ಮಂಗಳೂರು | ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ; ಪಾಲಿಕೆ, ಜಿಲ್ಲಾಡಳಿತಕ್ಕಿಲ್ಲ ಕಾಳಜಿ!

Date:

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ಸಮೀಪದ ಪಚ್ಚನಾಡಿಯ ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ ಉಲ್ಬಣವಾಗುತ್ತಿದ್ದು, ಉಸಿರಾಟಕ್ಕೂ ಕಷ್ಟಪಡುತ್ತಿದ್ದಾರೆ. ಆದರೆ ಮಂಗಳೂರು ಪಾಲಿಕೆ, ಜಿಲ್ಲಾಡಳಿತಕ್ಕೆ ವಿದ್ಯಾರ್ಥಿಗಳ ಕುರಿತು ಯಾವುದೇ ಕಾಳಜಿ ಇಲ್ಲ ಎಂದು ಎನ್‌ಎಸ್‌ಯುಐ ಮಂಗಳೂರು ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ಆರೋಪಿಸಿದರು.

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದು, ಕಾಲೇಜುಗಳು ಇರುವ ಜಾಗದಲ್ಲಿ ಕಸ ವಿಲೇವಾರಿ‌ ಘಟಕ ನಿರ್ಮಾಣವಾಗಿದ್ದು, ಇದರಿಂದ ಬರುವ ದುರ್ನಾತದಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಉಸಿರಾಟಕ್ಕೂ ಕಷ್ಟಪಡುತ್ತಿದ್ದಾರೆ. ಆದರೂ ಮಹಾನಗರ ಪಾಲಿಕೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

“ಬುದ್ದಿವಂತರ ನಾಡು, ಶಿಕ್ಷಿತರ ಜಿಲ್ಲೆ ಎಂದು ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡದ ಮಂಗಳೂರು ನಗರದಲ್ಲಿ ಹಲವಾರು ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳು ಹಾಗೂ ಕಾಲೇಜುಗಳಿವೆ. ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳೂ ಮಂಗಳೂರಿನಲ್ಲಿದ್ದಾರೆ. ಈ ವಿದ್ಯಾರ್ಥಿಗಳ ಜೀವನದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಸರ್ಕಾರ ಚೆಲ್ಲಾಟವಾಡುತ್ತಿದೆ. ಅಧಿಕಾರಿಗಳ ನಿರ್ಲ್ಯಕ್ಷ್ಯ ಹಾಗೂ ದುರಾಡಳಿತದಿಂದಾಗಿ ಯುವಜನಸಮೂಹ ಸಂಕಷ್ಟದಲ್ಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಗಳೂರು ನಗರವು ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿ. ಹಾಗಾಗಿ ಪ್ರತಿ ವರ್ಷ ದೇಶ ವಿದೇಶಗಳಿಂದ ಸಾವಿರಾರು ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸುತ್ತಾರೆ. ಆದರೆ ವಿದ್ಯಾರ್ಥಿಗಳ ಆರೋಗ್ಯದ ವಿಚಾರದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರ ನಿರ್ಲಕ್ಷ್ಯ ತಾಳಿದೆ” ಎಂದು ಆರೋಪಿಸಿದರು.

“ಈ ಪ್ರದೇಶದ ಸುತ್ತಮುತ್ತ ಅನೇಕ ಶಾಲಾ ಕಾಲೇಜುಗಳಿವೆ. ಎಸ್‌ಡಿಎಂ ಮಂಗಳಜ್ಯೋತಿ ಐಟಿಐ ಕಾಲೇಜು, ಎಸ್‌ಡಿಎಂ ಮಂಗಳಜ್ಯೋತಿ ಇಂಟಿಗ್ರೇಟೆಡ್ ಸ್ಕೂಲ್, ಕರಾವಳಿ ಕಾಲೇಜ್ ಆಫ್ ಫಾರ್ಮಸಿ, ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು, ಸೇಂಟ್ ರೇಮಂಡ್ಸ್ ಶಾಲೆ, ಸೇಂಟ್ ರೇಮಂಡ್ಸ್ ಪಿಯು ಕಾಲೇಜು, ಸೇಂಟ್ ರೇಮಂಡ್ಸ್ ಕಾಲೇಜು ಸಹಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನು ವಿದ್ಯಾರ್ಥಿ ಸಮೂಹ ನೆಚ್ಚಿಕೊಂಡಿದೆ. ಆದರೆ, ಈ ವಿದ್ಯಾರ್ಥಿಗಳು ನಿತ್ಯ 8 ಗಂಟೆಗೂ ಹೆಚ್ಚು ಹೊತ್ತು ತರಗತಿಯಲ್ಲಿ ಕುಳಿತು ಕಸ ವಿಲೇವಾರಿ ಘಟಕದ ದುರ್ವಾಸನೆಯಿಂದ ಪರಿತಪಿಸುವಂತಾಗಿದೆ. ಹಾನಿಕಾರಕ ಅನಿಲಗಳು, ಮೈಕ್ರೋ ಪ್ಲಾಸ್ಟಿಕ್ ಮತ್ತು ಧೂಳು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೊಡೆತ ನೀಡುತ್ತಿದೆ” ಎಂದರು.

“ಅನೇಕ ವಿದ್ಯಾರ್ಥಿಗಳು ಉಸಿರಾಟದ ತೊಂದರೆ ಹಾಗೂ ಬಗೆಬಗೆಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ‌. ವಿದ್ಯಾರ್ಥಿಗಳಲ್ಲಿ ಎದೆ ನೋವು ಮತ್ತು ಇತರ ಹಲವಾರು ಸಮಸ್ಯೆಗಳು ಕಂಡುಬರುತ್ತಿವೆ. ಇದೀಗ ಕಳೆದ ಕೆಲವು ದಿನಗಳಲ್ಲಿ ಹಲವರು ಕಾಯಿಲೆ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಕಲುಷಿತ ವಾತಾವರಣವೇ ಕಾರಣ ಎಂಬುದು ವೈದ್ಯರ ಹೇಳಿಕೆ. ಆದರೆ ಅಧಿಕಾರಿಗಳು ಮಾತ್ರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವುದು ನಾಡಿನ ದೌರ್ಬಾಗ್ಯವಲ್ಲದೆ ಬೇರೇನೂ ಅಲ್ಲ” ಎಂದರು.

“ಈ ಕಸವಿಲೇವಾರಿ ಘಟಕವನ್ನು ಜನವಸತಿ ಪ್ರದೇಶದಿಂದ ನಗರದ ಹೊರಭಾಗಕ್ಜೆ ಸ್ಥಳಾಂತರಿಸುವಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತ ವಿಫಲವಾಗಿದೆ. ಅದರಿಂದಾಗಿಯೇ ಈ ಪ್ರದೇಶದ ನಿವಾಸಿಗಳು ನರಕಯಾತನೆ ಅನುಭವಿಸುವಂತಾಗಿದೆ. ಇದೀಗ ಹವಾಮಾನದ ವೈಪರೀತ್ಯದಿಂದಾಗಿ ಬಿಸಿಲಿನ ಝಳ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಂಭವವೂ ಇದೆ. ಹಾನಿಕಾರಕ ರಾಸಾಯನಿಕ ಅನಿಲಗಳ ಈ ಹೊರಸೂಸುವಿಕೆಯು ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಬಲ್ಲದು. ಅದರಲ್ಲೂ ಸಮೀಪದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂದು ಹೇಳಿದರು.

“ಬೇಸಿಗೆಯಲ್ಲಿ ಮಾತ್ರವಲ್ಲ, ಮಳೆ ಬಂದಾಗಲೂ ಅವಾಂತರ ಸೃಷ್ಟಿಯಾಗುತ್ತದೆ. ತ್ಯಾಜ್ಯ ಮತ್ತು ಕಸದ ಕೊಳಕು ವಾಸನೆ ಅಸಹನೀಯವಾಗಿದೆ. ಈ ಸಮಸ್ಯೆಯಿಂದಾಗಿ ಅಂತರ್ಜಲವೂ ಕೆಟ್ಟುಹೋಗುತ್ತಿದೆ. ಸುತ್ತಮುತ್ತ ಕುಡಿಯಲು ಯೋಗ್ಯ ನೀರು ಸಿಗದ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಈ ದುಃಸ್ಥಿತಿಯಿಂದ ಬೇಸತ್ತಿರುವ ಸಾರ್ವಜನಿಕರು ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.‌ ಉಸಿರಾಟಕ್ಕೂ ಕಷ್ಟಪಡುತ್ತಿರುವ ವಿದ್ಯಾರ್ಥಿಗಳ ಬದುಕಿನ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆಯೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

“ಇದು ಜನರ ಮೂಲಭೂತ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಮತ್ತು ಜನರ ಬಗ್ಗೆ ನಿಜವಾಗಿಯೂ ಸರ್ಕಾರಕ್ಕೆ ಕಾಳಜಿ ಇದ್ದರೆ, ಒಂದು ಸಮಿತಿಯನ್ನು ರಚಿಸಿ, ಕಸ ವಿಲೇವಾರಿ ಘಟಕವನ್ನು ನಗರದಿಂದ ಕನಿಷ್ಟ 5 ಕಿಮೀ ಹೊರಗೆ ಸ್ಥಳಾಂತರಿಸಲಿ. ಯಾವುದೇ ಶಿಕ್ಷಣ ಸಂಸ್ಥೆ ಇಲ್ಲದ ಮತ್ತು ವಸತಿ ಇಲ್ಲದ ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.

“ಪ್ರಸ್ತುತ ಪರಿಸ್ಥಿತಿ ಬಗ್ಗೆ ವಿದ್ಯಾರ್ಥಿ ಸಂಘಟನೆಗಳೂ ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ಸಂಘದ ಮುಖಂಡರು, ರಾಜಕಾರಣಿಗಳು ತಮ್ಮ ಚುನಾವಣೆ ನಂತರ ಮರೆತುಬಿಡುತ್ತಾರೆ. ಆದರೆ ವಿದ್ಯಾರ್ಥಿ ಶಕ್ತಿಯು ನ್ಯಾಯಕ್ಕಾಗಿ ಹೋರಾಡುವ ಸಾಮರ್ಥ್ಯವನ್ನು ಮತ್ತು ಸರ್ಕಾರ ಚುನಾಯಿತ ಪ್ರತಿನಿಧಿಗಳನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ತಿಳಿದುಕೊಳ್ಳಲಿ” ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...