ಮಂಗಳೂರು | ಕೆಂಪುಕಲ್ಲು, ಮರಳು ಇಲ್ಲದೇ ನಿರ್ಮಾಣ ಕಾರ್ಯ ಸ್ಥಗಿತ: ಸಿವಿಲ್ ಗುತ್ತಿಗೆದಾರರ ಸಂಘ

Date:

ಜಿಲ್ಲೆಯಲ್ಲಿ ಕಳೆದ ಒಂದೆರಡು ತಿಂಗಳಿನಿಂದ ಕೆಂಪು ಕಲ್ಲು ಹಾಗೂ ಮರಳು ಸಿಗದೆ ಕಟ್ಟಡ ನಿರ್ಮಾಣ ಕಾಮಗಾರಿಗಳು ಪೂರ್ಣವಾಗಿ ಸ್ಥಗಿತವಾಗಿದೆ. ಇದರಿಂದ ನಿರ್ಮಾಣ ಕಾರ್ಮಿಕರ ಜತೆಗೆ ಈ ಉದ್ಯಮವನ್ನು ನಂಬಿದ ಕೂಲಿ ಕಾರ್ಮಿಕರು ಉದ್ಯಮಿಗಳು ಸೇರಿದಂತೆ ಹಲವು ತೀವ್ರವಾಗಿ ಆರ್ಥಿಕ ತೊಂದರೆಗೆ ಸಿಲುಕಿದ್ದಾರೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ನೀಡಿರುವ ಭರವಸೆಯಂತೆ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಅನಿವಾರ್ಯ ಎಂದು ದ.ಕ. ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘ ತಿಳಿಸಿದೆ.

ಇಂದು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ, ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬೇಕಾದ ಉತ್ತಮ ಗುಣಮಟ್ಟದ ಮರಳು ಹಲವು ವರ್ಷಗಳಿಂದ ಲಭ್ಯವಾಗದೆ ಗುತ್ತಿಗೆದಾರರು ಈಗಾಗಲೇ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ. ಇದೀಗ ಒಂದೆರಡು ತಿಂಗಳಿನಿಂದ ಕಾನೂನಿನ ನೆಪವೊಡ್ಡಿ ಕೆಂಪು ಮುರಕಲ್ಲಿನ ಗಣಿಗಾರಿಕೆ ನಿರ್ಬಂಧಿಸಿರುವ ಕಾರಣ ಮತ್ತಷ್ಟು ಸಮಸ್ಯೆ ಹೆಚ್ಚಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕೈದಿಗೆ ಮಾದಕ ವಸ್ತು ಪೂರೈಕೆ: ಮಂಗಳೂರು ಜೈಲು ಮೇಲೆ ಪೊಲೀಸ್-ಎಸ್‌ಎಎಫ್‌ ತಂಡ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸುವ ಬಗ್ಗೆ ಹಲವು ವರ್ಷಗಳಿಂದ ಸರ್ಕಾರದ ಪ್ರತಿನಿಧಿಗಳು ಹೇಳುತ್ತಾ ಬಂದಿದ್ದರೂ ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಕೆಂಪು ಕಲ್ಲು ಕೂಡಾ ಇದೀಗ ಅಲಭ್ಯವಾಗಿದೆ. ಇದರಿಂದ ನಿರ್ಮಾಣ ಕ್ಷೇತ್ರದಲ್ಲಿ ತಲ್ಲಣ ಸೃಷ್ಠಿಯಾಗಿದೆ. ಗ್ರಾಮಾಂತರ ಭಾಗಗಳಲ್ಲಿ ಒಂದು ಅಥವಾ ಎರಡು ಮಹಡಿ ಮನೆಗಳನ್ನು ಕಾಂಕ್ರಿಟ್ ಪಿಲ್ಲರ್ ಇಲ್ಲದೆ ಕೆಂಪು ಕಲ್ಲು ಬಳಸಿ ಮಧ್ಯಮ ಹಾಗೂ ಬಡ ವರ್ಗದ ಜನರ ಮನೆ ನಿರ್ಮಾಣ ಮಾಡುತ್ತಿದ್ದರು. ಕೆಂಪು ಕಲ್ಲು ಹಾಗೂ ಮರಳು ಸಿಗದೆ ಅವರ ಕನಸಿಗೆ ಈಗ ತೊಂದರೆಯಾಗಿದೆ.

ಇದನ್ನೂ ಓದಿ: ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುತ್ತಿಗೆದಾರರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ರಾಜ್ಯದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ದುಡಿಮೆಯ ಪಾಲನ್ನು ಭರಿಸುತ್ತಿದ್ದೇವೆ. ಇದೀಗ ನಮ್ಮ ಜಿಲ್ಲೆಯ ಕಾರ್ಮಿಕ ವರ್ಗವಲ್ಲದೆ, ಹೊರ ಜಿಲ್ಲೆ, ರಾಜ್ಯಗಳ ಕಾರ್ಮಿಕರು ಕೂಡಾ ಕೆಲಸ ಇಲ್ಲದೇ ಉಪವಾಸ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಹೀಗೇ ಮುಂದುವರಿದರೆ ಜಿಲ್ಲೆಯ ಆರ್ಥಿಕತೆಗೆ ಪರಿಣಾಮ ಬೀರಲಿದೆ. ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತಂದರು, ಸಚಿವ ಸಂಪುಟ ಸಭೆ ನಡೆಸಿ ಈ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಮಸ್ಯೆ ಶೀಘ್ರ ಬಗೆಹರಿಸದಿದ್ದರೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದರು.

ಸ್ಯಾಂಡ್‌ ಬಝಾರ್ ಆ್ಯಪ್ ನಲ್ಲೂ ಮರಳು ಲಭ್ಯವಿಲ್ಲ

ಜಿಲ್ಲಾಡಳಿತ ಸ್ಯಾಂಡ್‌ ಬಝಾರ್ ಆ್ಯಪ್ ಮೂಲಕ ಮರಳು ಪಡೆಯಲು ತಿಳಿಸಿದೆ. ಆದರೆ ಈಗ ಆ್ಯಪ್‌ನಲ್ಲೂ ಮರಳು ಇಲ್ಲ. ಗಣಿ ಇಲಾಖೆಯವರು ಈ ಬಗ್ಗೆ ಸ್ಪಂದಿಸುತ್ತಿಲ್ಲ. ಆ್ಯಪ್ ಮೂಲಕ ಸಿಗುವ ಮರಳಿನ ದರ ಹೆಚ್ಚಾಗಿದ್ದು, ಮರಳಿನ ಗುಣಮಟ್ಟ ಮನೆ ನಿರ್ಮಾಣಕ್ಕೆ ಪೂರಕವಾಗಿಲ್ಲ ಎಂದು ಉಪಾಧ್ಯಕ್ಷ ಸತೀಶ್ ಕುಮಾರ್ ಹೇಳಿದರು.

ಇದನ್ನೂ ಓದಿ: ಕೇಂದ್ರದಿಂದ ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌: ಸಂಸದ ಕ್ಯಾ.ಬ್ರಿಜೇಶ್ ಚೌಟ

ಸುದ್ದಿಗೋಷ್ಠಿಯಲ್ಲಿ ಸಂಘದ ಜೊತೆ ಕಾರ್ಯದರ್ಶಿ ಲಕ್ಷ್ಮಿ ಪ್ರಸಾದ್, ಕೋಶಾಧಿಕಾರಿ ಸುರೇಶ್ ಜೆ, ಸದಸ್ಯರಾದ ಚಂದನ್, ಕೇಶವ ಚನ್ನಪ್ಪ ಮೊದಲಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...