ಮಂಗಳೂರು | ಡಿಎಲ್‌ಇಡಿ, ಡಿಪಿಇಡಿ ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ

Date:

2025-26ನೇ ಸಾಲಿನಲ್ಲಿ ಡಿಎಲ್‌ಇಡಿ(ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಮತ್ತು ಡಿಪಿಇಡಿ(ದೈಹಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.inನಲ್ಲಿರುವ ದಾಖಲಾತಿ ಅರ್ಜಿಯನ್ನು ಮುದ್ರಿಸಿಕೊಂಡು ಭರ್ತಿ ಮಾಡಿ ಅಥವಾ ಡಯಟ್ ವ್ಯವಸ್ಥಾಪಕ ಕೇಂದ್ರವನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ಡಯಟ್‍ಗಳಿಗೆ ಸಲ್ಲಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಎಲ್‌ಇಡಿ ಕೋರ್ಸ್: ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ 45% ಮತ್ತು ಇತರೆ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 50% ಅಂಕಗಳನ್ನು ಪಡೆದಿರಬೇಕು.

ಡಿಪಿಇಡಿ ಕೋರ್ಸ್: ಡಿಪಿಇಡಿ ಕೋರ್ಸಿಗೆ ಸೇರುವ ಎಲ್ಲ ಅಭ್ಯರ್ಥಿಗಳು ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳನ್ನು ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ರಾಜ್ಯ ಅಥವಾ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಪಾಲ್ಗೊಂಡಿದ್ದು ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಟ 45% ಅಂಕಗಳನ್ನು ಪಡೆದಿರಬೇಕು.

ದಾಖಲಾತಿ ಅರ್ಜಿಗಳನ್ನು ಸಲ್ಲಿಸಲು‌, ಬ್ಯಾಂಕ್‍ಗೆ ನಿಗಧಿತ ಶುಲ್ಕ ಪಾವತಿಸಲು ಜೂನ್ 5 ಕೊನೆಯ ದಿನ.

ಅರ್ಜಿಯನ್ನು ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಮೀಸಲಾತಿ ವಿವರಗಳು ಹಾಗೂ ಇತರೆ ಸೂಚನೆಗಳನ್ನು ವೆಬ್‍ಸೈಟ್ www.schooleducation.kar.nic.inನಲ್ಲಿ ಪ್ರಕಟಿಸಲಾಗಿದೆ. ವೆಬ್‍ಸೈಟ್‍ನಲ್ಲಿನ ಮಾಹಿತಿಗಳನ್ನು ಓದಿ, ಅರ್ಜಿ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ವ್ಯವಸ್ಥಾಪಕ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಕಚೇರಿಗೆ ನಿಗಧಿತ ಅಂತಿಮ ದಿನಾಂಕದ ಒಳಗೆ ಸಲ್ಲಿಸಬೇಕು.

ಇದ್ದನ್ನೂ ಓದಿದ್ದೀರಾ? ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‌: ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗೆ ಕೇಂದ್ರೀಕೃತ ದಾಖಲಾತಿ ಘಟಕದ ದೂರವಾಣಿ ಸಂಖ್ಯೆ:080-22483140 ಮತ್ತು 080-22483145 ಹಾಗೂ ಮಂಗಳೂರು ಕೊಡಿಯಾಲ್‍ಬೈಲು ಜೈಲ್‍ ರಸ್ತೆಯಲ್ಲಿರುವ -2493052, ಮೊಬೈಲ್: 8747857070) ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಹಾಗೂ ಪದನಿಮಿತ್ತ ಉಪನಿರ್ದೇಶಕಿ ರಾಜಲಕ್ಷ್ಮೀ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...