ಮಂಗಳೂರು | ವೆನ್ಲಾಕ್ ಆಸ್ಪತ್ರೆಯ ಕಾರುಣ್ಯ ಯೋಜನೆಗೆ ನೆರವು ನೀಡಿದ ಉದ್ಯಮಿ ರೊನಾಲ್ಡ್ ಮಾರ್ಟಿಸ್

Date:

ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬಾಯಿಯ ಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು.

ಮಂಗಳೂರು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಲ್ಲಿ ನಿರಂತರ ಎಂಟು ವರ್ಷಗಳಿಂದ ಊಟ ನೀಡುತ್ತಿರುವುದು ಮತ್ತು ಲೇಡಿಗೋಷನ್ ಆಸ್ಪತ್ರೆಗೂ ವಿಸ್ತರಿಸಿರುವುದು ಸಣ್ಣ ವಿಷಯವಲ್ಲ. ಇದು ಇಡೀ ರಾಜ್ಯಕ್ಕೆ ವಿಸ್ತರಿಸುವಂತಾಗಲಿ. ರೋಗಿಗಳಿಗೆ ಬಟ್ಟೆಯ ವ್ಯವಸ್ಥೆ ಕೂಡಾ ಮಾಡಿರುವುದು ದೇವರು ಮೆಚ್ಚುವ ಕೆಲಸ. ಇದಕ್ಕೆ ದೇವರು ದುಪ್ಪಟ್ಟು ಪ್ರತಿಫಲ ಕೊಡುತ್ತಾನೆ. ನಾನು ಎರಡು ವರ್ಷದಿಂದ ಎಂಫ್ರೆಂಡ್ಸ್ ಜತೆಗಿದ್ದು, ಮುಂದೆಯೂ ಇರುತ್ತೇನೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಫ್ರೆಂಡ್ಸ್ ಟ್ರಸ್ಟ್‌ನ ಅಧ್ಯಕ್ಷರಾದ ಝಕರಿಯಾ ಜೋಕಟ್ಟೆ ಅಧ್ಯಕ್ಷತೆ ವಹಿಸಿ, ರೊನಾಲ್ಡ್ ಮಾರ್ಟಿಸ್ ಅವರನ್ನು ಗೌರವಿಸಿ, ದಾನ ಮಾಡಿದವರು ಎಂದೂ ಸೋತಿಲ್ಲ. ಯಾರೂ ಆಸ್ಪತ್ರೆಗೆ ಬರುವ ಪರಿಸ್ಥಿತಿ ಬರಬಾರದು. ಬಂದವರು ಶೀಘ್ರ ಗುಣಮುಖರಾಗಿ ಹೋಗಬೇಕು. ಹಸಿದವರಿಗೆ ಊಟ ನೀಡುವ ಯೋಜನೆಗೆ ಎಲ್ಲರ ಸಹಕಾರ ಅಗತ್ಯ ಎಂದರು.

ಎಂಫ್ರೆಂಡ್ಸ್‌ನ ಅನಿವಾಸಿ ಭಾರತೀಯ ಟ್ರಸ್ಟಿಗಳಾದ ಅಬ್ದುಲ್ಲಾ ಮೋನು ಕತಾರ್, ಅಶ್ರಫ್ ಅಬ್ಬಾಸ್, ಅಮೀರ್ ಅಬ್ಬಾಸ್, ಹಾರಿಸ್ ಕಾನತ್ತಡ್ಕ, ಮುಹಮ್ಮದ್ ಕುಕ್ಕುವಳ್ಳಿ, ದುಬಾಯಿಯ ಉದ್ಯಮಿ ಹಾಫಿಝ್ ಅಹ್ಮದ್ ಸಾಬಿತ್ ಇನ್‌ಸ್ಪೈರ್ ಉಪಸ್ಥಿತರಿದ್ದರು.

ಎಂಫ್ರೆಂಡ್ಸ್ ಕಾರ್ಯಾಧ್ಯಕ್ಷ ಸುಜಾಹ್ ಮೊಹಮ್ಮದ್ ಸ್ವಾಗತಿಸಿದರು. ಸ್ಥಾಪಕ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಕಾರುಣ್ಯ ಯೋಜನೆ ಮುಖ್ಯಸ್ಥ ಮೊಹಮ್ಮದ್ ಹನೀಫ್ ಗೋಳ್ತಮಜಲು ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...