ಮಂಗಳೂರು | ಕೊರಗರ ಮೂಲದ ಮಹತ್ವದ ಅಂಶ ಪತ್ತೆ; ವಿವಿ ಕುಲಪತಿ ಪ್ರೊ. ಧರ್ಮ ಮಾಹಿತಿ

Date:

ಮಂಗಳೂರು ವಿವಿ ಮತ್ತು ಯೇನೆಪೊಯ ವಿವಿ ಜಂಟಿಯಾಗಿ ನಡೆಸಿದ ಕೊರಗ ಜನಾಂಗದ ಕುರಿತ ಅನುವಂಶಿಕ ಅಧ್ಯಯನದಲ್ಲಿ ಕೊರಗರ ಮೂಲದ ಕುರಿತು ಮಹತ್ವದ ಫಲಿತಾಂಶ ಲಭಿಸಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ ಎಲ್ ಧರ್ಮ ತಿಳಿಸಿದರು.

ಮಂಗಳೂರು ವಿವಿ ಇತರ ಖಾಸಗಿ ವಿವಿಗಳ ಜತೆ ಸಂಶೋಧನೆ ಆಧಾರಿತ ಒಪ್ಪಂದ ಮಾಡಿಕೊಂಡಿತ್ತು. ಅದರ ಭಾಗವಾಗಿ ಈ ಸಂಶೋಧನೆ ನಡೆದಿದ್ದು, ಮಹತ್ವದ ಮೈಲುಗಲ್ಲು ಸಾಧಿಸಿದೆ. ಮಂಗಳೂರು ವಿವಿ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಎಂ ಎಸ್ ಮುಸ್ತಾಕ್ ಮತ್ತು ಯೇನೆಪೊಯ ಅಧ್ಯಯನ ಕೇಂದ್ರದ ಡಾ. ರಣಜಿತ್ ದಾಸ್ ನೇತೃತ್ವದಲ್ಲಿ ಈ ಸಂಶೋಧನೆ ನಡೆದಿದೆ ಎಂದು ತಿಳಿಸಿದರು.

ಸಂಶೋಧಕ ಡಾ. ಎಂ ಎಸ್ ಮುಸ್ತಾಕ್ ಮಾತನಾಡಿ, “ಸಂಶೋಧನೆಯ ಮುಖ್ಯ ಉದ್ದೇಶ ಕೊರಗರ ಮೂಲದ ನಿಖರ ಸ್ವರೂಪ ಪತ್ತೆ ಹಚ್ಚುವುದಾಗಿತ್ತು. ವೈಜ್ಞಾನಿಕ ಪರೀಕ್ಷೆಗಳನ್ನು ಬಳಸಿಕೊಂಡು ಕೊರಗರ ಜೀನ್ ಸಂಯೋಜನೆ(ಜೆನೆಟಿಕ್ ಕಾಂಪೊಸಿಶನ್)ಯನ್ನು ವಿಶ್ಲೇಷಿಸಲಾಗಿದೆ. ಕೊರಗರ ಜೀನ್ ಸಂಯೋಜನೆ 3 ಪ್ರಮುಖ ಮೂಲಗಳಿಂದ ಬಂದಿರುವುದು ಸಂಶೋಧನೆಯಲ್ಲಿ ಖಚಿತವಾಗಿದೆ. ಪ್ರಾಚೀನ ದಕ್ಷಿಣ ಭಾರತೀಯರು(ಇವರು ಅಂಡಮಾನ್ ದ್ವೀಪದ ಬೇಟೆಯಾಡುವ ಜನಾಂಗಕ್ಕೆ ಸಂಬಂಧಿಸಿದವರು), ಸಿಂಧು ನಾಗರಿಕತೆಯ ಅಂಚಿನ ಜನರು ಇವರು ಸಿಂಧು ನಾಗರಿಕತೆಯ ಸುತ್ತಮುತ್ತ ವಾಸಿಸುತ್ತಿದ್ದ ಜನಾಂಗ) ಹಾಗೂ ಇರಾನ್ ಪರ್ವತ ಪ್ರದೇಶದ ಪ್ರಾಚೀನ ಕೃಷಿಕರ ಮೂಲಗಳಿಂದ ಬಂದಿದೆ ಎಂದರು. ಕೊರಗರ ಅನುವಂಶಿಕ ವಸ್ತುವಿನಲ್ಲಿ ಕಂಡುಬಂದ ಇರಾನ್ ನ್ಯೂಲಿಥಿಕ್ ಅಂಶವು ಇತರ ಭಾರತೀಯ ಜನಾಂಗಗಳಲ್ಲಿ ಕಂಡು ಬರುವುದಕ್ಕಿಂತ ಸಂಪೂರ್ಣ ವಿಭಿನ್ನವಾಗಿತ್ತು. ಇದು ತುಂಬ ಪ್ರಾಚೀನ ಮೂಲದಿಂದ ಬಂದದ್ದು, ಇದರರ್ಥ ಕೊರಗರು ಭಾರತದ ಜನಾಂಗೀಯ ಇತಿಹಾಸದಲ್ಲಿ ಹಳೆಯ ಮತ್ತು ಸ್ವತಂತ್ರ ಶಾಖೆಯಾಗಿ ಉಳಿದಿದ್ದಾರೆ. ಸಂಶೋಧನೆಯಲ್ಲಿ ಇಂದಿನ ವಿವಿಧ ದ್ರಾವಿಡ ಭಾಷಾ ಜನಾಂಗಗಳ ಜೀನ್ ಮಾದರಿಗಳನ್ನು ಪರೀಕ್ಷಿಸಲಾಯಿತು. ಕೊರಗರ ಅಂಶವಿಲ್ಲದೆ ಭಾರತೀಯ ಜನಾಂಗಗಳ ಮೂಲದ ಸಂಪೂರ್ಣ ಪರಿಕಲ್ಪನೆ ನೀಡಲು ಸಾಧ್ಯವಾಗುವುದಿಲ್ಲ ಎಂಬುದು ಸಂಶೋಧನೆ ಸಾಬೀತುಪಡಿಸಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕೊರಗರ ಮೂಲದ ಮಹತ್ವದ ಅಂಶ ಪತ್ತೆ: ಕುಲಪತಿ ಪ್ರೊ. ಪಿ ಎಲ್ ಧರ್ಮ ಮಾಹಿತಿ

ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು. ಇವರ ಜೀನ್‌ಗಳಲ್ಲಿ ಅಡಕವಾಗಿರುವ ಅಂಶವು ಭಾರತದ ಪುರಾತನ ಇತಿಹಾಸದಲ್ಲಿ ನಾಪತ್ತೆಯಾದ ಒಂದು ಪ್ರಮುಖ ಕೊಂಡಿಯಾಗಿದೆ ಎಂದರು.

ಸಂಶೋಧಕ ಡಾ. ರಣಜಿತ್ ದಾಸ್ ಮಾತನಾಡಿ, “ಕೊರಗ ಸಮುದಾಯದಲ್ಲಿ ಕಂಡುಬರುವ ಜೀನ್ ಹ್ಯಾಪ್ಲೊಟೈಪ್, ಅವರೊಳಗಿನ ಅಂತರ್‌ ವಿವಾಹದ ಪರಿಣಾಮ ಆಗಿರಬಹುದು. ಅಲ್ಲದೆ ಈ ಅಧ್ಯಯನ ಅನೇಕ ಅನುವಂಶಿಕ ಕಾಯಿಲೆಗಳಿಗೆ ಕಾರಣವಾಗಬಹುದಾದ ರೂಪಾಂತರಗಳನ್ನು ಪತ್ತೆ ಹಚ್ಚಿದೆ. ಕೊರಗ ಸಮುದಾಯದಲ್ಲಿ ಶಿಶು ಸಾವಿನ ಪ್ರಮಾಣ, ನರಸಂಬಂಧಿ ತೊಂದರೆಗಳು, ಕುರುಡುತನ, ಬಂಜೆತನ ಕಂಡುಬಂದಿದ್ದು, ಇದರ ಒಟ್ಟಾರೆ ಪರಿಣಾಮವಾಗಿ ಕೊರಗರ ಜೀವಿತಾವಧಿ ಕಡಿಮೆಯಾಗಲು ಕಾರಣವಾಗಿರಬಹುದು” ಎಂದು ತಿಳಿಸಿದರು.

ಮಂಗಳೂರು ವಿವಿ ಪ್ರಾಧ್ಯಾಪಕಿ ಡಾ.ಸಬಿತಾ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...