ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

Date:

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ, ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು ಬಾಸೆಲ್ ಮಿಷನರಿಗಳು. ಕರಾವಳಿಗೆ ಒಂದು ಚಲನೆಯನ್ನು ಕೊಟ್ಟಿದ್ದು ಮಿಷನರಿಗಳು ಎಂದು ಹಿರಿಯ ಚಿಂತಕ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.

ಮಂಗಳೂರಿನಲ್ಲಿ ನಡೆಯುತ್ತಿರುವ ಡಿವೈಎಫ್‌ಐನ 12ನೇ ರಾಜ್ಯ ಸಮ್ಮೇಳನದ ಎರಡನೇಯ ದಿನ ನಡೆದ ʼಕರಾವಳಿ ಕಟ್ಟಿದ ಬಗೆʼ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಾರಂಪರಿಕತೆಯನ್ನು ಸಾರ್ವತ್ರಿಕಗೊಳಿಸಿದ ಕ್ರಾಂತಿ ಕರಾವಳಿಯಲ್ಲಿ ಮಿಷನರಿಗಳು ಮಾಡಿವೆ. ಈ ಮಿಷನರಿಗಳಿಗೆ ನಾವೆಲ್ಲರೂ ಆಭಾರಿಯಾಗಿರಬೇಕು ಎಂದರು.

ನಮ್ಮಲ್ಲಿರುವ ಮಠಗಳು ಸಾವಿರಾರು ವರ್ಷಗಳ ಹಿಂದಿನದ್ದು ಎಂದು ಹೇಳಲಾಗುತ್ತದೆ. ಆದರೆ, ನಮ್ಮ ಕರಾವಳಿಯಲ್ಲಿ ಮೊದಲ ಬಾರಿಗೆ ಮುದ್ರಣಾಲಯವನ್ನು ಈ ಮಠದವರು ಹಾಕಿದ್ದಾರಾ? ಅದಕ್ಕಾಗಿ ಮಿಷನರಿಗಳು ಬರಬೇಕಾಯಿತು. ಈ ನಿಟ್ಟಿನಲ್ಲಿ ನಾವು ಮಿಷನರಿಗಳ ಕೊಡುಗೆಯನ್ನು ನಾವು ಸ್ಮರಿಸಬೇಕು ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಕೋಮುವಾದ ಮಾಡುತ್ತೇನೆ, ಅದರಲ್ಲಿ ತಪ್ಪೇನಿಲ್ಲ, ಅದುವೇ ಸರಿ ಎನ್ನುವವರ ನಡುವೆ ಕೋಮುವಾದ ಮಾಡುವುದು ತಪ್ಪು ಎನ್ನುವ ಒಬ್ಬರು ಇದ್ದರೆ ಸಾಕು ಎಂದ ಬಿಳಿಮಲೆ ಅವರು, ಈ ಹಿಂದೆ ಬ್ರಾಹ್ಮಣರೇನು ಮತಾಂತರ ಆಗುತ್ತಿರಲಿಲ್ಲ. ಮತಾಂತರ ಆದವರು ಅಸ್ಪೃಶ್ಯರು, ಎಂಜಲು ತಿನ್ನುತ್ತಿದ್ದವರು, ಭಿಕ್ಷೆ ಬೇಡುತ್ತಿದ್ದವರು. ಆದರೆ, ಈಗ ಅವರು ಕೂಡಾ ತಮ್ಮ ಸ್ವ ಇಚ್ಛೆಯಿಂದ ಮತಾಂತರವಾಗಲು ಸಾಧ್ಯವಾಗದಂತಾಗಿದೆ ಎಂದರು.

ಈ ಹಿಂದೆ ಸಮಾಜಕ್ಕೆ ಕೊಡುಗೆ ನೀಡಿದವರು ಎಂದರೆ ಮಂಗಳೂರಿಗರು ಆಗಿದ್ದರು. ಆದರೆ, ಈಗ ಯಾವುದೇ ಜಿಲ್ಲೆ, ಪ್ರದೇಶದಲ್ಲಿ ಗಲಾಟೆ, ಗಲಭೆ ನಡೆದರೂ ಆ ಜಿಲ್ಲೆಯನ್ನು ʼಮಂಗಳೂರಿನಂತೆʼ ಎಂದು ಹೋಲಿಕೆ ಮಾಡಲಾಗುತ್ತದೆ. ಆ ಮಟ್ಟಿಗೆ ನಮ್ಮ ನಗರ ತಲುಪಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಒಂದು ಮೇಲ್ಸೇತುವೆ ನಿರ್ಮಾಣ ಮಾಡಲು ಮೂರು ಬಾರಿ ಗೆದ್ದು ಬಂದ ಎಂಪಿಗಳ ನಡುವೆ ನಾವು ಶ್ರೀನಿವಾಸ ಮಲ್ಯರ ಕೊಡುಗೆಯನ್ನು ನೆನೆಯಬೇಕು ಎಂದರು. ಜಾತಕವನ್ನು ಬರೆಯುವಾಗ ಇಂದಿಗೂ ಕೂಡಾ ಬ್ರಾಹ್ಮಣರೇತರಿಗೆ ವಿದ್ಯೆ ಇಲ್ಲ ಎಂದು ಬರೆಯಲಾಗುತ್ತದೆ. ನನಗೂ ಹಾಗೆಯೇ ಬರೆಯಲಾಗಿತ್ತು. ಆದರೆ, ಆ ಜ್ಯೋತಿಷಿ ಬರೆದ ಜಾತಕಕ್ಕೆ ಸಡ್ಡು ಹೊಡೆದವರು ನಮ್ಮ ತಾಯಿ. ನನಗೆ ತನ್ನ ಕಿವಿಯೋಲೆ ಅಡವಿಟ್ಟು ವಿದ್ಯೆ ನೀಡಿದರು. ಇಂದು ನಾನು ಪ್ರೊಫೆಸರ್ ಆಗಿ ಬೆಳೆದಿದ್ದೇನೆ ಎಂದರು.

ಕನ್ನಡ ಪರ ಹೋರಾಟಗಾರ ರಮೇಶ್ ಬೆಲ್ಲದಕೊಂಡ, ಡಿವೈಎಫ್‌ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ ಉಪಸ್ಥಿತರಿದ್ದರು. ಜಿಲ್ಲಾ ಮುಖಂಡ ಮನೋಜ್ ವಾಮಂಜೂರು ಕಾರ್ಯಕ್ರಮ ನಿರ್ವಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...