ಮಂಗಳೂರು | ಡಿಸೆಂಬರ್ 21ರಿಂದ ಜನವರಿ 19 ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’

Date:

“ಡಿಸೆಂಬರ್ 21ರಿಂದ ಜನವರಿ 19ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’ವನ್ನು ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರಾವಳಿಯ ರಾಜಕೀಯ ಮುಖಂಡರೊಂದಿಗೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರಾವಳಿಯ ನೈಜ ಸಂಸ್ಕೃತಿಯ ಅನಾವರಣ, ಸಂಪ್ರದಾಯಗಳ ಪ್ರದರ್ಶನ, ಆಹಾರ ಖಾದ್ಯಗಳ ಪರಿಚಯ, ವಿವಿಧ ವಿನೋದಾವಳಿಗಳೊಂದಿಗೆ ನಮ್ಮ ಧೀಮಂತ ಸಾಂಸ್ಕೃತಿಕ ಪರಂಪರೆಯ ಆಸ್ವಾದನೆ ಇರಲಿದೆ. ಇವೆಲ್ಲವೂ ಒಂದೇ ಜಾಗದಲ್ಲಿ ತುಳುನಾಡಿನ ಜನತೆಗೆ ಲಭ್ಯವಾಗಲಿವೆ. ಕೆಲವು ವರ್ಷಗಳ ಬಳಿಕ ಇದೇ ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ಮತ್ತೊಮ್ಮೆ ‘ಕರಾವಳಿ ಉತ್ಸವ’ ಮೈದಳೆಯಲಿದೆ. ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿರುವ ಉತ್ಸವದಲ್ಲಿ ಕರಾವಳಿಯ ವೈವಿಧ್ಯತೆಗಳು ಸಾರ್ವಜನಿಕರನ್ನು ರಂಜಿಸಲಿವೆ” ಎಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 21ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಸಂಜೆ 4 ಗಂಟೆಗೆ ಕೊಡಿಯಾಲ್ ಬೈಲ್‌ನ ಕೆನರಾ ಕಾಲೇಜಿನಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ.

ಕರಾವಳಿ 1

ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಕಲಾವಿದರ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಸಂಜೆ 5.30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಈ ಬಾರಿಯ ಕರಾವಳಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಡಿಸೆಂಬರ್ 21 ಮತ್ತು 22 ರಂದು ವಿದ್ಯುದ್ದೀಪಗಳಿಂದ ಅಲಂಕೃತವಾದ ವೇದಿಕೆಯಲ್ಲಿ ಪ್ರಸಿದ್ಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ.

“ಜಾಗತಿಕ ಹಳ್ಳಿ” (Global Village) ಎಂಬ ಧ್ಯೇಯದೊಂದಿಗೆ ವಸ್ತು ಪ್ರದರ್ಶನ

ವಸ್ತು ಪ್ರದರ್ಶನವು “ಜಾಗತಿಕ ಹಳ್ಳಿ” (Global Village) ಎಂಬ ಧ್ಯೇಯದೊಂದಿಗೆ ಕರಾವಳಿಯ ನೈಜ ಸಂಸ್ಕೃತಿ, ಸಂಪ್ರದಾಯ, ಸಾಹಿತ್ಯ, ಉಡುಗೆ ತೊಡುಗೆ ಮತ್ತು ಖಾದ್ಯಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. ವಿವಿಧ ಜನಾಂಗದ ರೀತಿ ರಿವಾಜುಗಳನ್ನು ಪರಿಚಯಿಸಲು ಪ್ರತ್ಯೇಕ ವಿಭಾಗಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇಲ್ಲಿ ಕೈಮಗ್ಗ, ನೇಕಾರ, ಕುಂಬಾರ, ಕರಕುಶಲ ವಸ್ತುಗಳ ತಯಾರಿಕೆ ಮತ್ತು ಇನ್ನಿತರ ಕೌಶಲ್ಯಗಳ ಅನಾವರಣವಾಗಲಿದೆ. ಆದಿವಾಸಿ ಮತ್ತು ಗುಡ್ಡಗಾಡು ಜನಾಂಗದ ಸಾಂಪ್ರದಾಯಿಕ ಉತ್ಪನ್ನಗಳ ಸಹ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಆಹಾರ ಮೇಳ

ಕರಾವಳಿಯು ತನ್ನದೇ ಆದ ವಿಶಿಷ್ಟ ಆಹಾರ ಪದ್ದತಿಯನ್ನು ಹೊಂದಿದೆ. ವೈವಿಧ್ಯಮಯ ಖಾದ್ಯಗಳ ತಯಾರಿಕೆ. ಪ್ರದರ್ಶನ ಮತ್ತು ಮಾರಾಟಗಳನ್ನು ಒಂದೇ ಸೂರಿನಡಿ ಏರ್ಪಡಿಸಲಾಗಿದ್ದು, ತುಳು ನಾಡಿನ ತಿಂಡಿ ತಿನಿಸುಗಳನ್ನು ಪರಿಚಯ ಮಾಡಿಕೊಳ್ಳಲು ಮತ್ತು ಸವಿಯಲು ಸಾರ್ವಜನಿಕರಿಗೆ ಇದೊಂದು ಅಪರೂಪದ ಅವಕಾಶವಾಗಿದೆ.

ವಾಣಿಜ್ಯ ಮಳಿಗೆ

ಆಹಾರ ಉತ್ಪನ್ನಗಳು ಮಾತ್ರವಲ್ಲದೆ, ಉಡುಗೆ ತೊಡುಗೆಗಳು ಮತ್ತು ವಿವಿಧ ವಾಣಿಜ್ಯ ಮಳಿಗೆಗಳಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ವಿವಿಧ ವಿನೋದಾವಳಿಗಳು ಎಲ್ಲ ವಯಸ್ಸಿನವರೆಗೂ ಮನೋರಂಜನೆ ನೀಡಲಿವೆ.

ಕರಾವಳಿ1

ಬೀಚ್ ಉತ್ಸವ

ಡಿಸೆಂಬರ್ 28 ಮತ್ತು 29ರಂದು ತಣ್ಣೀರು ಬಾವಿ ಬೀಚ್‌ನಲ್ಲಿ ಬೀಚ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಸಂಜೆ 6 ಗಂಟೆಗೆ ಬೀಚ್ ಉತ್ಸವ ಉದ್ಘಾಟನೆಗೊಳ್ಳಲಿದೆ. ಸಂಜೆ 6.30 ರಿಂದ ವಿವಿಧ ತಂಡಗಳ ನೃತ್ಯ ಪ್ರದರ್ಶನಗಳು ನಡೆಯಲಿವೆ. ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕರು ಮತ್ತು ಗಾಯಕರಾಗಿರುವ ಶ್ರೀಯುತ ರಘು ದೀಕ್ಷಿತ್ ಅವರ ತಂಡದ ಕಾರ್ಯಕ್ರಮ ಎಂಟು ಗಂಟೆಗೆ ಪ್ರಾರಂಭವಾಗಲಿದ್ದು, ಸಾರ್ವಜನಿಕರನ್ನು ರಂಜಿಸಲಿದೆ.

ಡಿಸೆಂಬರ್ 29ರ ಭಾನುವಾರದಂದು ಬೆಳಗ್ಗೆ 5:30ಕ್ಕೆ ಯೋಗ, 6:30ಕ್ಕೆ ಜುಂಬ (ಏರೋನಾಟಿಕ್ಸ್) ಮತ್ತು 9 ಗಂಟೆಯಿಂದ ಬೀಚ್ ಸ್ಪೋರ್ಟ್ಸ್ ಮುಂತಾದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಸಂಜೆ 5:30ಕ್ಕೆ ಆನೈನ್ ಸ್ಪರ್ಧೆ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ ಮತ್ತು ರಾತ್ರಿ 8 ಗಂಟೆಗೆ ಶೋರ್ ಬ್ಯಾಂಡ್ ಪ್ರದರ್ಶನಗಳು ನಡೆಯಲಿವೆ.

WhatsApp Image 2024 12 18 at 10.49.44 AM
ಕರಾವಳಿ ಉತ್ಸವದ ಲೋಗೋ

ಇತರೆ ವೈಶಿಷ್ಟ್ಯಗಳು:

ಜನವರಿ 4 ಮತ್ತು 5 ರಂದು ಕದ್ರಿ ಪಾರ್ಕ್ ನಲ್ಲಿ ಆಟೋಮೊಬೈಲ್ ಮತ್ತು ಶ್ರಾನ ಪ್ರದರ್ಶನ ನಡೆಯಲಿದೆ. ಜನವರಿ 11 ಮತ್ತು 12 ರಂದು ಕದ್ರಿ ಪಾರ್ಕ್ ನಲ್ಲಿ ಯುವ ಉತ್ಸವ ನಡೆಯಲಿದೆ. ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಬೀಚ್‌ನಲ್ಲಿ ಸುಪ್ರಸಿದ್ದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ.

ಜಿಲ್ಲಾಡಳಿತದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವುಗಳ ಸಹಕಾರದಿಂದ ಆಕರ್ಷಕವಾಗಿ ಕರಾವಳಿ ಉತ್ಸವವನ್ನು ನಡೆಸಲು ರೂಪುರೇಷೆಗಳನ್ನು ಹಾಕಿಕೊಳ್ಳಲಾಗಿದೆ. ತುಳುನಾಡಿನ ಜನತೆ ಮತ್ತು ಪ್ರವಾಸಿಗರು ಕುಟುಂಬ ಸಹಿತ ಆಗಮಿಸಿ ಈ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸ್ಪೀಕರ್ ಯು ಟಿ ಖಾದರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...