ಮಂಗಳೂರು | ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ

Date:

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನು 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಈ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು.

ಕಟ್ಟಡಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಯಿ ಇಲ್ಲದಂತೆ ಅತ್ಯಂತ ಸುಸಜ್ಜಿತವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಸ್ಪೆಷಾಲಿಟಿ ಬ್ಲಾಕ್ ಅನ್ನ ನಿರ್ಮಿಸಲಾಗಿದೆ” ಎಂದರು.‌

“ಜಿಲ್ಲಾಸ್ಪತ್ರೆಯಾಗಿ ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಮಾದರಿಯಾಗಿದೆ. ಖಾಸಗಿ ಸಂಸ್ಥೆ ಕೆಎಂಸಿ ಯವರೊಂದಿಗೆ ಒಪ್ಪಂದದ ಮೂಲಕ ವೆನ್ಲಾಕ್ ಆಸ್ಪತ್ರೆ ಹಲವು ವರ್ಷಗಳಿಂದ ಸೂಪರ್ ಸ್ಪೆಷಾಲಿಟಿ ಆರೋಗ್ಯ ಚಿಕಿತ್ಸೆಗಳನ್ನ ಒದಗಿಸಿತ್ತಾ ಬಂದಿದೆ. ಇದೀಗ 250 ಹಾಸಿಗೆಯ ನೂತನ ಸರ್ಜಿಕಲ್ ಬ್ಲಾಕ್ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನೆರವಾಗಲಿದೆ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
wenclk4

“ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಅಳವಡಿಸಲಾಗಿದೆ. 17 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಕೂಡಾ ಆಸ್ಪತ್ರೆಗೆ ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು” ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ವೆನ್ಲಾಕ್ ಆಸ್ಪತ್ರೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಅಲ್ಲ, ಸುತ್ತಮುತ್ತಲಿನ ಕರಾವಳಿ‌ ಹಾಗೂ ಮಲೆನಾಡು ಭಾಗದ ಹತ್ತಾರು ಜಿಲ್ಲೆಗಳ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಾ ಬಂದಿದೆ. ಆರೋಗ್ಯ ಸಚಿವನಾಗಿ ವೆನ್ಲಾಕ್ ಆಸ್ಪತ್ರೆಗೆ ಅಗತ್ಯ ಎಲ್ಲ ನೆರವು ನೀಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.‌

ಆಸ್ಪತ್ರೆಯ ನೂತನ ಸರ್ಜಿಕಲ್ ಬ್ಲಾಕ್ ಒಟ್ಟು 7 ಅಂತಸ್ತುಗಳ ಕಟ್ಟಡವನ್ನು ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್‌ಲ್ಯಾಬ್ ಮತ್ತು ರೇಡಿಯೋಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರಚಿಕಿತ್ಸಾ ಕೊಠಡಿಗಳಿವೆ.

ಒಂದನೇ ಮಹಡಿಯಲ್ಲಿ 60 ಹಾಸಿಗೆಗಳ ಇ.ಎನ್.ಟಿ. ಮತ್ತು ಯುರಾಲಜಿ ಶಸ್ತ್ರಚಿಕಿತ್ಸಾ ವಾರ್ಡ್‌ಗಳು ಮತ್ತು ಎರಡನೇ ಮಹಡಿಯಲ್ಲಿ 70 ಹಾಸಿಗೆಗಳ ನ್ಯೂರೊ ಸರ್ಜರಿ, ಕಾರ್ಡಿಯೋಥೈರಾಸಿಕ್ ಸರ್ಜರಿ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ವಾರ್ಡ್‌ಗಳಿವೆ. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ, ಪ್ರತಿ ಅಂತಸ್ತಿನಲ್ಲಿ 5 ರಂತೆ ಒಟ್ಟು 10 ಸುಸಜ್ಜಿತವಾದ ಶಸ್ತ್ರಚಿಕಿತ್ಸಾ ಕೊಠಡಿಗಳಿವೆ ಮತ್ತು ತಲಾ 10 ಹಾಸಿಗೆಗಳ ಶಸ್ತ್ರಚಿಕಿತ್ಸಾ ಪೂರ್ವ ಮತ್ತು 15 ಹಾಸಿಗೆಗಳ ಶಸ್ತ್ರಚಿಕಿತ್ಸಾ ನಂತರದ ವಾರ್ಡ್ ಲಭ್ಯವಿದೆ.

wenclok2

ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಕಟ್ಟಡಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನಕ್ಕೆ ಅನುಗುಣವಾಗಿ ಯಂತ್ರೋಪಕರಣಗಳ ಅಗತ್ಯತೆಯನ್ನು ಮನಗಂಡು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮುತುವರ್ಜಿಯಿಂದ ಸ್ಮಾರ್ಟ್‌ ಸಿಟಿ ವತಿಯಿಂದ 7 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಒದಗಿಸಲಾಗಿದ್ದು, ಸರಕಾರದ ವತಿಯಿಂದ 2 ಕೋಟಿ ಮತ್ತು ಕೆ.ಎಂ.ಸಿ. ವತಿಯಿಂದ 4 ಕೋಟಿ ರೂಪಾಯಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಐವನ್ ಡಿಸೋಜಾ, ಶಾಹುಲ್ ಹಮೀದ್, ಮಮತಾ ಗಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

wenlcok
wenlock1
wenlcok3
wenclok4
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...