ಮಂಗಳೂರು | ಕ್ಷಣಿಕ ಸುಖಕ್ಕೆ ಜೀವನ ಹಾಳು ಮಾಡಿಕೊಳ್ಳಬೇಡಿ: ಡಿಸಿ ದರ್ಶನ್

Date:

ದೇವರು ನಮಗೆ ಸುಂದರವಾದ ಜೀವನ ನೀಡಿದ್ದಾನೆ. ಅದನ್ನು ಮಾದಕ ವಸ್ತುಗಳ ಸೇವನೆ ಮಾಡುವ ಮೂಲಕ ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತು ಸೇವನೆಯು ಯಾರಿಗೂ ಒಳ್ಳೆಯದು ಅಲ್ಲ. ಅಂತಹ ಕೆಟ್ಟ ಚಟ ಜೀವನದಲ್ಲಿ ಬಾರದಂತೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಹೆಚ್ ವಿ ಹೇಳಿದರು.

ಮಂಗಳೂರು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ರೊಫೆಶನಲ್ ಎಜುಕೇಶನ್ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಗುರುವಾರ ಆಯೋಜಿಸಿದ ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

“ಯೌವನದಲ್ಲಿ ಎಲ್ಲವೂ ಸರಿಯಾಗಿ ಕಾಣುತ್ತದೆ. ಆದರೇ ಇಳಿವಯಸ್ಸಿನಲ್ಲಿ ಅದರ ನೋವು ಏನು ಎಂದು ತಿಳಿಯುತ್ತದೆ. ಹೆತ್ತವರಿಗೆ ನಾವು ಕೀರ್ತಿ ತರಬೇಕೆ ಹೊರತು ನೋವು ನೀಡಬಾರದು. ಆದರೆ ಇಂದಿನ ಕೆಲವು ಮಕ್ಕಳು ತಂದೆ ತಾಯಿಗಳಿಗೆ ನೋವು ನೀಡುತ್ತಿರುವುದು ತೀರ ವಿಷಾದನೀಯ. ಕೆಲವರು ಕ್ಷಣಿಕ ಸುಖಕ್ಕಾಗಿ ತಮ್ಮ ಪೂರ್ತಿ ಜೀವನ ಹಾಳು ಮಾಡಿಕೊಳ್ಳುತ್ತಾರೆ. ನಾವು ಒಂದು ವೇಳೆ ಇಂತಹ ಚಟಕ್ಕೆ ಒಳಗಾಗಿದ್ದಾರೆ ಯಾವುದೇ ಸಂಕೋಚವಿಲ್ಲದೇ ಹೆತ್ತವರ ಬಳಿ ಅಥವಾ ನಿಮಗೆ ಮೇಲೆ ನಂಬಿಕೆ ಇರುವವರ ಹತ್ತಿರ ಹೇಳಿಕೊಂಡು ಚಟದಿಂದ ಹೊರಗೆ ಬರಲು ಪ್ರಯತ್ನ ಮಾಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ರೈತರ ಹೆಸರಿನಲ್ಲಿ ಅಧಿಕಾರ ಪಡೆದವರು ಈಗ ಕಾರ್ಪೊರೇಟಿಗರ ಗುಲಾಮರು: ಯಾದವ ಶೆಟ್ಟಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ಮಾತನಾಡಿ, “ಮಾದಕವಸ್ತುಗಳಿಗೆ ಗೆಳೆಯರು ದಾಸರಾಗಿದ್ದರೆ ಅವರನ್ನು ಸರಿ ದಾರಿಗೆ ತರುವ ಕೆಲಸ ಸ್ನೇಹಿತರದ್ದೇ ಆಗಿರುತ್ತದೆ. ಎಲ್ಲರೂ ಒಂದುಗೂಡಿದರೆ, ಯಾವುದೇ ಸಮಸ್ಯೆ ದೊಡ್ಡದಾಗಿ ಕಾಣುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿ ಈ ಪಿಡುಗನ್ನು ಸಮಾಜದಿಂದ ಹೊರಹಾಕಬೇಕು” ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಮಾಡಿಸುವ ಮೂಲಕ ಸಲಹೆ ನೀಡಿದರು.

ಇದನ್ನೂ ಓದಿ: ಮಂಗಳೂರು | ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಡಿಸಿ ಸೂಚನೆ

ನಟ ರೂಪೇಶ್‌ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಿಗೆ, ಯುವಕರಿಗೆ ಮಾದಕವಸ್ತುಗಳ ನಶೆ ಬೇಡ. ನಿಮಗೆ ಜೀವನದಲ್ಲಿ ಸಾಧನೆ ಮಾಡುವ ನಶೆ ಇರಲಿ. ಸಾಧಿಸುವ ನಶೆಯಿದ್ದರೆ ಜೀವನದಲ್ಲಿ ಯಶಸ್ಸು ಸಿಕ್ಕೆ ಸಿಗುತ್ತದೆ. ನಾವು ಬೇರೆಯವರ ಒಳ್ಳೆಯ ಗುಣಗಳನ್ನು ಕಲಿಯಬೇಕೆ ಹೊರತು, ಅವರ ಕೆಟ್ಟ ವಿಷಯಗಳನ್ನಲ್ಲ. ಅವರ ಕೆಟ್ಟ ಗುಣಗಳನ್ನು ಅನುಕರಣೆ ಮಾಡಿದರೆ ಜೀವನ ಹಾಳು ಮಾಡಿಕೊಳ್ಳತ್ತೀರಾ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...