜಿಕ ಚಿಂತಕ ಡಾ.ಲಯನ್ ಓಸ್ವಾಲ್ಡ್ ಪುರ್ತಾಡೋ, ವಿದ್ಯಾ ಶೆಣೈ, ನೀನಾಸಂ ಪದವೀಧರರಾದ ಮೈಟಿ ಗಿಬ್ಸನ್, ಯುವ ಉದ್ಯಮಿಗಳಾದ ಸಿರಾಜ್ ಮಂಜೇಶ್ವರ, ಶಿಬಿರದ ನಿರ್ದೇಶಕ ಪ್ರವೀಣ್ ವಿಸ್ಮಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...