ಮಂಗಳೂರು | ತುಳುನಾಡಿನ ಪಾರಂಪರಿಕ ಕೈಮಗ್ಗ ವೃತ್ತಿಯನ್ನು ಪ್ರೋತ್ಸಾಹಿಸಿ: ಅಮರಶ್ರೀ

Date:

ತುಳುನಾಡಿನ ಪಾರಂಪರಿಕ ಕೈ ಮಗ್ಗ ವೃತ್ತಿಗೆ ತುಳುನಾಡಿನ ಜನತೆ ಎಲ್ಲಾ ರೀತಿಯ ಸಹಕಾರ ಬೆಂಬಲ ಕೊಡಬೇಕು ಎಂದು ಎ ಬಿ ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಹೇಳಿದರು.

ಮಂಗಳೂರಿನ ಕಿನ್ನಿಗೋಳಿ ನೇಕಾರ ಸೌಧದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಕದಿಕೆ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಕೈ ಮಗ್ಗ ನೇಯ್ಗೆಯ ಹಿರಿಯ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಗೌರವ ಸಮರ್ಪಿಸಿ ಅವರು ಮಾತನಾಡಿದರು.

“ರಾಜ್ಯದ ಹಾಗೂ ದೇಶದ ಬೇರೆ ಬೇರೆ ಭಾಗಗಳಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಬೆಳೆದು ಬಂದ ನೇಯ್ಗೆ ವೃತ್ತಿಯ ಬಗ್ಗೆ ನಾವೆಲ್ಲ ಅಭಿಮಾನ ಪಟ್ಟುಕೊಳ್ಳುತ್ತೇವೆ. ಇದೇ ಸಂದರ್ಭದಲ್ಲಿ ನಮ್ಮದೇ ನೆಲದಲ್ಲಿ ಹುಟ್ಟಿ ಬೆಳೆದ ಒಂದು ಕಾಲದಲ್ಲಿ ಕುಲ ಕಸುಬಾಗಿದ್ದ, ಕೈ ಮಗ್ಗ ನೇಯ್ಗೆಯವರಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ವರ್ಷದಲ್ಲಿ ಒಂದು ಬಾರಿಯಾದರೂ ತುಳುನಾಡಿನ ಸೀರೆ ಹಾಗೂ ಕೈ ಮಗ್ಗದ ಉತ್ಪನ್ನಗಳನ್ನು ಖರೀದಿಸಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಕೈ ಮಗ್ಗ ನೇಯ್ಗೆಯ ಕುಶಲಕರ್ಮಿ ದೇವಕಿ ಶೆಟ್ಟಿಗಾರ್, “ತಾಳಿಪಾಡಿ ನೇಕಾರರ ಸೇವಾ ಸಂಘ ಹಾಗೂ ಕದಿಕೆ ಟ್ರಸ್ಟ್ ಅವರ ಕಾರಣದಿಂದಾಗಿ ನಾನು ಮತ್ತೇ ನನ್ನ ಮೂಲ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಯಿತು. ನನಗೆ ಸಿಕ್ಕಿದ ಗೌರವವು ಈ ಎರಡೂ ಸಂಸ್ಥೆಗಳಿಗೆ ಅರ್ಪಿಸುತ್ತೇನೆ” ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, “ತುಳು ಬದುಕಿನ ವಿಶಾಲವಾದ ವ್ಯಾಪ್ತಿಯೊಳಗಡೆ ಅನೇಕ ಕುಲಕಸುಬು ಹಾಗೂ ಕುಶಲಕರ್ಮಿಗಳ ಸೇವೆ ತುಳುನಾಡಿಗೆ ಸಂದಿವೆ. ಈ ಹಿನ್ನಲೆ ಕೈ ಮಗ್ಗ ನೇಯ್ಗೆಯಲ್ಲಿ ತೊಡಗಿಸಿಕೊಂಡ ಹಿರಿಯರನ್ನು ಪ್ರೋತ್ಸಾಹಿಸುವ ಸಲುವಾಗಿ  ಅಕಾಡೆಮಿ ವತಿಯಿಂದ ಚಾವಡಿ ತಮ್ಮನದ ಗೌರವ ನೀಡಲಾಯಿತು” ಎಂದರು.

ಇದನ್ನೂ ಓದಿ: ಮಂಗಳೂರು | ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಬಿಡುಗಡೆ

ಕದಿಕೆ ಟ್ರಸ್ಟ್ ನ ಅಧ್ಯಕ್ಷೆ ಮಮತಾ ರೈ ಮಾತನಾಡಿ, “2018 ರಲ್ಲಿ ಕದಿಕೆ ಟ್ರಸ್ಟ್ ವತಿಯಿಂದ ಪಾರಂಪರಿಕ ಕೈ ಮಗ್ಗವನ್ನು ಪುನರುಜ್ಜೀವನಗೊಳಿಸುವ  ಕೆಲಸ ಮಾಡಿಕೊಂಡು ಬರಲಾಯಿತು. ಇಂದು ದೇವಕಿ ಶೆಟ್ಟಿಗಾರ್ ಅವರಂತೆ ಹಿರಿಯರು ಈ ವೃತ್ತಿಯಲ್ಲಿ ಮತ್ತೆ ತೊಡಗಿಸಿಕೊಳ್ಳಲು ಹಾಗೂ ಹೊಸಬರು ಈ ವೃತ್ತಿಗೆ ಬರುವಂತೆ ಪ್ರೇರೇಪಿಸಲು  ಸಾಧ್ಯವಾಗಿದೆ. ಕೈ ಮಗ್ಗ ಬಟ್ಟೆಗಳನ್ನು ಖರೀದಿಸುವ ಮೂಲಕ ಇವರನ್ನು ನಾವು ಪ್ರೋತ್ಸಾಹಿಸಬೇಕು” ಎಂದರು.

ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಪ್ರಭಾಕರ ನೀರ್ ಮಾರ್ಗ, ಕೊಡೆತ್ತೂರು ಸಚ್ಚಿದಾನಂದ ಉಡುಪ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...