ಮಂಗಳೂರು | ಎಂ ಫ್ರೆಂಡ್ಸ್‌ನಿಂದ ಕರುಣೆಯ ಕೆಲಸ: ಅರುಣ್ ಓಸ್ವಾಲ್

Date:

ಲಯನ್ಸ್ ಪ್ರಾಯೋಜಿತ ಎಂ ಫ್ರೆಂಡ್ಸ್ ‘ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್’ ಉದ್ಘಾಟನೆ

ಕರಾವಳಿಯಲ್ಲಿ ಸಮಾಜ ಸೇವೆಗೆ ಗುರುತಿಸಿಕೊಂಡಿಸಿರುವ ಎಂ ಫ್ರೆಂಡ್ಸ್ ಸಂಸ್ಥೆ

ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಶನಲ್ ಫೌಂಡೇಶನ್ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ `ಮೀಲ್ಸ್ ಆನ್ ವ್ಹೀಲ್ಸ್’ ಫುಡ್ ಟ್ರಕ್ ಮತ್ತು ಸುಸಜ್ಜಿತ ಕಾರುಣ್ಯ ಅಡುಗೆ ಮನೆ ಉದ್ಘಾಟನೆ ಶನಿವಾರ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಪ್ಪು ವೆಲೆನ್ಸಿಯಾದ ಹೋಲಿ ರೊಸಾರಿಯೊ ಕಾನ್ವೆಂಟ್ ರಸ್ತೆಯಲ್ಲಿ ನಿರ್ಮಿಸಿದ ಅಡುಗೆ ಮನೆ, ಸ್ವಯಂಚಾಲಿತ ಚಪಾತಿ ಯಂತ್ರ, ಇಡ್ಲಿ ಸ್ಟೀಮರ್ ಮತ್ತಿತರ ಪರಿಕರಗಳನ್ನು ಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಫೌಂಡೇಶನ್‌ನ ಮಾಜಿ ಟ್ರಸ್ಟಿ, ಪ್ರಸಿದ್ಧ ಮಹಿಳಾ ಉದ್ಯಮಿ ಅರುಣಾ ಓಸ್ವಾಲ್ ಉದ್ಘಾಟಿಸಿದರು. ಬಳಿಕ ವೆಲೆನ್ಸಿಯಾದ ಮರಿಯ ಜಯಂತಿ ಚರ್ಚ್ ಹಾಲ್ ಬಳಿ `ಮೀಲ್ಸ್ ಆನ್ ವ್ಹೀಲ್ಸ್’ ಫುಡ್ ಟ್ರಕ್‌ಗೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಚಾಲನೆ ನೀಡಿದರು.

“ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ಸೇವಾ ಕಾರ್ಯ ಮಾಡುತ್ತಿದ್ದರೆ, ಎಂ ಫ್ರೆಂಡ್ಸ್ ಕರುಣೆ ಮತ್ತು ದಯೆಯ ಕೆಲಸ ಮಾಡುತ್ತಿದೆ. ಇದು ನೆರವು ನೀಡಲು ಪ್ರೇರಣೆ ನೀಡಿದೆ. ಸರಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಯೋಜನೆ ದೇಶಕ್ಕೆ ಮಾದರಿ. ನಾವು ಸತ್ತ ನಂತರ ಸ್ವರ್ಗ ಪಡೆಯುವ ಬದಲು ಭೂಮಿಯಲ್ಲೇ ಸ್ವರ್ಗ ನಿರ್ಮಿಸುವ ಕೆಲಸ ಎಂಫ್ರೆಂಡ್ಸ್ ಮಾಡುತ್ತಿದೆ” ಎಂದು `ಐರನ್ ಲೇಡಿ’ ಖ್ಯಾತಿಯ ಅರುಣಾ ಓಸ್ವಾಲ್ ಹೇಳಿದರು.

food on wheels 3

ಮೇಯರ್ ಸುಧೀರ್ ಶೆಟ್ಟಿ ಮಾತನಾಡಿ, “ವಿಶ್ವದ 84 ಲಕ್ಷ ಜೀವರಾಶಿಗಳಲ್ಲಿ ಮನುಷ್ಯನ ಜನನ- ಮರಣದ ನಡುವಿನ ಜೀವನ ಶ್ರೇಷ್ಠವಾದುದು. ಯಾವುದೇ ಜೀವಿ ಹಸಿವಿನಿಂದ ಸಾಯುವುದಿಲ್ಲ, ಮನುಷ್ಯ ಎಷ್ಟೇ ದುಡಿದರೂ ಕೆಲವೊಮ್ಮೆ ಹಸಿವು ಕಾಡುತ್ತದೆ. ನಾವು ಶ್ರೀಮಂತರನ್ನು ನೋಡುವ ಬದಲು ಸಿಂಹದಂತೆ ಬಂದ ಹೆಜ್ಜೆ ತಿರುಗಿ ನೋಡಬೇಕು. ಜಾತಿ, ಧರ್ಮದ ಭೇದವಿಲ್ಲದೆ ಏಳು ವರ್ಷಗಳಿಂದ ವೆನ್ಲಾಕ್‌ನಲ್ಲಿ ಆಹಾರ ಕೊಡುವ ಎಂಫ್ರೆಂಡ್ಸ್ ಸೇವೆ ಮಾನವೀಯ ಅಂತಃಕರಣದ ಭಾಗ. ನಮ್ಮ ಆತ್ಮ ಪರಮಾತ್ಮನಲ್ಲಿ ಲೀನವಾದರೂ, ಮಾಡಿದ ಪುಣ್ಯದ ಕೆಲಸ ಹಾಗೆಯೇ ಉಳಿದು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ ಎಂದರು.

ಎಂ ಫ್ರೆಂಡ್ಸ್ ಟ್ರಸ್ಟ್ ಚೇರ್‌ಮೆನ್ ಝಕರಿಯಾ ಜೋಕಟ್ಟೆ ಅಧ್ಯಕ್ಷತೆ ವಹಿಸಿ, “ತಾನು ತಳಮಟ್ಟದಿಂದ ಬಹಳಷ್ಟು ಪರಿಶ್ರಮದಿಂದ ಈ ಹಂತಕ್ಕೆ ಬಂದಿದ್ದೇನೆ. ದಾನ, ಧರ್ಮಗಳು ಎಲ್ಲೂ ಹೋಗುವುದಿಲ್ಲ. ಭಾರತ ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದು, ನಾವೆಲ್ಲ ಸೇರಿ ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದರೆ, ದೇಶ ಸೂಪರ್ ಪವರ್ ಆಗಲಿದೆ” ಎಂದರು.

ಯೋಜನೆ ಅನುಷ್ಠಾನಕ್ಕೆ ಕೊಡುಗೆ ನೀಡಿದ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ವಸಂತ ಕುಮಾರ್ ಶೆಟ್ಟಿ ಮತ್ತು ಅತಿಥಿ ಅರುಣಾ ಓಸ್ವಾಲ್ ಅವರನ್ನು ಸನ್ಮಾನಿಸಲಾಯಿತು.

WhatsApp Image 2024 08 03 at 1.14.28 AM 2

ಎಲ್‌ಸಿಐಎಫ್ ವಲಯ ನಾಯಕ ವಂಶೀಧರ್ ಬಾಬು, ಲಯನ್ಸ್ ಜಿಲ್ಲಾ ಗವರ್ನರ್ ಬಿ.ಎಂ.ಭಾರತಿ, ಮಾಜಿ ಗವರ್ನರ್ ವಸಂತ ಕುಮಾರ್ ಶೆಟ್ಟಿ, ಮಲ್ಟಿಪಲ್ ಡಿಸ್ಟ್ರಿಕ್ಟ್ ಗವರ್ನರ್ ಡಾ.ಕೃಷ್ಣೇಗೌಡ, ಎಲ್‌ಸಿಐಎಫ್ ಕೋ-ಆರ್ಡಿನೇಟರ್ ಸಂಜೀತ್ ಶೆಟ್ಟಿ, ಉದ್ಯಮಿ ರೊನಾಲ್ಡ್ ಮಾರ್ಟಿಸ್ ದುಬೈ ಶುಭ ಹಾರೈಸಿದರು.

food on wheels 2

ಕಾರುಣ್ಯ ಯೋಜನೆಯ ಮುಖ್ಯಸ್ಥ ಮೊಹಮ್ಮದ್ ಹನೀಫ್ ಗೋಳ್ತಮಜಲು, ಎಂಫ್ರೆಂಡ್ಸ್ ಕೋಶಾಧಿಕಾರಿ ಝುಬೇರ್ ಬುಳೆರಿಕಟ್ಟೆ, ಸದಸ್ಯರಾದ ಅಬ್ದುಲ್ಲಾ ಮೋನು ಕತಾರ್, ತುಫೈಲ್ ಅಹ್ಮದ್ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ರಾಯಚೂರು | ಪೆನ್ನು ಕದ್ದ ಆರೋಪ; ಬಾಲಕನನ್ನು ಕೋಣೆಯಲ್ಲಿ ಕೂಡಿಟ್ಟು ಚಿತ್ರಹಿಂಸೆ ನೀಡಿದ ರಾಮಕೃಷ್ಣ ಆಶ್ರಮದ ಗುರೂಜಿ!

ಎಂಫ್ರೆಂಡ್ಸ್‌ ಕಾರ್ಯಾಧ್ಯಕ್ಷ ಸುಜಾಹ್ ಮೊಹಮ್ಮದ್ ಸ್ವಾಗತಿಸಿದರು. ಕಂಪ್ಯೂಟರ್ ಆನ್ ವ್ಹೀಲ್ ಮುಖ್ಯಸ್ಥ ರಶೀದ್ ವಿಟ್ಲ ಮತ್ತು ಸದಸ್ಯ ಬಿ.ಎ.ಮೊಹಮ್ಮದಾಲಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು.

food on wheels 4
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...