ಮಂಗಳೂರು | ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

Date:

ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.

ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯುವ ಈ ಅಭಿಯಾನದ ಮುಖ್ಯ ಉದ್ದೇಶ ಎಂದರೆ ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ಪರಿಹರಿಸುವತ್ತ ಗಮನಹರಿಸಬದಾಗಿದೆ ಎಂದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ವ್ಯಾಪಕವಾದ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆ ಮತ್ತು ಶಿಕ್ಷಣವನ್ನು ನೀಡಲು ರಾಜ್ಯದ ಪ್ರತಿ ಗ್ರಾಮ ಪಂಚಾಯತ್‍ನಿಂದ ಎಲ್ಲಾ ಆಡಳಿತ ಹಂತಗಳಲ್ಲಿ ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನವನ್ನು ರಾಜ್ಯಾದ್ಯಂತ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ನಡೆಸಲಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ.

ಇದನ್ನೂ ಓದಿ: ಎಫ್‌ಎಸ್ಎಲ್ ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಶೋಧ ಕಾರ್ಯ ಸ್ಥಗಿತ: ಗೃಹ ಸಚಿವ ಡಾ. ಜಿ ಪರಮೇಶ್ವರ್

ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸಲಾಗುತ್ತದೆ. ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಮತ್ತು ಅವುಗಳ ದುಷ್ಪರಿಣಾಮಗಳ ಬಗ್ಗೆ ಸಮುದಾಯಗಳಿಗೆ ತಿಳಿಸಲು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ ಎಂದು  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

ಅಭಿಯಾನದಡಿ ವಿಶೇಷ ಕಾರ್ಯಕ್ರಮಗಳು: ಅಭಿಯಾನವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು, ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಸ್ವಸಹಾಯ ಗುಂಪುಗಳ ಮೂಲಕ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಬೀದಿ ನಾಟಕಗಳು, ಜಾಗೃತಿ ರ್ಯಾಲಿಗಳು, ಉಪನ್ಯಾಸಗಳು, ಕಾರ್ಯಾಗಾರಗಳು, ಕರಪತ್ರಗಳು ಮತ್ತು ಪೋಸ್ಟರ್‌ಗಳು, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಅಭಿಯಾನಗಳು, ಆರೋಗ್ಯ ಸಲಹಾ ಶಿಬಿರಗಳು, ಕಿರುಚಿತ್ರಗಳ ಪ್ರದರ್ಶನಗಳು ಪ್ರಮಾಣ ವಚನ ಸಮಾರಂಭಗಳು ಈ ಎರಡು ತಿಂಗಳ ಅಭಿಯಾನದಲ್ಲಿ ಸೇರಿವೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...