ಮಂಗಳೂರು | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ;‌ ಗುರುಪುರ ನಾಡ ಕಚೇರಿ ಎದುರು ಸಂತ್ರಸ್ತರ ಪ್ರತಿಭಟನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಪ್ಪೆಪದವು ಗ್ರಾಮ ಪಂಚಾಯಿತಿ ವ್ಯಾಪ್ತಿಯ 97 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ಏಳು ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ, ನಿವೇಶನ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

2018ರಲ್ಲಿ ಶಾಸಕ ಭರತ್ ಶೆಟ್ಡಿ ನೇತೃತ್ವದಲ್ಲಿ ತರಾತುರಿಯುಲ್ಲಿ 97 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ನಿವೇಶನಗಳನ್ನು ಗುರುತು ಮಾಡಲಾಗಿತ್ತು. ಆ ತರುವಾಯ ನಿವೇಶನ ಸ್ವಾಧೀನ ನೀಡದೆ ಬಡ ನಿವೇಶನರಹಿತರನ್ನು ಸತಾಯಿಸಲಾಗುತ್ತಿತ್ತು. ಕಳೆದ ಜನವರಿಯಲ್ಲಿ ಸಂತ್ರಸ್ತರು ಹೋರಾಟ ಸಮಿತಿ ರಚಿಸಿಕೊಂಡು ಜಮೀನು ಸ್ವಾಧೀನ ನೀಡುವಂತೆ ಹೋರಾಟ ಆರಂಭಿಸಿದ್ದರು. ಈ ಕುರಿತು ಜನವರಿಯಲ್ಲಿ ಕುಪ್ಪೆಪದವು ಪಂಚಾಯಿತಿ ಎದುರು ನಡೆದ ಧರಣಿಯಲ್ಲಿ ಮನವಿ ಸ್ವೀಕರಿಸಲು ಆಗಮಿಸಿದ ಡೆಪ್ಯೂಟಿ ತಹಶೀಲ್ದಾರ್, ಫೆಬ್ರವರಿ ಕೊನೆಯಲ್ಲಿ ನಿವೇಶನ ಸ್ವಾಧೀನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ತಾಲೂಕು ಆಡಳಿತ ಮಾತು ತಪ್ಪಿದ್ದರಿಂದ ಗುರುಪುರ ನಾಡ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ “ನಿವೇಶನ ಸ್ವಾಧೀನ ನೀಡಲು ತಾಂತ್ರಿಕ ಸಮಸ್ಯೆಗಳು ಇವೆ” ಎಂದು ಹೇಳಿದ್ದರಿಂದ ಸಂತ್ರಸ್ತರನ್ನು ಸಿಟ್ಟಿಗೆಬ್ಬಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಹಕ್ಕುಪತ್ರ ಪಡೆದ ಸಂತ್ರಸ್ತರು

“ಹಕ್ಕುಪತ್ರ ಪಡೆದಿರುವ ಸಂತ್ರಸ್ತ ನಿವೇಶನ ರಹಿತರು ಒಗ್ಗೂಡಿ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ. ಜತೆಗೆ ಗುರುತಿಸಿರುವ ಜಮೀನನ್ನು ನೇರ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಬಡ ನಿವೇಶನ ರಹಿತರನ್ನು ಕಡೆಗಣಿಸಿರುವ ಶಾಸಕ ಭರತ್ ಶೆಟ್ಟಿ, ಈ ಕುರಿತು ಧ್ವನಿ ಎತ್ತದ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಯ ನಡೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಹಿರೀಕಡಲೂರು ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆ

ಪ್ರತಿಭಟನಾ ಪ್ರದರ್ಶನವನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಿದರು. ಕಾರ್ಮಿಕ ಮುಂದಾಳುಗಳಾದ ಸದಾಶಿವ ದಾಸ್, ನೋಣಯ್ಯ ಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಿವೇಶನ ರಹಿತರ ಹೋರಾಟ ಸಮಿತಿಯ ಸಂಚಾಲಕಿ ವಸಂತಿ ಕುಪ್ಪೆಪದವು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ವಲಯ ಅಧ್ಯಕ್ಷ ಬಾಬು ಸಾಲ್ಯಾನ್, ಗುರುಪುರ ವಲಯ ಬೀಡಿ ಕಾರ್ಮಿಕರ ಸಂಘದ ಮುಖಂಡರಾದ ಹೊನ್ನಯ್ಯ ಅಮೀನ್, ವಾರಿಜ ಕುಪ್ಪೆಪದವು, ಹೋರಾಟ ಸಮಿತಿಯ ಸದಾಶಿವ ಕಟ್ಟೆಮಾರ್, ಜಮೀಲಾ ಮಾಣಿಪಳ್ಳ, ಮಜೀದ್ ಕಲ್ಲಾಡಿ, ಕುಸುಮಾ ಕುಪ್ಪೆಪದವು, ರಜಿಯಾ ಮಾಣಿಪಳ್ಳ, ಬಾಲಕೃಷ್ಣ ಶೆಟ್ಟಿ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...