ಮಂಗಳೂರು | ಅಂಬೇಡ್ಕರ್ ಹಾದಿಯಲ್ಲಿ ನಡೆದರೆ ಉತ್ತಮ ಜೀವನ: ಭರತ್ ಶೆಟ್ಟಿ

Date:

ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಶಿಕ್ಷಣದೊಂದಿಗೆ ಬಾಬಾ ಸಾಹೇಬರ ಹಾದಿಯಲ್ಲಿ ನಡೆಯಬೇಕು. ಅವರ ಹೆಸರಿನಲ್ಲಿ ನಿರ್ಮಾಣವಾದ ಈ ಭವನದಲ್ಲಿ ಶಿಕ್ಷಣ, ಉದ್ಯೋಗ, ಮತ್ತಿತರ ತರಬೇತಿಗಳು ದೊರಕಲಿ. ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಪ್ರಯೋಜನವಾಗಲಿ” ಎಂದು ಆಶಿಸಿದರು. ಭವನದ ನಿರ್ಮಾಣ ಪೂರ್ಣಗೊಳಿಸಲು ಬೇಕಾದ ಕ್ರಮ ಕೈಗೊಂಡ ಮೇಯರ್ ಮನೋಜ್ ಕುಮಾರ್ ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮೇಯರ್ ಮನೋಜ್ ಕುಮಾರ್, “ಈ ಸಮುದಾಯ ಭವನ ನಿರ್ಮಾಣಕ್ಕೆ ಹಲವು ಅಡ್ಡಿ ಆತಂಕ ಎದುರಾಗಿತ್ತು. ನಾನು ಪಾಲಿಕೆ ಸದಸ್ಯನಾದ ಬಳಿಕ ಪೂರ್ಣಗೊಳಿಸಲು ಮುಂದಾದೆ. ಆದರೆ ಕೊರೊನಾ ಅಡಚಣೆ ಜೊತೆಗೆ ಆರ್ಥಿಕ ಸಮಸ್ಯೆ ಎದುರಾಗಿತ್ತು. ತಾಂತ್ರಿಕ ಕಾರಣದಿಂದ ಸಮಾಜ ಕಲ್ಯಾಣ ಇಲಾಖೆಯಿಂದಲೂ ಅನುದಾನ ಸಿಗಲಿಲ್ಲ. ಕೊನೆಗೆ ಪಾಲಿಕೆ ಸಾಮಾನ್ಯ ನಿಧಿ ಹಾಗೂ ಮೀಸಲು ನಿಧಿಯಿಂದ ಹಣ ಒದಗಿಸಿ ಭವನ ಪೂರ್ಣಗೊಳಿಸಿದ್ದೇನೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೂ ಹಾಗೂ ಇತರರಿಗೂ ಈ ಸಮಾಜ ಭವನದಲ್ಲಿ ಕಡಿಮೆ ಶುಲ್ಕದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗುವುದು. ಇದರಿಂದ ಪಾಲಿಕೆಗೂ ಆದಾಯ ಬರುವಂತಾಗುತ್ತದೆ. ಸಮಾಜಮುಖಿ ಚಟುವಟಿಕೆಗೆ ಈ ಭವನ ಸದುಪಯೋಗವಾಗಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಸುರತ್ಕಲ್‌ನ ಐಎನ್‌ಸಿಯುಬಿ8: ಪ್ರಮುಖ ಉದ್ಯಮಶೀಲತಾ ಉತ್ಸವಕ್ಕೆ ಚಾಲನೆ

ಈ ವೇಳೆ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಯಲಕ್ಷ್ಮಿ, ಕಿರಣ್ ಕುಮಾರ್ ಕೋಡಿಕಲ್, ಎಸ್ಎಸ್‌ಡಿಪಿ ಮಂದಿರದ ಸಂಚಾಲಕರಾದ ಪುರುಷೋತ್ತಮ್ ಪೂಜಾರಿ, ಮುಂಡಲ ಯುವ ವೇದಿಕೆಯ ಪ್ರದೀಪ್ ಕಾಪಿಕಾಡ್, ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿಯ ಚಂದ್ರಕುಮಾರ್, ಡಾ. ಬಿ ಆರ್ ಅಂಬೇಡ್ಕರ್ ಸೇವಾ ಸಮಿತಿಯ ಚಂದ್ರಹಾಸ್ ಮತ್ತು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...