ಮಂಗಳೂರು | ಜ.16ರಂದು ‘ಪೇರೆಂಟಿಂಗ್’ ಬಗ್ಗೆ ಉಚಿತ ಕಾರ್ಯಾಗಾರ

Date:

ಜನವರಿ 16(ಗುರುವಾರ)ದಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ ಪ್ರದೇಶದಲ್ಲಿರುವ ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಪೋಷಕರಿಗೆ ‘ಪೇರೆಂಟಿಂಗ್‌’ನ ವಿಷಯದಲ್ಲಿ ತರಬೇತಿ ನೀಡಲು ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಂದು ಸಂಜೆ 6:30ಕ್ಕೆ ಶಾಲೆಯ ಬರಾಕಾ ಸಭಾಂಗಣದಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಪೇರೆಂಟಿಂಗ್‌ಗೆ ಸಂಬಂಧಿಸಿದ ಮೂರು ಪ್ರಮುಖ ಅಂಶಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಬರಕ ಇಂಟರ್ ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲ, ಅಂತಾರಾಷ್ಟ್ರೀಯ ಭಾಷಣಕಾರ ಶರ್ಫುದ್ದೀನ್ ಬಿ.ಎಸ್ ಅವರು ‘ನಿಮ್ಮ ಮಗುವನ್ನು ಶೈಕ್ಷಣಿಕವಾಗಿ ಉತ್ಕೃಷ್ಟರಾಗಲು ಹೇಗೆ ಪ್ರೇರೇಪಿಸುವುದು’ ಎಂಬ ಕುರಿತು ಮಾತನಾಡಲಿದ್ದಾರೆ. ಮತ್ತೊಬ್ಬ ಪ್ರಸಿದ್ಧ ಪ್ರೇರಕ ಭಾಷಣಕಾರ ಮತ್ತು ಹೋಪ್ ಫೌಂಡೇಶನ್‌ನ ಅಧ್ಯಕ್ಷ ಸೈಫ್ ಸುಲ್ತಾನ್ ‘ಆಧುನಿಕ ಯುಗದಲ್ಲಿ ಮಕ್ಕಳ ಪೋಷಣೆ ಹೇಗೆ?’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜಿನ ಇಸ್ಲಾಮಿಕ್ ವಿಭಾಗದ ಪ್ರಾಂಶುಪಾಲ ಮತ್ತು ಖತೀಬರಾದ ಮೊಹಮ್ಮದ್ ಹನೀಫ್ ಅವರು ‘ಇಸ್ಲಾಮಿಕ್ ಮೌಲ್ಯಗಳನ್ನು ಅನುಸರಿಸಲು ನಿಮ್ಮ ಮಕ್ಕಳಿಗೆ ತರಬೇತಿ ನೀಡಲು ಪೋಷಕರಲ್ಲಿ ಇರಬೇಕಾದ ಕೌಶಲ್ಯ ‘ ಎಂಬ ಕುರಿತು ಮಾತನಾಡಲಿದ್ದಾರೆ. ತಜ್ಞರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಒಳನೋಟವನ್ನು ಪಡೆಯಲು ಕೊನೆಯಲ್ಲಿ ಪ್ರಶ್ನೋತ್ತರದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಸುವಿನ ಹರಿದ ಕೆಚ್ಚಲಿನಿಂದ ದ್ವೇಷದ ವಿಷ ಹಿಂಡಲು ಹೊರಟವರು…

ನೋಂದಣಿಯ ಆಧಾರದ ಮೇಲೆ ತಂದೆ ತಾಯಿಗಳಿಬ್ಬರೂ ಇದರಲ್ಲಿ ಹಾಜರಾಗಬಹುದು. ತಜ್ಞರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಒಳನೋಟವನ್ನು ಪಡೆಯಲು ಕೊನೆಯಲ್ಲಿ ಪ್ರಶ್ನೋತ್ತರದ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ತಮ್ಮ ಹಾಜರಿಯನ್ನು ಖಚಿತಪಡಿಸಿಕೊಳ್ಳಲು ನೀಡಲಾಗಿರುವ ಫಾರ್ಮ್ ಅನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಲು ಪ್ರಕಟನೆ ತಿಳಿಸಿದೆ.

ಗೂಗಲ್ ಫಾರ್ಮ್ ಲಿಂಕ್ ಇಲ್ಲಿದೆ.
https://forms.gle/mKxsr4A1UGrpo7DJ9

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...