ಮಂಗಳೂರು | ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

Date:

ಪತ್ರಿಕೋದ್ಯಮದ ಹೃದಯ ಬಡಿತವೇ ನಿರ್ಭೀತ ವರದಿಗಾರಿಕೆ. ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಮಂಗಳೂರು ನಗರದ ಪ್ರೆಸ್‍ಕ್ಲಬ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಪತ್ರಕರ್ತ ವಿಜಯ ಕೋಟ್ಯಾನ್‍ ಅವರಿಗೆ ಪ್ರಸಕ್ತ ಸಾಲಿನ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ರಷ್ಯಾದ ಪತ್ರಕರ್ತೆಯಾಗಿದ್ದ ಅನ್ನಾ ಪೊಲಿಟ್ಕೋವಸ್ಕಾಯರ ನಿರ್ಭೀತ ವರದಿಗಾರಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಸುಧೀರ್ ಕುಮಾರ್ ರೆಡ್ಡಿ, ಭಾರತದಲ್ಲಿಯೂ ಅಂತಹ ಪತ್ರಕರ್ತರಿದ್ದಾರೆ. ತಾವು ಮಾಡುವ ಕೆಲಸದಲ್ಲಿ ನೈಜ ಉದ್ದೇಶ ಇದ್ದಾಗ ಧೈರ್ಯ ತಾನಾಗಿಯೇ ಬರುತ್ತದೆ. ಯಾವುದಕ್ಕೂ ಭಯ ಪಡುವ ಅಗತ್ಯ ಇರುವುದಿಲ್ಲ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 25 at 7.29.19 PM 1

ಬಹಳ ವರ್ಷಗಳ ಹಿಂದೆ ರುವಾಂಡದಲ್ಲಿ ನರಮೇಧ ನಡೆದಿತ್ತು. ಬಳಿಕ ಅಲ್ಲಿ ಸಮುದಾಯಗಳು ಪರಸ್ಪರ ಪ್ರತ್ಯೇಕಗೊಂಡಿದ್ದವು. ಒಬ್ಬರಿಗೊಬ್ಬರು ಮಾತುಕತೆಯೇ ಇರಲಿಲ್ಲ. ಆದರೆ ಅಲ್ಲಿನ ರೇಡಿಯೋ, ಮಾಧ್ಯಮ ಸುದ್ದಿಗಳು ಅಲ್ಲಿ ನಡೆಯುತ್ತಿದ್ದ ಒಳ್ಳೆಯತನವನ್ನು ಎತ್ತಿ ತೋರಿಸಿದವು. ನಿಧಾನಗತಿಯಲ್ಲಿ ಸಮುದಾಯಗಳ ನಡುವಿನ ಅನುಮಾನ ದೂರವಾಗಿ ಅಲ್ಲಿ ದುಷ್ಕರ್ಮಿಗಳನ್ನು ಬೇರ್ಪಡಿಸುವ ಕಾರ್ಯ ಆಗಿದೆ. ಅದೇ ಪ್ರಯತ್ನ ಇಲ್ಲಿಯೂ ಮಾಡಬಹುದು. ಆ ಧೈರ್ಯ, ಬದ್ಧತೆ ನಮಗೆ ಬೇಕಾಗಿದೆ ಎಂದು ಪೊಲೀಸ್ ಕಮಿಷನರ್ ಅಭಿಪ್ರಾಯಿಸಿದರು.

ಇಂತಹ ಪ್ರದೇಶದಲ್ಲಿ ನಾವು ಸಾಮಾನ್ಯವಾಗಿ ವರದಿಗಾರಿಕೆ ಮಾಡಬೇಕಾದರೆ ಏನು ಬೇಕು ಎಂಬುದನ್ನು ನಾವು ಅರಿಯಬೇಕು. ವರದಿಯನ್ನು ತಲುಪಿಸುವ ವೇಗಕ್ಕಿಂತ ನಿಖರತೆ ಮುಖ್ಯ. ಬಾಯಿಗೆ ಬಂದದ್ದನ್ನು ಹೇಳಿ ಬಿಟ್ಟು ಅದರಿಂದ ಇನ್ನೊಂದು ಅನ್ಯಾಯ ಆಗಲು ಅವಕಾಶ ನೀಡುವ ಬದಲು ಬರೆಯುವ ಸುದ್ದಿಯ ನಿಖರತೆ ಮುಖ್ಯವಾಗಿರುತ್ತದೆ ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ವಿಮಾನ ನಿಲ್ದಾಣದಲ್ಲಿ ಇರಾನ್‌ನ ಪುಟ್ಟ ಬಾಲಕನನ್ನು ಮೇಲಕ್ಕೆತ್ತಿ ನೆಲಕ್ಕೆ ಬಡಿದ ಯಹೂದಿ ವ್ಯಕ್ತಿ: ಸ್ಥಿತಿ ಗಂಭೀರ

ಯಾವುದೇ ಸಮಸ್ಯೆಗಳ ಸಂದರ್ಭ ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವುದಕ್ಕಿಂತಲೂ ಸತ್ಯವನ್ನು ಎತ್ತಿ ತೋರಿಸುವುದು ಪ್ರಮುಖವಾಗಬೇಕು. ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಆರೋಪಿ ಮತ್ತು ಸಂತ್ರಸ್ತರನ್ನು ಒಂದೇ ಆಗಿ ಪರಿಗಣಿಸಲಾಗದು. ಸತ್ಯದ ಬಗ್ಗೆ ಬರೆಯುವಾಗ ಸಮಸ್ಯೆ ಖಂಡಿತಾ ಬರುತ್ತದೆ. ಆದರೆ ಸತ್ಯ ಬರೆಯುವಾಗ ಯಾವುದೇ ರೀತಿಯ ಯಾವುದೇ ಭಯ ಬೇಡ. ಜತೆಗೆ ಸಹಾನುಭೂತಿ ಬರವಣಿಗೆಯಲ್ಲಿ ಇದ್ದಾಗ ಯಾರಿಗೂ ಸಮಸ್ಯೆ ಬರುವುದಿಲ್ಲ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪತ್ರಕರ್ತರಾದ ಪುಷ್ಪರಾಜ್, ಜಿತೇಂದ್ರ ಕುಂದೇಶ್ವರ ಮತ್ತಿತತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...