ಮಂಗಳೂರು | ಅಡ್ಡೂರು ಶಾಲೆಯಲ್ಲಿ ಆಂಗ್ಲ ತರಗತಿ ಉದ್ಘಾಟನೆ : ನೆಲಮಹಡಿ ನಿರ್ಮಾಣದ ಕೊಡುಗೆ ನೀಡಿದ ಉದ್ಯಮಿ ಝಕರಿಯಾ ಜೋಕಟ್ಟೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅಡ್ಡೂರಿನ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಯನ್ನು ಸೇರ್ಪಡೆಗೊಳಿಸುವ ಉದ್ಘಾಟನಾ ಸಮಾರಂಭ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಉಪಸ್ಥಿತಿಯಲ್ಲಿ ನೆರವೇರಿತು.

ಸಮಾರಂಭದಲ್ಲಿ ಮಾತನಾಡಿದ ಶಾಸಕ ಭರತ್ ಶೆಟ್ಟಿ, “ಊರಿನ ಅಭಿವೃದ್ಧಿ ವಿದ್ಯೆಗೆ ನೀಡುವ ಮಹತ್ವದ ಮೇಲೆ ನಿರ್ಧಾರವಾಗುತ್ತದೆ. ಅಭಿವೃದ್ಧಿಯ ಕೆಲಸದಲ್ಲಿ ರಾಜಕೀಯ ನಾವು ಮಾಡಲ್ಲ, ಸರ್ಕಾರಿ ಶಾಲೆಯ ಉದ್ಧಾರಕ್ಕೆ ನನ್ನ ಕೈಲಾದ ಸಹಾಯ ಸಹಕಾರ ಖಂಡಿತವಾಗಿಯೂ ಮಾಡುವೆ. ರಾಜಕೀಯವನ್ನು ಶಾಲೆಯ ವಠಾರದಿಂದ ಹೊರಗಿಟ್ಟು ಬಂದರೆ ಖಂಡಿತ ಶಾಲೆ ಅಭಿವೃದ್ಧಿಯಾಗುತ್ತದೆ. ಅಡ್ಡೂರು ಶಾಲೆಯ ಹಳೆ ವಿದ್ಯಾರ್ಥಿಗಳು, ಕೊಡುಗೈ ದಾನಿಗಳ ಕಾಳಜಿ, ಮುತುವರ್ಜಿ ಶ್ಲಾಘನೀಯ” ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಉದ್ಯಮಿ, ಶಿಕ್ಷಣ ಪೋಷಕ ಝಕಾರಿಯಾ ಜೋಕಟ್ಟೆ ಮಾತನಾಡಿ, “ನಾನು ಅಡ್ಡೂರಿನ ಅಳಿಯ, ನನ್ನ ಪತ್ನಿ, ಮಾವ, ಅತ್ತೆ ಎಲ್ಲರೂ ಅಡ್ಡೂರಿನವರು. ನನ್ನ ಪತ್ನಿಯ ಆಶಯದಂತೆ ನನ್ನ ಮಾವ ಮತ್ತು ಅತ್ತೆಯ ನೆನಪಿಗಾಗಿ ಸುಸಜ್ಜಿತವಾದ ಐದು ತರಗತಿಗಳ ನೆಲಮಹಡಿ ಕಟ್ಟಡದ ಸಂಪೂರ್ಣ ವೆಚ್ಚವನ್ನು ಭರಿಸಲು ನಿರ್ಧರಿಸಿದ್ದೇನೆ ಎಂದು ಘೋಷಿಸಿದರು. ವಿದ್ಯೆಗೆ ಪೋಷಣೆ ನೀಡುವ ಹಲವು ಕಾರ್ಯಕ್ರಮಗಳನ್ನು ನಾವು ಅತ್ಯಂತ ಸಂತೋಷದಿಂದ ಮಾಡುತ್ತಾ ಬಂದಿದ್ದೇವೆ ಇನ್ನೂ ಮುಂದುವರೆಸುತ್ತೇವೆ. ಅಡ್ಡೂರಿನ ಈ ಶಾಲೆಯಲ್ಲಿ ಉತ್ತಮ ಶಿಕ್ಷಕರ ನೇಮಕವಾಗಿ ಮಕ್ಕಳ ಭವಿಷ್ಯ ಉಜ್ವಲವಾಗಲಿ” ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಡ್ಡೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಅನಿವಾಸಿ ಉದ್ಯಮಿ ಹಿದಾಯತ್ ಅಡ್ಡೂರು ಮಾತನಾಡಿ, “1967ರಲ್ಲಿ ಕಡಂಬಾರು ಕುಟುಂಬದವರು ದಾನವಾಗಿ ನೀಡಿದ ಜಾಗದಲ್ಲಿ ಪ್ರಾರಂಭವಾದ ಅಡ್ಡೂರು ಸರ್ಕಾರಿ ಶಾಲೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಿಪಾಯ ನೀಡಿದೆ. ನಾನೂ ಈ ಶಾಲೆಯ ಹೆಮ್ಮೆಯ ವಿದ್ಯಾರ್ಥಿ. ನಮ್ಮ ನೆಚ್ಚಿನ ಸರ್ಕಾರಿ ಶಾಲೆ ಮುಚ್ಚಿ ಹೋಗದಂತೆ ನೋಡಿಕೊಂಡು, ಆಂಗ್ಲ ಮಾಧ್ಯಮ ಅನುಮತಿಗಾಗಿ ಜಾತಿ ಧರ್ಮ ಭೇದ-ಭಾವವಿಲ್ಲದೆ ಶ್ರಮವಹಿಸಿದ ಅಡ್ಡೂರಿನ ಎಲ್ಲಾ ನಾಗರಿಕರು, ಸ್ಥಳೀಯ ಸಂಘ ಸಂಸ್ಥೆಗಳು, ಅಡ್ಡೂರು ಸೆಂಟ್ರಲ್ ಕಮಿಟಿ, ನಮ್ಮ ಶಾಸಕರಾದ ಭರತ್ ಶೆಟ್ಟಿ, ಶಿಕ್ಷಣ ಸಚಿವ ಮಧುಬಂಗಾರಪ್ಪ ಎಲ್ಲರನ್ನೂ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ” ಎಂದರು.

ಅಲ್ಲದೇ, “ಆಂಗ್ಲ ಮಾಧ್ಯಮದ ಕಟ್ಟಡದ ನೆಲ ಮಹಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತ ಕೊಡುಗೈ ದಾನಿ ಝಕಾರಿಯ ಜೋಕಟ್ಟೆಯವರಿಗೆ ವಿಶೇಷವಾಗಿ ಧನ್ಯವಾದ ಹೇಳುತ್ತೇನೆ. ನಿಮ್ಮ ಈ ಕೊಡುಗೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿ ಆಗಲಿದೆ” ಎಂದರು.

WhatsApp Image 2025 06 24 at 2.55.06 PM

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಎಚ್ ಆರ್, ಬಡವರ ಮನೆಗೆ ಭಗವಂತ ಬಂದಂತೆ ಝಕಾರಿಯಾ ಜೋಕಟ್ಟೆಯವರು ಆಂಗ್ಲ ಮಾಧ್ಯಮ ಶಾಲೆಯ ನೆಲಮಹಡಿ ನಿರ್ಮಾಣದ ಜವಾಬ್ದಾರಿ ಹೊತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು. ಅಲ್ಲದೇ ಹಿದಾಯತ್ ಅಡ್ಡೂರು ಮತ್ತು ತಂಡದವರು ನಿರಂತರ, ನಿಸ್ವಾರ್ಥ ಪ್ರಯತ್ನದಿಂದ ಮಾತ್ರವೇ ಇಂದು ಈ ತರಗತಿ ಉದ್ಘಾಟನೆ ಸಾಧ್ಯವಾಗಿದೆ. ವಿದೇಶದಲ್ಲಿದ್ದುಕೊಂಡೇ ಶಿಕ್ಷಣ ಸಚಿವರಿಗೆ, ಸ್ಪೀಕರ್ ಅವರಿಗೆ, ಶಾಸಕರಿಗೆ ಕರೆ ಮಾಡಿ ಅನುಮತಿ ಪತ್ರ ಸಿಗುವವರೆಗೂ ನಿರಂತರ ಪ್ರಯತ್ನ ಮಾಡಿದ್ದಾರೆ. ಹಾಗೂ ಸ್ಥಳೀಯ ಯುವಕರ ಸಂಸ್ಥೆಗಳಂತೂ ಒಗ್ಗಟ್ಟಾಗಿ ಕೆಲಸ ಮಾಡಿದೆ. ಇಂತಹ ಉತ್ತಮ ಪೋಷಕರಿರುವ ಈ ಶಿಕ್ಷಣ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ” ಎಂದು ಶುಭ ಹಾರೈಸಿದರು.

ಇದನ್ನು ಓದಿದ್ದೀರಾ? ಸಾಬರ ಹೆಸ್ರಿಗೆ ಜಮೀನು ಮಾಡಿದ್ರೆ ನೇಣಿಗೆ ಹಾಕೋದು ಗ್ಯಾರಂಟಿ: ದ್ವೇಷ ಹರಡಿದ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ!

ಅಡ್ಡೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫರಾ ಎಂ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ ಇಬ್ರಾಹಿಂ, ಉದ್ಯಮಿ ಶೌಕತ್ ಅಲಿ, ಮಹಮ್ಮದ್ ಅಶ್ರಫ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲೀಲಾವತಿ, ಅಡ್ಡೂರು ಸೆಂಟ್ರಲ್ ಕಮಿಟಿಯ ಅಬ್ದುಲ್ ರಝಾಕ್, ಬಾಲಕೃಷ್ಣ ರಾವ್ ನೂಯಿ, ಶಿಕ್ಷಕಿ ಅಸುರ ಸ್ವಾಗತಿಸಿದರು, ಮುಖ್ಯೋಪಾಧ್ಯಾಯಿ ದೇವಕಿ ಧನ್ಯವಾದ ಸಲ್ಲಿಸಿದರು, ಶಿಕ್ಷಕಿ ನಮೃತಾ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 06 24 at 2.55.06 PM 1
WhatsApp Image 2025 06 24 at 2.55.04 PM 1
WhatsApp Image 2025 06 24 at 2.55.05 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...