ಮಂಗಳೂರು | ಕ್ಯಾರವಾನ್ ಪ್ರವಾಸೋದ್ಯಮಕ್ಕೆ ಕರಾವಳಿಗರ ನೀರಸ ಪ್ರತಿಕ್ರಿಯೆ

Date:

ಕರಾವಳಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಕವಾಗಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಕ್ಯಾರವಾನ್ ಪ್ರವಾಸೋದ್ಯಮ ಪ್ರಸ್ತಾವನೆ ಇಟ್ಟಿತ್ತು. ಒಂದು ವರ್ಷವಾದರೂ ಈ ಪ್ರಸ್ತಾವನೆಯಡಿ ಸೇವೆ ಆರಂಭಿಸಲು ಕರಾವಳಿ ಜಿಲ್ಲೆಯಲ್ಲಿ ಯಾರೊಬ್ಬರೂ ಆಸಕ್ತಿ ತೋರಿಸುತ್ತಿಲ್ಲ.

ರಾಜ್ಯ ಸರ್ಕಾರ ಅಗತ್ಯ ಸೌಲಭ್ಯ ಮತ್ತು ಕ್ಯಾರವಾನ್ ಪ್ರವಾಸೋದ್ಯಮಕ್ಕೆ ಮೂಲಸೌಕರ್ಯ ಮಾಡಿಕೊಟ್ಟರೆ ಜನ ಬರುತ್ತಾರೆ. ಅಲ್ಲದೆ, ಈ ಪ್ರಸ್ತಾವನೆ ಇನ್ನೂ ಆರಂಭಿಕ ಹಂತದಲ್ಲಿದೆ. ಕ್ಯಾರವಾನ್ ಪ್ರವಾಸೋದ್ಯಮವು ಕರಾವಳಿಯಲ್ಲಿ‌ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಕೆಲವು ಅಧಿಕಾರಿಗಳು ನಂಬಿದ್ದಾರೆ.

ಕ್ಯಾರವಾನ್ ಪ್ರವಾಸೋದ್ಯಮ ಕುಟುಂಬ ಆಧರಿತ ಪ್ರವಾಸಗಳನ್ನು ಉತ್ತೇಜಿಸುತ್ತದೆ. ಈ ವಾಹನದಲ್ಲಿ ಮಲಗುವ ಕೋಣೆ, ಅಡುಗೆ ಕೋಣೆಗಳು ಇರುತ್ತವೆ. ವಾಸ್ತವ್ಯ ಮತ್ತು ಪ್ರಯಾಣಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ಸುರಕ್ಷಿತವಾಗಿ ಪ್ರವಾಸಿ ಸ್ಥಳವನ್ನು ತಲುಪಬಹುದು ಎಂದು ಇಲಾಖೆ ಹೇಳುತ್ತಿದೆ.    

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವರ್ಷದ ಹಿಂದೆ ದಕ್ಷಿಣ ಕನ್ನಡ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಾಣಿಕ್ಯ ಅವರು, ಕ್ಯಾರವಾನ್ ಪ್ರವಾಸೋದ್ಯಮಕ್ಕಾಗಿ ಬಿಡ್ ಕರೆದಿದ್ದರು. ಆದರೆ, ಈ ಬಗ್ಗೆ ಎರಡು ಮೂರು ಪ್ರಶ್ನೋತ್ತರಗಳು ನಡೆದಿವೆ ಬಿಟ್ಟರೆ, ಹೆಚ್ಚಿನ ಪ್ರಗತಿ ಕಂಡಿಲ್ಲ ಎಂದು ಹೇಳಲಾಗಿದೆ.

ಕ್ಯಾರವಾನ್ ವಾಹನಗಳ ಜೊತೆ ರಾಜ್ಯ ಸರ್ಕಾರ ಕ್ಯಾರವಾನ್ ಪಾರ್ಕ್‌ ಸಹ ಪ್ರಸ್ತಾಪಿಸಿದೆ. ಇದರಿಂದ, ಕ್ಯಾರವಾನ್ ವಾಹನಗಳನ್ನು ರಾತ್ರಿ ವೇಳೆ ನಿಗದಿತ ಜಾಗದಲ್ಲಿ ನಿಲ್ಲಿಸಬಹುದು. ಅರ್ಧ ಎಕರೆ ಜಾಗದಲ್ಲಿ ಕನಿಷ್ಟ ಐದು ‘ಪಾರ್ಕಿಂಗ್‌ ಬೇ’ಗಳು ಬೇಕಾಗುತ್ತದೆ. ಕ್ಯಾರವಾನ್ ಪಾರ್ಕ್‌ಗಳು ಬೀಚ್ ಬದಿಗಳಲ್ಲಿ ಇದ್ದರೆ ಒಳ್ಳೆಯದು. ಅಲ್ಲಿ ಸಾಕಷ್ಟು ಸೌಲಭ್ಯಗಳು, ಭದ್ರತೆ ಹಾಗೂ ಮೂಲಸೌಕರ್ಯಗಳನ್ನು ಹೊಂದಿರುವ ಸ್ಥಳಗಳಲ್ಲಿ ಕಾರವಾನ್‌ ಪಾರ್ಕ ಮುಂದಿನ ದಿನಗಳಲ್ಲಿ ನಿರ್ಮಾಣವಾಗಬಹುದು ಎನ್ನುತ್ತಾರೆ ಎಂದು ಮಧ್ಯವರ್ತಿಗಳು ಮತ್ತು ಬಿಡ್‌ದಾರರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...